ಆಂಗ್ಲದಲ್ಲಿ ಶೇ.70 ಗ್ರಾಮೀಣ ವಿದ್ಯಾರ್ಥಿಗಳು ಫೇಲ್

ಕಲಿಕೆಯ ಬಗ್ಗೆ ಭಯ, ಕೀಳರಿಮೆ ಸೃಷ್ಟಿ: ಪ್ರೊ.ಬಿ.ಕೆ.ಚಂದ್ರಶೇಖರ್‌ • ಕನ್ನಡ ಮಾಧ್ಯಮ- ಇಂಗ್ಲಿಷ್‌ ವಿಚಾರ ಸಂಕಿರಣ

Team Udayavani, Sep 1, 2019, 1:25 PM IST

mandya-tdy-2

ನಗರದ ಪ್ರವಾಸಿ ಮಂದಿರದಲ್ಲಿ ಕನ್ನಡ ಸೇನೆ ಕರ್ನಾಟಕ ಸಂಘಟನೆ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಶಿಕ್ಷಣ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್‌ ಮಾತನಾಡಿದರು.

ಮಂಡ್ಯ: ಗ್ರಾಮೀಣ ಶಾಲೆಗಳಲ್ಲಿ ಕಲಿಯುವ ಶೇ.70ರಷ್ಟು ವಿದ್ಯಾರ್ಥಿಗಳು ಇಂಗ್ಲಿಷ್‌ ವಿಷಯದಲ್ಲಿ ಅನುತೀರ್ಣರಾಗುತ್ತಿದ್ದಾರೆ. ಇದರಿಂದ ಮಕ್ಕಳಲ್ಲಿ ಕಲಿಕೆಯ ಬಗ್ಗೆ ಭಯ ಹಾಗೂ ಕೀಳರಿಮೆ ಉಂಟಾಗುತ್ತಿದೆ ಎಂದು ಮಾಜಿ ಶಿಕ್ಷಣ ಸಚಿವ ಪ್ರೊ.ಬಿ.ಆರ್‌.ಚಂದ್ರಶೇಖರ್‌ ಆತಂಕ ವ್ಯಕ್ತಪಡಿಸಿದರು.

ನಗರದ ಪ್ರವಾಸಿಮಂದಿರದಲ್ಲಿ ಕನ್ನಡ ಸೇನೆ ಕರ್ನಾಟಕ ಜಿಲ್ಲಾ ಘಟಕ ಆಯೋಜಿಸಿದ್ದ ಕನ್ನಡ ಮಾಧ್ಯಮ-ಇಂಗ್ಲಿಷ್‌ ಭಾಷೆ ಕುರಿತ ವಿಚಾರ ಸಂಕಿರಣ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಇಂಗ್ಲಿಷ್‌ನಿಂದ ಆತಂಕ ಸೃಷ್ಟಿ: ಶಿಕ್ಷಣ ವ್ಯವಸ್ಥೆಯಲ್ಲಿ ಮೂರರಿಂದ ನಾಲ್ಕನೇ ತರಗತಿವರೆಗೆ ಇಂಗ್ಲಿಷ್‌ನ್ನು ಒಂದು ಭಾಷೆಯಾಗಿ ಕಲಿಯಲಿ. ಆದರೆ, ಅದಕ್ಕೆ ಪರೀಕ್ಷೆ ಇರಬಾರದು. ಇಂದಿನ ಶಿಕ್ಷಕರು ಇಂಗ್ಲಿಷ್‌ ಹೇಳಿಕೊಡುತ್ತಿರುವುದನ್ನು ನೋಡಿದರೆ ಮಕ್ಕಳು ಸತ್ತುಹೋಗುತ್ತಾರೆ. ಅದೇನು ಕಲಿತು ಹೇಳಿಕೊಡುತ್ತಾರೋ ಗೊತ್ತಿಲ್ಲ ಎಂದ ಅವರು, ಪ್ರಸ್ತುತ ಅಧಿಕಾರದಲ್ಲಿರುವ ರಾಜ್ಯ ಸರ್ಕಾರದಿಂದಲೂ ಮಾತೃಭಾಷಾ ಶಿಕ್ಷಣಕ್ಕೆ ಒತ್ತುಕೊಡಲು ಸಾಧ್ಯವಿಲ್ಲ. ಕಾರಣ ಬಿಜೆಪಿ ಏನೇ ಮಾಡಬೇಕಾದರೂ ಆರ್‌ಎಸ್‌ಎಸ್‌ ಆಜ್ಞೆ ಪಾಲಿಸಲೇಬೇಕಾಗುತ್ತದೆ ಎಂದರು.

ಕನ್ನಡದಲ್ಲಿ ಅನ್ನ ಕೊಡುವ ಶಕ್ತಿ: ಪ್ರಾಥಮಿಕ ಶಿಕ್ಷಣ ಮಕ್ಕಳಿಗೆ ಮಾತೃಭಾಷೆಯಲ್ಲೇ ದೊರಕಬೇಕು. ಆನಂತರ ಮಕ್ಕಳು ಯಾವುದೇ ಭಾಷೆಯನ್ನು ಕಲಿಯುವುದಕ್ಕೆ ಅವಕಾಶ ಮಾಡಿಕೊಡಬೇಕು. ಇಂಗ್ಲಿಷ್‌ ಎಂಬ ಪೆಡಂಭೂತವನ್ನು ಮೊದಲು ತಲೆಯಿಂದ ತೆಗೆದುಹಾಕಬೇಕು. ಇಂಗ್ಲಿಷ್‌ ಕಲಿಯದಿದ್ದರೆ ಬದುಕೇ ಇಲ್ಲ ಎಂಬಂಥ ವಾತಾವರಣ ಸೃಷ್ಟಿ ಮಾಡಲಾಗುತ್ತಿದೆ. ಕನ್ನಡ ಶ್ರೀಮಂತ ಭಾಷೆಯಾಗಿದ್ದು, ಶಬ್ಧ ಸಂಪತ್ತನ್ನು ತುಂಬಿಕೊಂಡಿರುವ ಭಂಡಾರವಾಗಿದೆ. ಜೀವನವನ್ನು ರೂಪಿಸುವ, ಅನ್ನ ಕೊಡುವ ಶಕ್ತಿ ಕನ್ನಡಕ್ಕಿದೆ. ಇದನ್ನು ಯಾರೂ ಅರ್ಥ ಮಾಡಿಕೊಳ್ಳುತ್ತಲೇ ಇಲ್ಲ. ಕನ್ನಡ ಭಾಷೆಯನ್ನು ಸಮರ್ಥವಾಗಿ ಬಳಸಿಕೊಂಡು ಬದುಕು ಕಟ್ಟಿಕೊಂಡಿರುವವರು ನಮ್ಮ ಕಣ್ಮುಂದೆ ಇದ್ದರೂ ಯಾರೂ ಸಹ ಅವರತ್ತ ತಿರುಗಿ ನೋಡುತ್ತಲೇ ಇಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡ ಸೇನೆ ಕರ್ನಾಟಕ ಜಿಲ್ಲಾ ಘಟಕ ಜಿಲ್ಲಾಧ್ಯಕ್ಷ ಮಂಜುನಾಥ್‌, ಮಹಿಳಾಧ್ಯಕ್ಷೆ ಸೌಭಾಗ್ಯಶಿವಲಿಂಗು, ನಗರಾಧ್ಯಕ್ಷ ಶಿವಾಲಿ, ಮಂಜುನಾಥ್‌, ರಾಜು, ಅಸ್ಲಂಪಾಷ, ವಿನಯ್‌, ಸತೀಶ್‌ ಪಾಲ್ಗೊಂಡಿದ್ದರು.

ಯೋಗ, ಸಂಗೀತ ಒತ್ತಡ ಕಡಿತಕ್ಕೆ ಅನುಕೂಲ:

ನಾನು ಶಿಕ್ಷಣ ಸಚಿವನಾಗಿದ್ದಾಗ ಪುಸ್ತಕದ ಹೊರೆ ಇಳಿಸಿದ್ದೆ. ತ್ತೈಮಾಸಿಕ ಪರೀಕ್ಷೆ ವ್ಯವಸ್ಥೆ ಜಾರಿಗೆ ತಂದಿದ್ದೆ. ಆದರೆ, ವರ್ಷಕ್ಕೊಂದು ಪರೀಕ್ಷೆ ಮಾಡಬೇಕೆಂಬ ಸಾಂಕ್ರಾಮಿಕ ರೋಗ ಈ ದೇಶದಲ್ಲಿದೆ. ಫ‌ಸ್ಟ್‌r ರ್‍ಯಾಂಕ್‌, ಸೆಕೆಂಡ್‌ ರ್‍ಯಾಂಕ್‌ ಹಾಕದಿದ್ದರೆ ಉತ್ತೇಜನ ಸಿಗಲ್ವಂತೆ. ಈಗ ಎಂಟನೇ ತರಗತಿ ಫೇಲಾದ ಮಕ್ಕಳು ನೇಣಿಗೆ ಶರಣಾಗುತ್ತಿದ್ದಾರೆ. ಯೋಗ, ಸಂಗೀತ ವಿಷಯಗಳನ್ನು ಸೇರ್ಪಡೆಗೊಳಿಸಿದ್ದೆ. ಕಾರಣ ಗಣಿತ ಹಾಗೂ ವಿಜ್ಞಾನ ಪಾಠ ಕೇಳಿ ಒತ್ತಡ ಇರುತ್ತದೆ. ಅದರಿಂದ ಮಕ್ಕಳ ಒತ್ತಡ ಕಡಿಮೆ ಮಾಡಲು ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಆ ಎಲ್ಲವನ್ನು ನಂತರ ಮುಂದುವರಿಸಲಿಲ್ಲ ಇದು ಬೇಸರದ ಸಂಗತಿ ಎಂದು ಮಾಜಿ ಶಿಕ್ಷಣ ಸಚಿವ ಪ್ರೊ.ಬಿ.ಆರ್‌.ಚಂದ್ರಶೇಖರ್‌ ತಿಳಿಸಿದರು.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಬಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಬಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.