ಬೈಂದೂರು ಮೆಸ್ಕಾಂ: ಶಾಕ್‌ ಹೊಡೆಯುತ್ತಿದೆ ವಿದ್ಯುತ್‌ ಬಿಲ್‌ಗ‌ಳು

ಆನ್‌ಲೈನ್‌ ತಂದ ಅವಾಂತರ

Team Udayavani, Aug 31, 2019, 5:01 AM IST

MESCOM

ಬೈಂದೂರು: ಮಳೆಗಾಲದಲ್ಲಿ ಅಲ್ಲಲ್ಲಿ ವಿದ್ಯುತ್‌ ತಂತಿ ತಗಲಿ ಶಾಕ್‌ ಹೊಡೆಯುವುದು ಸಾಮಾನ್ಯ. ಆದರೆ ಬೈಂದೂರು ವ್ಯಾಪ್ತಿಯ ಮೆಸ್ಕಾಂ ಗ್ರಾಹಕರಿಗೆ ಈ ತಿಂಗಳಲ್ಲಿ ಬಿಲ್‌ ನೋಡಿ ಶಾಕ್‌ ಹೊಡೆದಂತಾಗಿದೆ. ಪ್ರತಿ ತಿಂಗಳು ನೂರಿನ್ನೂರು ರೂಪಾಯಿ ಪಾವತಿಸುತ್ತಿರುವ ವಿದ್ಯುತ್‌ ಗ್ರಾಹಕರಿಗೆ ಈ ಬಾರಿ ದುಪ್ಪಟ್ಟು ಬಿಲ್‌ ಬಂದಿದೆ. ಮಾತ್ರವಲ್ಲದೆ ಕೆಲವು ಗ್ರಾಹಕರಿಗೆ ಸಾವಿರಾರು ರೂಪಾಯಿ ಬಿಲ್‌ ಕಳುಹಿಸುವ ಮೂಲಕ ಮೆಸ್ಕಾಂ ಆಘಾತ ಮೂಡಿಸಿದೆ.

ಕಾರಣಗಳೇನು
ಮೆಸ್ಕಾಂ ಇಲಾಖೆ ಒಂದಿಲ್ಲೊಂದು ವಿಷಯಗಳಿಂದ ಸದಾ ಸುದ್ದಿಯಾಗುತ್ತಲೆ ಇದೆ. ಮಳೆ-ಗಾಳಿಯಿಂದ ನಷ್ಟ ಉಂಟಾಗಿರುವುದು ಒಂದೆಡೆಯಾದರೆ ಮಳೆ ಗಾಲದ ವಿದ್ಯುತ್‌ ವ್ಯತ್ಯಯದಿಂದ ಗ್ರಾಹಕರ ಅಸಮಾಧಾನಕ್ಕೆ ಗುರಿಯಾಗಬೇಕಾಗಿರುವುದು ಇನ್ನೊಂದೆಡೆಯಾಗಿದೆ. ಬೈಂದೂರು ವ್ಯಾಪ್ತಿಯಲ್ಲಿ ಒಟ್ಟು 40 ಸಾವಿರ ಮನೆಗಳಿಗೆ ವಿದ್ಯುತ್‌ ಸಂಪರ್ಕ ನೀಡಲಾಗಿದೆ. ಕೆಲವು ಮನೆಗಳಲ್ಲಿ ಹಳೆಯ ಮೀಟರ್‌ ಅಳವಡಿಸಿರುವುದು, ಬಿಲ್‌ ಸರಿಯಾಗಿ ಬಾರದಿರುವ ಉದ್ದೇಶದಿಂದ ಬಿಲ್‌ ವ್ಯವಸ್ಥೆ ಸುಧಾರಿಸಲಾಗಿದೆ. ಈ ಸಂದರ್ಭದಲ್ಲಿ ಕಳೆದ ಮೂರು ತಿಂಗಳುಗಳಿಂದ ಬಿಲ್‌ ಸಂಗ್ರಾಹಕರು ಆಯಾಯ ಮನೆಗಳಿಗೆ ಅಪ್‌ಡೆಟ್‌ ಆಗದ ಕಾರಣ ಗ್ರಾಹಕರಿಗೆ ಅಂದಾಜು ಬಿಲ್‌ ನೀಡಿದ್ದರು.

ಅದೇ ಪ್ರಕಾರ ಗ್ರಾಹಕರು ಕೂಡ ಬಿಲ್‌ ಮೊತ್ತವನ್ನು ಇಲಾಖೆಗೆ ಪಾವತಿಸಿದ್ದಾರೆ. ಈ ತಿಂಗಳಲ್ಲಿ ಮೆಸ್ಕಾಂ ಆನ್‌ಲೈನ್‌ ವ್ಯವಸ್ಥೆ ಮಾಡಿದೆ. ಜತೆಗೆ ಡಿಜಿಟಲ್‌ ಮೀಟರ್‌ ಅಪ್‌ಡೇಟ್‌ ಆಗದ ಕಾರಣ ರೀಡಿಂಗ್‌ ವ್ಯತ್ಯಯ ಉಂಟಾಗಿ ಒಂದು ತಿಂಗಳ ಬಿಲ್‌ಗೆ ಮೂರು ತಿಂಗಳ ಬಿಲ್‌ ಸೇರಿಸಿ ಬಂದಿದೆ. ಹೀಗಾಗಿ ಬಿಲ್‌ ಮೊತ್ತದಲ್ಲಿ ಭಾರೀ ಬದಲಾವಣೆ ಕಂಡು ಗ್ರಾಹಕರಿಗೆ ಗಲಿಬಿಲಿ ಉಂಟಾಗಿದೆ.

ಬೈಂದೂರು ಮೆಸ್ಕಾಂ ಕಚೇರಿಯಲ್ಲಿ ಮೀಟರ್‌ ಬಿಲ್ಲಿಂಗ್‌, ಮಾಹಿತಿಗಾಗಿ ಕಚೇರಿ ವ್ಯವಸ್ಥೆಯನ್ನು ಸುಧಾ ರಿಸಲಾಗಿದೆ. ಗ್ರಾಹಕರಿಗೆ ಸಮಾಧಾನದಿಂದ ಮನದಟ್ಟು ಮಾಡುವ ಮೂಲಕ ಸಮಸ್ಯೆ ಸರಿಪಡಿಸಲಾಗುತ್ತಿದೆ. ಮಾತ್ರವಲ್ಲದೆ ಮೀಟರ್‌ ಸಮಸ್ಯೆ ಇರುವವರಿಗೆ ಅರ್ಜಿ ಪಡೆದು ಸರಿಪಡಿಸಿಕೊಡಲಾಗುತ್ತಿದೆ.

ಆತಂಕ ಬೇಡ
ಈ ತಿಂಗಳಲ್ಲಿ ಬಿಲ್‌ ವ್ಯತ್ಯಯದ ಹಲವು ದೂರುಗಳು ಗ್ರಾಹಕರಿಂದ ಬಂದಿದೆ. ಡಿಜಿಟಲ್‌ ಮೀಟರ್‌ ಅಳವಡಿಕೆ ಹಾಗೂ ಆನ್‌ಲೈನ್‌ ವ್ಯವಸ್ಥೆ ಏಕಕಾಲದಲ್ಲಿ ಜಾರಿಯಾದ ಕಾರಣ ಸ್ವಲ್ಪ ಮಟ್ಟಿನ ಗೊಂದಲ ವಾಗಿದೆ. ಆದರೆ ಗ್ರಾಹಕರು ಆತಂಕಪಡುವ ಆವಶ್ಯಕತೆಯಿಲ್ಲ. ಬಳಕೆ ಮಾಡಿದ ಯುನಿಟ್‌ಗಳಿಗೆ ಮಾತ್ರ ಹಣ ಪಾವತಿಯಾಗುತ್ತದೆ. ಹೆಚ್ಚಿಗೆ ಹಣ ಪಾವತಿಸಿದರೆ ಅವರ ಖಾತೆಯಲ್ಲಿರುತ್ತದೆ.ಈಗಾಗಲೇ ಬಹುತೇಕ ಸಮಸ್ಯೆಗಳು ಇತ್ಯರ್ಥವಾಗಿವೆ.
-ಎಂ. ಭಾಸ್ಕರ್‌, ಸಹಾಯಕ ಲೆಕ್ಕಾಧಿಕಾರಿ, ಬೈಂದೂರು ಮೆಸ್ಕಾಂ

ಅರುಣ್‌ ಕುಮಾರ್‌ ಶಿರೂರು

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.