ಎತ್ತಿನ ಬಂಡಿಗೆ ಲಾರಿ ಡಿಕ್ಕಿ : ಓರ್ವ ವ್ಯಕ್ತಿ ಒಂದು ಎತ್ತು ಸಾವು
Team Udayavani, Aug 31, 2019, 8:08 AM IST
ಚಿತ್ರದುರ್ಗ: ಎತ್ತಿನ ಬಂಡಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದು ಓರ್ವ ವ್ಯಕ್ತಿ ಹಾಗೂ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ ಚಳ್ಳಕೆರೆಯಲ್ಲಿ ನಡೆದಿದೆ.
ಸೋಮಗುದ್ದು ಗ್ರಾಮದ ಕೆಂಚಪ್ಪ(40) ಮೃತ ವ್ಯಕ್ತಿ.
ಬೆಳಗ್ಗೆ 6 ಗಂಟೆ ವೇಳೆಗೆ ಚಳ್ಳಕೆರೆ ಹಿರಿಯೂರು ರಾಷ್ಟ್ರೀಯ ಹೆದ್ದಾರಿ 150ರ ನಿರ್ಮಲಾ ಲಾಡ್ಜ್ ಬಳಿ ಹಿರಿಯೂರು ಕಡೆಯಿಂದ ಬಂದ ಲಾರಿ ಎತ್ತಿನ ಗಾಡಿಗೆ ಡಿಕ್ಕಿಯಾಗಿದೆ.
ಲಾರಿ ಹೊಡೆದ ರಭಸಕ್ಕೆ ಬಂಡಿ ನಡೆಸುತ್ತಿದ್ದ ಕೆಂಚಪ್ಪ ಹಾಗೂ ಎತ್ತು ಸ್ಥಳದಲ್ಲೇ ಅಸುನೀಗಿದ್ದಾರೆ. ಎತ್ತಿನ ಬಂಡಿ ನಜ್ಜುಗುಜ್ಜಾಗಿದೆ.
ಲಾರಿ ಚಾಲಕನ ಅಜಾಗರೂಕತೆ ಹಾಗೂ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ