‘ಕಳ್ಳಗಿವಿ’ ತನಿಖೆ ಆರಂಭಿಸಿದ ಸಿಬಿಐ
Team Udayavani, Sep 1, 2019, 6:15 AM IST
ನವದೆಹಲಿ: ಕರ್ನಾಟಕ ರಾಜಕೀಯ ವಲಯದಲ್ಲಿ ಇತ್ತೀಚೆಗೆ ತಲ್ಲಣ ಸೃಷ್ಟಿಸಿರುವ ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸಿಕೊಂಡಿರುವ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ.
ರಾಜ್ಯದಲ್ಲಿ ಈ ಹಿಂದಿದ್ದ ಕಾಂಗ್ರೆಸ್-ಜೆಡಿಎಸ್ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಈ ಪ್ರಕರಣದ ತನಿಖೆಯನ್ನು ಇತ್ತೀಚೆಗೆ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿಬಿಐಗೆ ವಹಿಸಲು ಶಿಫಾರಸು ಮಾಡಿದ್ದರು. ಕೇಂದ್ರ ಸರ್ಕಾರದ ಅಧಿಸೂಚನೆಯಂತೆ, ಸಿಬಿಐ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಶುರು ಮಾಡಿದೆ.
ಕಾಂಗ್ರೆಸ್-ಜೆಡಿಎಸ್ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದ ಉಭಯ ಪಕ್ಷ ಗಳ ಶಾಸಕರ ಹಾಗೂ ನಾಯಕರ ಫೋನ್ಗಳನ್ನು ಆಗಿನ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಕದ್ದಾಲಿಸಿದ್ದರು ಎಂದು, ಬಂಡಾಯ ಶಾಸಕರಲ್ಲಿ ಒಬ್ಬರಾಗಿದ್ದ ಎಚ್. ವಿಶ್ವನಾಥ್ ಅವರು ಆರೋಪಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
Manipal ಹಾಸ್ಪಿಟಲ್ಸ್ ಪಾಲಾದ ಮೆಡಿಕಾ ಸಿನರ್ಜಿ