ಚುರುಕುಗೊಂಡ ವಿದ್ಯುತ್‌ ದುರಸ್ತಿ ಕಾರ್ಯ


Team Udayavani, Aug 31, 2019, 10:33 AM IST

bk-tdy-2

ಬಾಗಲಕೋಟೆ: ವಿದ್ಯುತ್‌ ದುರಸ್ತಿ ಕಾರ್ಯದಲ್ಲಿ ತೊಡಗಿರುವ ಹೆಸ್ಕಾಂ ಸಿಬ್ಬಂದಿ.

ಬಾಗಲಕೋಟೆ: ಜಿಲ್ಲೆಯಲ್ಲಿ ಸಂಭವಿಸಿದ ಪ್ರವಾಹದಿಂದ ಒಟ್ಟು 195 ಗ್ರಾಮಗಳು ತುತ್ತಾಗಿದ್ದು, ಈ ಗ್ರಾಮಗಳ ಪ್ರದೇಶಗಳಲ್ಲಿ ಹಾನಿಗೊಳಗಾಗಿರುವ ವಿದ್ಯುತ್‌ ಕಂಬ, ವಿದ್ಯುತ್‌ ಪರಿವರ್ತಕಗಳ ದುರಸ್ತಿ ಕಾರ್ಯಕ್ಕೆ ಬೆಸ್ಕಾಂ ಕಚೇರಿಯಿಂದ ಹೆಚ್ಚುವರಿ ಸಿಬ್ಬಂದಿಗಳನ್ನು ಬಾಗಲಕೋಟೆಗೆ ನಿಯೋಜಿಸಲಾಗಿದೆ ಎಂದು ಹೆಸ್ಕಾಂ ಅಧೀಕ್ಷಕ ಅಭಿಯಂತರ ಕಾಶಿನಾಥ ಹಿರೇಮಠ ತಿಳಿಸಿದ್ದಾರೆ.

ಜಿಲ್ಲೆಯಲ್ಲಾದ ಪ್ರವಾಹದಿಂದ ವಿದ್ಯುತ್‌ ಕಂಬಗಳು ಸಾಕಷ್ಟು ಹಾನಿಗೊಳಗಾಗಿರುವ ಹಿನ್ನೆಲೆಯಲ್ಲಿ ತುರ್ತಾಗಿ ದುರಸ್ತಿ ಕಾರ್ಯ ಕೈಗೊಳ್ಳುವ ನಿಟ್ಟಿನಲ್ಲಿ ಬೆಸ್ಕಾಂನಿಂದ 50 ಸಿಬ್ಬಂದಿಗಳನ್ನೊಳಗೊಂಡ ಒಂದು ತಂಡವನ್ನು ಬಾಗಲಕೋಟೆ ಜಿಲ್ಲೆಗೆ ಕಳುಹಿಸಲಾಗಿದೆ. ಕಳುಹಿಸಲಾದ ತಂಡದ ಸಿಬ್ಬಂದಿಗಳನ್ನು ಬಾಗಲಕೋಟೆಗೆ 20, ಜಮಖಂಡಿಗೆ 20 ಹಾಗೂ ಮುಧೋಳ ಪ್ರದೇಶಗಳಿಗೆ 10 ಸಿಬ್ಬಂದಿಗಳನ್ನು ದುರಸ್ತಿ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದರು.

ಬೆಸ್ಕಾಂ ತಂಡದಿಂದ ದುರಸ್ತಿ ಕಾರ್ಯ ಚುರುಕೊಂಡಿದ್ದು, ಹುನಗುಂದ ತಾಲೂಕಿನ ಹುನಗುಂದ ಕೂಡಲಸಂಗಮ, ಅಮೀನಗಡ ಹಾಗೂ ಕಮತಗಿ ಹಾಗೂ ಬಾದಾಮಿ ತಾಲೂಕಿನ ನಂದಿಕೇಶ್ವರ, ಬೆಲೂರ ಹಾಗೂ ಕುಳಗೇರಿ ಪ್ರದೇಶಗಳ ವಿದ್ಯುತ್‌ ದುರಸ್ತಿ ಕೈಗೊಂಡಿದ್ದಾರೆ. ದುರಸ್ತಿ ತಂಡದಲ್ಲಿ ಮೀಟರ್‌ ತಪಾಸಣಾ ವಿಭಾಗದ ಸಿಬ್ಬಂದಿಗಳು ಇದ್ದು, ಪ್ರವಾಹದಿಂದ ಹಾಳಾದ ಟಿಸಿಗಳನ್ನು ಪರೀಕ್ಷಿಸಿ ಸರಿಯಾಗಿದ್ದಲ್ಲಿ ಪುನಃ ಅದೇ ಟಿಸಿ ಅಳವಡಿಸಲಾಗುತ್ತಿದೆ. ಪೂರ್ತಿ ಹಾಳಾಗಿದ್ದಲ್ಲಿ ಅದನ್ನು ಕಳುಹಿಸಿ ಹೊಸ ಟಿಸಿ ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.

ನೆಲಕ್ಕೆ ಬಿದ್ದ ಕಂಬ ಪುನಃ ನಿಲ್ಲುಸುವ ಕಾರ್ಯ ಹಾಗೂ ಹೊಸ ಕಂಬ ನೆಡುವ ಕಾರ್ಯ ಮಾಡಲಾಗುತ್ತಿದೆ. ಇದರ ಜೊತೆಗೆ ವಿದ್ಯುತ್‌ ತಂತಿ ಸಹ ಬದಲಾಗಿಸುತ್ತಿದೆ. ಪ್ರವಾಹದಿಂದ 4466 ಕಿ.ಮೀ. ಕಂಡಕ್ಟರ (ವಿದ್ಯುತ್‌ ತಂತಿ) ಹಾಳಾಗಿದ್ದು, ಈಗಾಗಲೇ 37.8 ಕಿ.ಮೀ. ವಿದ್ಯುತ್‌ ತಂತಿ ಅಳವಡಿಸಲಾಗಿದೆ. ಜಮಖಂಡಿ ಭಾಗದಲ್ಲಿ ಕಡಕೋಳ, ಜಂಬಗಿ ಬಿ.ಕೆ ಮತ್ತು ಮುತ್ತೂರ, ಮುಧೋಳ ಭಾಗದಲ್ಲಿ ಗುಳಬಾಳ ಜಂಬಗಿಯಲ್ಲಿ ದುರಸ್ತಿ ಕಾರ್ಯ ಮಾಡಲಾಗಿದೆ ಎಂದರು.

ಪ್ರವಾಹಕ್ಕೆ ಒಟ್ಟು 29,766 ಐಪಿ ಸೆಟ್ (ನೀರಾವರಿ ಪಂಪ್‌ಸೆಟ್)ಗಳು ಹಾಳಾಗಿದ್ದು, ಈ ಪೈಕಿ 4,870 ರಿಪ್ಲೇಸ್‌ ಮಾಡಲಾಗಿದೆ. ಜಿಲ್ಲೆಯಲ್ಲಿ ವಿದ್ಯುತ್‌ ದುರಸ್ತಿ ಕಾರ್ಯ ಯುದ್ಧೋಪಾದಿಯಲ್ಲಿ ನಡೆದಿದ್ದು, ಬಾಗಲಕೋಟೆಯ ಹೆಸ್ಕಾಂ ಸಿಬ್ಬಂದಿ ಜೊತೆಗೆ ಕಾಂಟ್ರಾಕ್ಟರ್‌ಗಳ ವತಿಯಿಂದ ಸಿಬ್ಬಂದಿ ಪಡೆದು ಕೆಲವೊಂದು ಪ್ರದೇಶಗಳಲ್ಲಿ ಹೆಸ್ಕಾಂದಿಂದ ಸಲಕರಣ ಕೊಟ್ಟು ದುರಸ್ತಿ ಕಾರ್ಯ ಮಾಡಿಸಲಾಗುತ್ತಿದೆ ಎಂದು ಕಾಶಿನಾಥ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.