ಮತದಾರ ಪಟ್ಟಿ ಪರಿಷ್ಕರಣೆ ಪಾರದರ್ಶಕವಾಗಿರಲಿ

ಮತದಾರರ ಸಮಗ್ರ ಮಾಹಿತಿ ಸಂಗ್ರಹಿಸಿ: ಕೂರ್ಮಾರಾವ್‌

Team Udayavani, Sep 1, 2019, 11:33 AM IST

1-September-13

ಸುರಪುರ: ಮತಗತಟ್ಟೆ ಅಧಿಕಾರಿಗಳು ತಮಗೆ ವಹಿಸಿರುವ ಮತ ಪಟ್ಟಿ ಪರಿಷ್ಕರಣೆ ಮತ್ತು ದೃಢೀಕರಣ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಯಾವುದೇ ಲೋಪದೋಷ ಆಗದಂತೆ ಜಾಗೃತಿ ವಹಿಸಿ ಪಾರದರ್ಶಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ತಾಕೀತು ಮಾಡಿದರು.

ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ತಾಲೂಕು ಆಡಳಿತದಿಂದ ಶನಿವಾರ ಮತಗಟ್ಟೆ ಅಧಿಕಾರಿಗಳಿಗೆ ಏರ್ಪಡಿಸಿದ್ದ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ದೃಢೀಕರಣ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮತದರ ಪಟ್ಟಿ ಲೋಪದೋಷ ಕುರಿತು ಈ ಹಿಂದೆ ಸಾಕಷ್ಟು ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿವೆ. ಪ್ರಸಕ್ತ ಬಾರಿ ಹೀಗಾಗದಂತೆ ಎಚ್ಚರಿಕೆ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಮತಗಟ್ಟೆ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದರು.

ಪ್ರಸಕ್ತ ಸಾಲಿನಲ್ಲಿ ಮತದಾರ ಪಟ್ಟಿ ಪರಿಷ್ಕರಣೆಗೆ ಆಧುನಿಕ ಸ್ಪರ್ಶ ನೀಡಲಾಗಿದೆ. ದೇಶದಾದ್ಯಂತ ಒಂದೇ ಮಾದರಿಯ ಮತಗಟ್ಟೆ ಜಾರಿಗೊಳಿಸಲು ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಲಾಗಿದೆ. ಮತಗಟ್ಟೆ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಬೇಕು. ಮತದಾರರ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಬೇಕು. ಆಧಾರ ಸಂಖ್ಯೆಯೊಂದಿಗೆ ನಿಗದಿಪಡಿಸಿದ ದಾಖಲೆಗಳನ್ನು ಪಡೆದುಕೊಳ್ಳಬೇಕು ಎಂದರು. ಮೃತಪಟ್ಟಿದ್ದರೆ, ಸ್ಥಳಾಂತರಗೊಂಡಿದ್ದರೆ, ಮದುವೆಯಾಗಿ ಹೋಗಿದ್ದರೆ ಮತ್ತು ಎರಡೆರಡು ಕಡೆ ಮತಪಟ್ಟಿಗಳಲ್ಲಿ ಹೆಸರು ಹೊಂದಿದ್ದರೆ, ಅಂತವರ ಹೆಸರು ತಗೆದು ಹಾಕಬೇಕು. ನೂತನವಾಗಿ ಸೇರ್ಪಡೆ ಮಾಡಿಕೊಳ್ಳಲು ದಾಖಲೆಯೊಂದಿಗೆ ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ ಕೊಂಡು ಮಾಹಿತಿ ನೀಡಿದವರ ರುಜು ಪಡೆದುಕೊಳ್ಳಬೇಕು. ಇದನು ಅತ್ಯಂತ ಜಾಗೃತಿಯಿಂದ ನಿರ್ವಹಿಸಬೇಕು ಎಂದರು. ಮತದಾರ ಪಟ್ಟಿ ತಂತ್ರಾಂಶದ ಬಗ್ಗೆ ಮಾಹಿತಿ ನೀಡಿ ಪ್ರತಿ ಮತಗಟ್ಟೆ ಅಧಿಕಾರಿಗಳಿಗೆ ಪ್ರತೇಕ ಲಾಗಿನ್‌ ನೀಡಲಾಗುವುದು. ಮೊಬೈಲ್ ಆ್ಯಪ್‌ ಡೌನ್‌ ಲೋಡ್‌ ಮಾಡಿಕೊಂಡು ಸಂಗ್ರಹಿಸಿರುವ ಮತದಾರರ ಮಾಹಿತಿಯನ್ನು ಆ್ಯಪ್‌ನಲ್ಲಿ ಅಪ್‌ಲೋಡ್‌ ಮಾಡಬೇಕು. ಸಾರ್ವಜನಿಕರಿಗಾಗಿ ನಾಡ ಕಚೇರಿ, ಗ್ರಾಪಂ ಕಚೇರಿ, ಗ್ರಾಹಕ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಬಹುದು ಎಂದು ತಿಳಿಸಿದರು.

ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮ ಲೆಕ್ಕಿಗರು, ಕಂದಾಯ ಅಧಿಕಾರಿಗಳು, ಗ್ರಾಪಂ ಸಿಬ್ಬಂದಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು. ಸರಿಯಾಗಿ ತಿಳಿಯದಿದ್ದಲ್ಲಿ ತಹಶೀಲ್ದಾರ್‌, ಉಪ ತಹಶೀಲ್ದಾರ್‌, ಕಂದಾಯ ಅಧಿಕಾರಿಗಳ ಸಲಹೆ ಪಡೆದುಕೊಳ್ಳಬೇಕು. ಇದೊಂದು ಹೆಚ್ಚಿನ ಹೊರೆ ಎಂದು ತಿಳಿಯದೆ ರಾಷ್ಟ್ರೀಯ ಕರ್ತವ್ಯ ಎಂದು ಭಾವಿಸಿ ಪಾರದರ್ಶಕ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಮತದಾರ ಪಟ್ಟಿ ಪರಿಷ್ಕರಣೆ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಸಾಹಯಕ ಆಯುಕ್ತ ಶಂಕರಗೌಡ ಸೋಮನಾಳ ಮಾತನಾಡಿ, ಸೆಪ್ಟೆಂಬರ್‌ 1ರಿಂದ 30ರ ವರೆಗೆ ಮತದಾರ ಪಟ್ಟಿ ಪರಿಷ್ಕರಣಿ ಅಭಿಯಾನ ನಡೆಯಲಿದೆ. ನೂತನವಾಗಿ ಹೆಸರು ಸೇರ್ಪಡೆ ಮಾಡಿಕೊಳ್ಳಬಯಸುವ ಮತದಾರರು ಸಂಬಂಧಿಸಿದ ಬಿಎಲ್ಒಗಳ ಬಳಿ ಸಮರ್ಪಕ ಮಾಹಿತಿ ನೀಡಿ ಹೆಸರು ನೋಂದಾಯಿಸಿಕೊಳ್ಳಬೇಕು. ಸಾರ್ವಜನಿಕರು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಸಿಬ್ಬಂದಿಗಳಿಗೆ ಸಹಾಯ ಸಹಕಾರ ನೀಡಿ ಪಾರದರ್ಶಕ ಮತದಾರ ಪಟ್ಟಿ ಪರಿಷ್ಕರಣೆ ಮತ್ತು ದೃಢೀಕರಣಕ್ಕೆ ನೆರವಾಗಬೇಕು ಎಂದು ತಿಳಿಸಿದರು. ತಹಶೀಲ್ದಾರ್‌ ಸುರೇಶ ಅಂಕಲಗಿ, ಹುಣಸಗಿ ತಹಶೀಲ್ದಾರ್‌ ಸುರೇಶ ಚವಲ್ಕರ್‌, ಚುನಾವಣಾ ಶಿರಸ್ತೇದಾರ್‌ ಅಶೋಕ ಸುರಪುರ, ಸಹಾಯಕ ಅಶೋಕ ಬಿರಾದಾರ, ಕಂದಾಯ ನಿರೀಕ್ಷಕರಾದ ಗುರುಬಸಪ್ಪ ಪಾಟೀಲ, ಮಹ್ಮದ್‌ ರಾಜಾ ಸಾಬಾ, ವಿಠ್ಠಲ ಇತರರು ಇದ್ದರು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.