ಹುಬ್ಬಳ್ಳಿಗೆ ಕೆಪಿಎಲ್ ಕಿರೀಟ
Team Udayavani, Sep 1, 2019, 8:32 AM IST
ಮೈಸೂರು: ಎಂಟನೇ ಆವೃತ್ತಿ ಕೆಪಿಎಲ್ (ಕರ್ನಾಟಕ ಪ್ರೀಮಿಯರ್ ಲೀಗ್) ಟಿ20 ಪ್ರಶಸ್ತಿಯನ್ನು ಹುಬ್ಬಳ್ಳಿ ಟೈಗರ್ಸ್ ತನ್ನದಾಗಿಸಿಕೊಂಡಿದೆ. ಶನಿವಾರ ಸಾಂಸ್ಕೃತಿಕ ನಗರಿಯಲ್ಲಿ ನಡೆದ ಫೈನಲ್ನಲ್ಲಿ ಬಳ್ಳಾರಿ ಟಸ್ಕರ್ಸ್ ವಿರುದ್ಧ ರೋಚಕ 8 ರನ್ ಜಯ ಸಾಧಿಸಿತು.
ಮೊದಲು ಬ್ಯಾಟಿಂಗ್ ಮಾಡಿದ್ದ ಹುಬ್ಬಳ್ಳಿ 20 ಓವರ್ಗೆ 6 ವಿಕೆಟ್ಗೆ 152 ರನ್ಗಳಿಸಿತ್ತು. 153 ರನ್ ಜಯದ ಗುರಿ ಬೆನ್ನಟ್ಟಿದ ಬಳ್ಳಾರಿ ಟಸ್ಕರ್ಸ್ ದೇವದತ್ತ ಪಡೀಕ್ಕಲ್ (68 ರನ್) ಏಕಾಂಗಿ ಹೋರಾಟದ ಹೊರತಾಗಿಯೂ ಸೋಲು ಕಂಡಿತು. ಅಭಿಲಾಷ್ ಶೆಟ್ಟಿ (34ಕ್ಕೆ3), ಆದಿತ್ಯ ಸೋಮಣ್ಣ (24ಕ್ಕೆ3) ಹುಬ್ಬಳ್ಳಿ ಜಯದಲ್ಲಿ ಮಿಂಚಿದರು.
ವಿಜೇತ ಹುಬ್ಬಳ್ಳಿ ತಂಡ 10 ಲಕ್ಷ ರೂ. ನಗದು ಹಾಗೂ ಟ್ರೋಫಿ ಪಡೆಯಿತು. ರನ್ನರ್ ಅಪ್ ಬಳ್ಳಾರಿ 5 ಲಕ್ಷ ರೂ. ನಗದು ಹಾಗೂ ಟ್ರೋಫಿ ಪಡೆದುಕೊಂಡಿತು.
ಸೋಮಣ್ಣ ಬ್ಯಾಟಿಂಗ್ ನೆರವು: ಟಾಸ್ ಗೆದ್ದು ಹುಬ್ಬಳ್ಳಿ ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ನಿರೀಕ್ಷೆಗೆ ತಕ್ಕಂತೆ ರನ್ ಹರಿದುಬರಲಿಲ್ಲ. ಇದಕ್ಕೆ ಬಳ್ಳಾರಿ ಬಿಗಿ ಬೌಲಿಂಗ್ ಕಾರಣ. ಹುಬ್ಬಳ್ಳಿ ಪರ ಮಿಂಚಿದ್ದು ಆದಿತ್ಯ ಸೋಮಣ್ಣ. ಆರಂಭಕಾರರಾಗಿ ಬ್ಯಾಟ್ ಹಿಡಿದುಬಂದು 38 ಎಸೆತಗಳಲ್ಲಿ 47 ರನ್ ಗಳಿಸಿದರು. ಇದರಲ್ಲಿ ಯಾವುದೇ ಬೌಂಡರಿಯಿರಲಿಲ್ಲ. ಆದರೆ 2 ಸಿಕ್ಸರ್ ಮಾತ್ರ ಇದ್ದವು. ಬಳ್ಳಾರಿ ಪರ ಕೆ.ಪಿ.ಅಪ್ಪಣ್ಣ 19 ರನ್ ನೀಡಿ 2 ವಿಕೆಟ್ ಕಿತ್ತರು. ಪ್ರಸಿದ್ಧ್ ಕೃಷ್ಣ 20 ರನ್ಗೆ 1 ವಿಕೆಟ್ ಕಿತ್ತರು.
ಆದಿತ್ಯ ಸೋಮಣ್ಣ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಕೃಷ್ಣಪ್ಪ ಗೌತಮ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
IPL;ಇಂದು ಆರ್ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ
England; 20 ವರ್ಷದ ಕ್ರಿಕೆಟಿಗ ನಿಗೂಢ ಸಾವು!
IPL; ವಾಂಖೇಡೆಯಲ್ಲಿ ಬೌಲರ್ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ
MUST WATCH
ಹೊಸ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ
AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು
H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು