ಡಾ.ಪ್ರಿಯಾ ಶರತ್ಗೆ ಜಾಗತಿಕ ಗೌರವ
Team Udayavani, Aug 31, 2019, 3:00 AM IST
ಬೆಂಗಳೂರು: ಕೆನಡಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ಸೌಂದರ್ಯ ಮೇಳ-2019ರಲ್ಲಿ ಮಂಗಳೂರು ಮೂಲದ ಡಾ. ಕೆ.ಎಸ್. ಪ್ರಿಯಾ ಶರತ್ ರನ್ನರ್ ಅಪ್ ವಿಜೇತರಾಗಿ ಸಾಧನೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಐಎಫ್ಎಸ್ ನಿವೃತ್ತ ಅಧಿಕಾರಿ ಕೆ.ಸುಂದರ್ ಮಾತನಾಡಿ, ಡಾ.ಪ್ರಿಯಾ ಶರತ್ ಬೆಂಗಳೂರಿನಲ್ಲಿ ಚರ್ಮರೋಗ ಹಾಗೂ ಸೌಂದರ್ಯ ಚಿಕಿತ್ಸಾ ತಜ್ಞರಾಗಿ ಕೆಲಸ ಮಾಡುತ್ತಿದ್ದು, ವಿಶ್ವದಾದ್ಯಂತ ವಿವಿಧ ರಾಷ್ಟ್ರಗಳಿಂದ ಮಹಿಳಾ ಪ್ರತಿನಿಧಿಗಳು ಭಾಗವಹಿಸಿದ್ದ ಸೌಂದರ್ಯ ಸ್ಪರ್ಧೆಯಲ್ಲಿ ರನ್ನರ್ ಅಪ್ ವಿಜೇತರಾಗಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಇದಕ್ಕೂ ಮೊದಲು ಪ್ರಿಯಾ ಅವರು ವಿಶ್ವಸಂಸ್ಥೆ ನೀಡುವ ಅಂತಾರಾಷ್ಟ್ರೀಯ ಮಿಸೆಸ್ ಇಂಡಿಯಾ ಪ್ರಶಸ್ತಿ ಹಾಗೂ ಮಿಸೆಸ್ ಇಂಡಿಯಾ ಗ್ಯಾಲಕ್ಸಿ-2018 ಪ್ರಶಸ್ತಿಗೂ ಭಾಜನರಾಗಿದ್ದರು. ಈಗ ವಿಶ್ವಮಟ್ಟದ ಸ್ಪರ್ಧೆಯಲ್ಲಿ ರನ್ನರ್ ಅಪ್ ವಿಜೇತರಾಗಿ ಹೊಸ ದಾಖಲೆ ಮಾಡಿದ್ದಾರೆಂದು ತಿಳಿಸಿದರು. ಡಾ. ಕೆ.ಎಸ್. ಪ್ರಿಯಾ ಶರತ್ ಬೆಂಗಳೂರಿನ ಬಸವೇಶ್ವರನಗರದಲ್ಲಿರುವ ಡಮಾರ್ ಹೀಲ್ನ ವ್ಯವಸ್ಥಾಪಕ ನಿರ್ದೇಶಕರಾಗಿದ್ದು,
ಬಡವರು, ಗ್ರಾಮೀಣ ಜನರಿಗೆ ಆಗಾಗ್ಗೆ ಆರೋಗ್ಯ ತಪಾಸಣಾ ಶಿಬಿರ ಹಾಗೂ ಆರೋಗ್ಯ ಜಾಗೃತಿ ಮೂಲಕ ಸಾಮಾಜಿಕ ಕಾರ್ಯದಲ್ಲೂ ತೊಡಗಿಸಿ ಕೊಂಡಿದ್ದಾರೆ. ಈಗ ಜಾಗತಿಕ ಮಟ್ಟದ ಸ್ಪರ್ಧೆಯಲ್ಲಿ ರನ್ನರ್ ಅಪ್ ವಿಜೇತರಾದ ಬಳಿಕ ತಮ್ಮ ಸಾಮಾಜಿಕ ಸೇವೆಯನ್ನು ಇನ್ನಷ್ಟು ವಿಸ್ತರಿಸಲು ಯೋಚಿಸಿದ್ದಾರೆ. ಅದರಲ್ಲಿ ಮುಖ್ಯ ವಾಗಿ ಆಸಿಡ್ ದಾಳಿಗೆ ತುತ್ತಾದ ಸಂತ್ರಸ್ತ ಹೆಣ್ಣು ಮಕ್ಕಳಿಗೆ ಗುಣಮಟ್ಟದ ಚಿಕಿತ್ಸೆ ಜೊತೆಗೆ ಅವರಿಗೆ ಪುನರ್ವಸತಿ ಕಲ್ಪಿಸಬೇಕೆಂಬ ಉದ್ದೇಶ ಹೊಂದಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್ ಇನ್ನಿಲ್ಲ
8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್ಐಟಿ? ಇನ್ನಷ್ಟು ಎಫ್ಐಆರ್ ಸಾಧ್ಯತೆ
ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್ ಕಾರಿಡಾರ್!
BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ
Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ
ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ
Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…