ಇದ್ದೂ ಇಲ್ಲದಂತಿರುವ ಶ್ರದ್ಧಾಂಜಲಿ,ಮುಕ್ತಿ ಆ್ಯಂಬುಲೆನ್ಸ್‌

ಮೃತದೇಹ ಸಾಗಿಸಲು ಖಾಸಗಿ ವಾಹನದ ಮೊರೆ ಹೋಗುವ ಸಾರ್ವಜನಿಕರು!

Team Udayavani, Aug 31, 2019, 5:56 AM IST

MANG-As

ಮಹಾನಗರ: ಬಡ ಜನರಿಗೆ ನೆರವಾಗುವ ನಿಟ್ಟಿನಲ್ಲಿ ಸರಕಾರಿ ಆಸ್ಪತ್ರೆಗೆ ನೀಡಲಾಗಿದ್ದ ಶ್ರದ್ಧಾಂಜಲಿ ಆ್ಯಂಬುಲೆನ್ಸ್‌ ಜನರ ಬಳಕೆಗೆ ಸಿಗದೆ ಧೂಳು ಹಿಡಿಯುತ್ತಿದೆ.

ವೆನಾÉಕ್‌ ಆಸ್ಪತ್ರೆಯ ಶವಗಳನ್ನು ಉಚಿತವಾಗಿ ಮನೆಗೆ ತಲುಪಿಸುವ ಉದ್ದೇಶದಿಂದ ಯು.ಟಿ. ಖಾದರ್‌ ಅವರು ಆರೋಗ್ಯ ಸಚಿವರಾಗಿದ್ದಾಗ ವಿಶೇಷ ಕಾಳಜಿ ವಹಿಸಿ ಯು.ಟಿ. ಫರೀದ್‌ ಫೌಂಡೇಶನ್‌ ವತಿಯಿಂದ ಈ ವಾಹನವನ್ನು ಆಸ್ಪತ್ರೆಗೆ ನೀಡಿದ್ದರು. ಆದರೆ ವಾಹನವನ್ನು ಓಡಿಸಲು ಆರೋಗ್ಯ ಇಲಾಖೆಯ ಬಳಿ ಯಾವುದೇ ಅನುದಾನ ಇಲ್ಲ ಎಂಬ ಕಾರಣ ನೀಡಿ ಆ್ಯಂಬುಲೆನ್ಸ್‌ ಮೂಲೆಗೆ ಬಿದ್ದಿದೆ. ಸಾಮಾನ್ಯವಾಗಿ ಆ್ಯಂಬುಲೆನ್ಸ್‌ ಗಳಲ್ಲಿ ಮೃತದೇಹಗಳನ್ನು ಸಾಗಿಸಲಾಗುವುದಿಲ್ಲ. ಆದ್ದರಿಂದ ಮೃತರ ಸಂಬಂಧಿಕರು ಮೃತದೇಹ ಸಾಗಿಸಲು ಖಾಸಗಿ ಆ್ಯಂಬುಲೆನ್ಸ್‌ಗಳಿಗೆ ಮೊರೆ ಹೋಗಬೇಕಾಗಿತ್ತು. ಆದರೆ ಅದಕ್ಕೆ ದುಬಾರಿ ಬೆಲೆ ನೀಡಬೇಕಾಗಿರುವುದರಿಂದ ಬಡವರು ಸಂಕಷ್ಟಕ್ಕೆ ಒಳಗಾಗ ಬೇಕಿತ್ತು. ಹಾಗಾಗಿ ಯು.ಟಿ. ಖಾದರ್‌ ಆರೋಗ್ಯ ಸಚಿವರಾಗಿದ್ದಾಗ ಶ್ರದ್ಧಾಂಜಲಿ ಆ್ಯಂಬುಲೆನ್ಸ್‌ ವಾಹನದ ಯೋಜನೆ ರೂಪಿಸಿದ್ದರು. ಆದರೆ ಈಗ ಅದು ಸಮರ್ಪಕವಾಗಿ ಜಾರಿಗೆ ಬಾರದೆ ಸಾರ್ವಜನಿಕರು ಸಂಕಷ್ಟಕ್ಕೊಳಗಾಗಿದ್ದಾರೆ.

ಪಾಲಿಕೆ ಆ್ಯಂಬುಲೆನ್ಸ್‌ಗೆ ಇಲ್ಲ ಮುಕ್ತಿ
ಮನಪಾ ವತಿಯಿಂದ ಬಡ ಜನರಿಗೆ ಮೃತದೇಹ ಸಾಗಿಸಲು ಸಹಾಯವಾಗಲಿ ಎಂಬ ದೃಷ್ಟಿಯಿಂದ 2017ರಲ್ಲಿ ಒಂದು ಆ್ಯಂಬುಲೈನ್ಸ್‌ ತರಿಸಿ ಅದಕ್ಕೆ ಮುಕ್ತಿ ಆ್ಯಂಬುಲೆನ್ಸ್‌ ಎಂದು ಹೆಸರಿಡಲಾಯಿತು. ಅದಕ್ಕೆ ಪ್ರತಿ ತಿಂಗಳು 40,500 ರೂ. ಕೊಡುವುದು, ಅದರಲ್ಲಿ ಚಾಲಕನ ಸಂಬಳ, ಡಿಸೆಲ್‌ ಖರ್ಚು ಎಲ್ಲ ಬರಬೇಕು ಎಂದು ತೀರ್ಮಾನಿಸಲಾಗಿತ್ತು.

ಮಾಸಿಕ ಎರಡು ಸಾವಿರ ಕಿಲೋ ಮೀಟರ್‌ ಹೋಗಬಹುದು ಎಂದು ನಿಗದಿಪಡಿಸಲಾಯಿತು. ಒಂದು ವೇಳೆ ಅದಕ್ಕಿಂತ ಜಾಸ್ತಿ ಖರ್ಚು ಬಂದರೆ ಪಾಲಿಕೆಗೆ ಬಿಲ್‌ ಕೊಡಬೇಕು ಎಂದು ಸೂಚಿಸಲಾಗಿತ್ತು. ಆದರೆ ಈ ಆ್ಯಂಬುಲೆನ್ಸ್‌ ಚಾಲನೆಯಲ್ಲಿ ಇದೆಯಾ ಎಂಬುದಾಗಿ ಯಾರಿಗೂ ತಿಳಿದಿಲ್ಲ. ಹಾಗಾಗಿ ಮುಕ್ತಿ ಆ್ಯಂಬುಲೆನ್ಸ್‌ ಪಾಲಿಕೆ ಆವರಣದಲ್ಲೇ ನಿಂತಿರುತ್ತದೆ. ಮೃತದೇಹ ಸಾಗಾಟ ಮಾಡದೆ ಇದ್ದರೂ ತಿಂಗಳಿಗೆ ನಿಗದಿಪಡಿಸಿದ ಮೊತ್ತವನ್ನು ನೀಡಲೇ ಬೇಕಾಗುತ್ತದೆ. ಮುಕ್ತಿ ವಾಹನದ ಬಗ್ಗೆ ಯಾರಿಗೂ ತಿಳಿಯದೆ ಇರುವುದರಿಂದ ಅಗತ್ಯವುಳ್ಳ ಸಾರ್ವಜನಿಕರು ಇದರ ಬಳಕೆ ಮಾಡುತ್ತಿಲ್ಲ.

 ಅನುದಾನದ ಕೊರತೆ
ಸದ್ಯ ಶ್ರದ್ಧಾಂಜಲಿ ವಾಹನದ ಬಳಕೆಯಾಗುತ್ತಿಲ್ಲ. ಈ ಹಿಂದೆ ಟೆಂಡರ್‌ ಮೂಲಕ ಚಾಲಕರ ನೇಮಕ ಮಾಡಲಾಗಿತ್ತು. ಆದರೆ ಟೆಂಡರ್‌ ಮುಗಿದ ಹಿನ್ನೆಲೆಯಲ್ಲಿ ಶ್ರದ್ಧಾಂಜಲಿ ಆ್ಯಂಬುಲೆನ್ಸ್‌ ಬಳಕೆ ಮಾಡಲಾಗುತ್ತಿಲ್ಲ. ಹೆಣ ಸಾಗಾಟದ ವಾಹನ ಎಂಬ ಕಾರಣಕ್ಕಾಗಿಯೇ ಯಾರೂ ಮುಂದೆ ಬರುತ್ತಿಲ್ಲ. ಈ ನಡುವೆ ಚಾಲಕರ ಸಂಬಳ, ಇಂಧನಕ್ಕೆ ಹಣ ನೀಡಲು ಇಲಾಖೆಯಲ್ಲಿ ಅನುದಾನದ ಕೊರತೆ ಇದೆ. ಸರಕಾರಕ್ಕೆ ಈ ಬಗ್ಗೆ ಪತ್ರ ಬರೆಯಲಾಗಿದೆ.
– ಡಾ| ರಾಮಕೃಷ್ಣ ರಾವ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

ಖಾಸಗಿ ಆ್ಯಂಬುಲೆನ್ಸ್‌ಗೆ ಸಾವಿರಾರು ರೂ. ಖರ್ಚು
ಸರಕಾರಿ ಆ್ಯಂಬುಲೆನ್ಸ್‌ಗಳು ಇದ್ದು ಇಲ್ಲದಂತಿರುವ ಕಾರಣದಿಂದ ಬಡ ಜನರು ಮೃತದೇಹ ಸಾಗಿಸಲು ಖಾಸಗಿ ಆ್ಯಂಬುಲೆನ್ಸ್‌ಗಳ ಮೊರೆ ಹೋಗಬೇಕಾಗುತ್ತದೆ. ಅವರು ಕಿ.ಮೀ.ಗೆ ಇಂತಿಷ್ಟು ಎಂಬುದಾಗಿ ದರ ನಿಗದಿಪಡಿಸುತ್ತಾರೆ. ಇದು ದುಬಾರಿಯಾಗಿರುವುದರಿಂದ ಸಾರ್ವಜನಿಕರು ಕಷ್ಟ ಅನುಭವಿಸುವಂತಾಗಿದೆ.

ಟೆಂಡರ್‌ ಮುಕ್ತಾಯ
ಈ ಆ್ಯಂಬುಲೆನ್ಸ್‌ ಬಳಕೆಯ ಆವಶ್ಯಕತೆ ಇರುವವರು ಪಾಲಿಕೆಗೆ ಕರೆ ಮಾಡಿ ತಿಳಿಸಬೇಕು. ಅವರಿಗೆ ಆ್ಯಂಬುಲೆನ್ಸ್‌ ಸೇವೆ ನೀಡಲಾಗುತ್ತಿದೆ. ಆದರೆ ಜುಲೈಯಲ್ಲಿ ಮುಕ್ತಿ ಆ್ಯಂಬುಲೆನ್ಸ್‌ನ ಟೆಂಡರ್‌ ಮುಗಿದಿದೆ. ಆದರೂ ಅದನ್ನು ಮೂರು ತಿಂಗಳಿಗೆ ವಿಸ್ತರಣೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮತ್ತೆ ಟೆಂಡರ್‌ ಕರೆದು ಮುಂದುವರಿಸಲಾಗುತ್ತದೆ ಎಂಬುದಾಗಿ ಪಾಲಿಕೆ ಅಧಿಕಾರಿ ಪತ್ರಿಕೆಗೆ ತಿಳಿಸಿದ್ದಾರೆ.

-ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.