ಸರ್ಕಾರಿ ಶಾಲೆ ಉಳಿಸಲು ಎಲ್ಕೆಜಿ ಶುರು


Team Udayavani, Aug 31, 2019, 1:00 PM IST

kolar-tdy-1

ಮಕ್ಕಳ ಕಲಿಕೆಗೆ ಅನುಕೂಲವಾಗಲಿ ಎಂದು ಶಾಲೆಯ ಮುಂಭಾಗದ ಗೋಡೆ ಮೇಲೆ ಬಣ್ಣ ಬಣ್ಣದಿಂದ ಬಿಡಿಸಿರುವ ಚಿತ್ರಗಳು.

ಟೇಕಲ್: ಅನೇಕ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗಲು ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್ಕೆಜಿ, ಯುಕೆಜಿ) ಇಲ್ಲದಿರುವುದೇ ಕಾರಣ. ಸರ್ಕಾರಿ ಶಾಲೆಗೆ ಸೇರಿಸಬೇಕೆಂದರೆ ಐದೂವರೆ ವರ್ಷ ಪೂರೈಸಿರಬೇಕು, ಅದೂ ಕೂಡ ಒಂದನೇ ತರಗತಿಗೆ ಮಾತ್ರ. ಪೂರ್ವ ಪ್ರಾಥಮಿಕ ಶಿಕ್ಷಣ ಬೇಕೆಂದರೆ ಖಾಸಗಿ ಶಾಲೆಗೆ ಹೋಗಬೇಕು. ಅಲ್ಲಿಗೆ ಒಮ್ಮೆ ದಾಖಲಾದ್ರೆ ಸರ್ಕಾರಿ ಶಾಲೆಗಳತ್ತ ಮಕ್ಕಳು ಹಾಗೂ ಪೋಷಕರು ತಿರುಗಿಯೂ ನೋಡಲ್ಲ.

ಹೀಗಾಗಿ ಹುಳದೇನಹಳ್ಳಿ ಸರ್ಕಾರಿ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಗ್ರಾಮದ ಯುವಕರು, ಪೋಷಕರು ಎಲ್ಕೆಜಿ ತರಗತಿ ಆರಂಭಿಸಿದ್ದಾರೆ. ಮಕ್ಕಳು ಅಕ್ಷರ ಕಲಿಯುವುದರ ಜೊತೆಗೆ ಕೊಠಡಿಯಲ್ಲಿ ನಿದ್ರೆಗೂ ಅವಕಾಶ ಕಲ್ಪಿಸಲಾಗಿದೆ.

ಇಂಗ್ಲಿಷ್‌ ಕಲಿಸುವ ಹಂಬಲ: ಗ್ರಾಮದ ಶಾಲೆಯಲ್ಲಿ 1ರಿಂದ 6ನೇ ತರಗತಿವರೆಗೂ ಮಾತ್ರ ಇದ್ದು, ಈ ಗ್ರಾಮದಲ್ಲಿ ಯಾವುದೇ ಖಾಸಗಿ ಶಾಲೆಗಳು ಇಲ್ಲ. ಮಕ್ಕಳಿಗೆ ಇಂಗ್ಲಿಷ್‌ ಕಲಿಸಬೇಕೆಂಬ ಆಸಕ್ತಿಯಿಂದ ಗ್ರಾಮಸ್ಥರು ಹಾಗೂ ಯುವಕರು ಒಂದುಗೂಡಿ ಈ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಿದ್ದಾರೆ.

ಪೋಷಕರಿಂದ ಮೆಚ್ಚುಗೆ: ಇದಕ್ಕೆ ಅನುಮತಿ ನೀಡುವಂತೆ ಶಿಕ್ಷಣ ಇಲಾಖೆಗೆ ಈ ಹಿಂದೆಯೇ ಗ್ರಾಮಸ್ಥರು ಮನವಿ ಮಾಡಿದ್ದರು. ಅದರಂತೆ, ಇಂಗ್ಲಿಷ್‌ ಬೋಧನೆ ಮಾಡಲು ಗ್ರಾಮಸ್ಥರೇ ಒಬ್ಬ ಶಿಕ್ಷಕಿಯನ್ನು ಗೌರವಧನದ ಮೇಲೆ ನೇಮಿಸಿದ್ದಾರೆ. ಈಗ ತರಗತಿಗಳು ಸುಸೂತ್ರವಾಗಿ ನಡೆಯುತ್ತಿದ್ದು, ಪೋಷಕರೂ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ತರಗತಿ ಪ್ರಾರಂಭಿಸಲು ಚಿಂತನೆ: ಈ ಗ್ರಾಮದ ಮಾರ್ಗದಲ್ಲಿ ಮಾಲೂರು ಮುಂತಾದ ಗ್ರಾಮಗಳಲ್ಲಿರುವ ಖಾಸಗಿ ಶಾಲೆಗಳ ವಾಹನಗಳು ಸಂಚರಿಸುತ್ತವೆ. ಹೀಗಾಗಿ ಮಕ್ಕಳನ್ನು ನಮ್ಮ ಶಾಲೆಗೆ ಕಳುಹಿಸಿ ಎಂದು ಶಾಲೆಯವರು ಒತ್ತಾಯಿಸಿದ್ದರು. ಆದರೆ, ಅವರು ನಿಗದಿಪಡಿಸಿರುವ ಶಾಲಾ ಖರ್ಚುಗಳು ದುಬಾರಿಯಾಗಿದ್ದ ಕಾರಣ, ಗ್ರಾಮಸ್ಥರು ನಮ್ಮ ಗ್ರಾಮದಲ್ಲಿಯೇ ತರಗತಿ ಪ್ರಾರಂಭಿಸಲು ಚಿಂತನೆ ನಡೆಸಿ, ಈಗ ಪ್ರಗತಿ ಕಂಡಿದ್ದಾರೆ.

ಪೀಠೊಪಕರಣ: 15 ರಿಂದ 20 ಪುಟಾಣಿ ಮಕ್ಕಳು ಈಗ ಎಲ್ಕೆಜಿ ತರಗತಿಗೆ ಬರುತ್ತಿದ್ದು, ಕಲಿಯುವ ಆಸಕ್ತಿಯ ಹೆಚ್ಚಾಗಿದೆ. ಮಕ್ಕಳಿಗೆ ಶಾಲೆಯಲ್ಲಿ ಕುಳಿತು ಬರೆಯಲು ಉತ್ತಮ ಪೀಠೊಪಕರಣ, ಆಟಿಕೆಗಳನ್ನು ಗ್ರಾಮಸ್ಥರು ವ್ಯವಸ್ಥೆ ಮಾಡಿದ್ದು, ಮಕ್ಕಳು ಅದನ್ನು ಬಳಸಿಕೊಳ್ಳುತ್ತಿದ್ದಾರೆ.

ಎಲ್ಲಾ ಸರ್ಕಾರಿ ಶಾಲೆಯಲ್ಲೂ ಆರಂಭಿಸಿ: ಇದೇ ರೀತಿ ಎಲ್ಲಾ ಗ್ರಾಮಗಳಲ್ಲಿ ಸಾರ್ವಜನಿಕರು, ಪೋಷಕರು ಮುಂದೆ ಬಂದು ಪೂರ್ವಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಿದರೆ, ಖಾಸಗಿ ಶಾಲೆಗಳಿಗೆ ಲಕ್ಷಾಂತರ ರೂ. ಡೊನೆಷನ್‌ ಕಟ್ಟುವುದು ತಪ್ಪುತ್ತದೆ ಹಾಗೂ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಲು ಸಾಕಷ್ಟು ಅನುಕೂಲವಾಗುತ್ತದೆ.

ಟಾಪ್ ನ್ಯೂಸ್

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

mohan bhagwat

RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್‌ ಭಾಗವತ್‌

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.