ತಂತ್ರಜ್ಞರಿಗೆ ಕಾಡುತ್ತಿದೆ ವೈಫಲ್ಯದ ಭಯ

ದಾವಣಗೆರೆ ಜಿಎಂಐಟಿ ಕಾಲೇಜಿನ 15ನೇ ಪದವಿ ದಿನಾಚರಣೆ

Team Udayavani, Sep 1, 2019, 3:02 PM IST

1-September-30

ದಾವಣಗೆರೆ: ದೇಶದ ತಂತ್ರಜ್ಞರಿಗೆ ವೈಫ‌ಲ್ಯದ ಬಗ್ಗೆ ಭಯ ಇದೆ. ವಿಫ‌ಲರಾದರೆ ಟೀಕೆಗಳನ್ನು ಎದುರಿಸಬೇಕಾಗುತ್ತದೆ ಎಂಬ ಅಂಜಿಕೆ ಇದೆ. ಇಂಥ ಮನೋಭಾವ ದೇಶದ ಆವಿಷ್ಕಾರಗಳಿಗೆ ಇರುವ ಅಡಚಣೆಗಳಾಗಿವೆ ಎಂದು ನವದೆಹಲಿಯ ಡಿಆರ್‌ಡಿಒ ಸಂಸ್ಥೆ ಜೀವ ವಿಜ್ಞಾನ ವಿಭಾಗದ ಮಹಾ ನಿರ್ದೇಶಕ ಡಾ| ಎ.ಕೆ.ಸಿಂಗ್‌ ವಿಷಾದಿಸಿದ್ದಾರೆ.

ನಗರದ ಜಿಎಂಐಟಿ ಕಾಲೇಜಿನಲ್ಲಿ ಶನಿವಾರ 15ನೇ ಪದವಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಶತಮಾನ ಭಾರತದ್ದಾಗಿದೆ. ಭಾರತೀಯರಲ್ಲಿ ಉತ್ತಮ ಸಾಮರ್ಥ್ಯ, ಚೈತನ್ಯವಿದೆ. ಇದರ ಜತೆಗೆ ನಮ್ಮ ಹಿರಿಯರಿಂದ ಬಂದಿರುವ ಮೌಲ್ಯಗಳಿವೆ. ಇಷ್ಟೆಲ್ಲ ಇರುವಾಗ ಜಾಗತಿಕ ಆರ್ಥಿಕತೆಯಲ್ಲಿ ನಮ್ಮ ಸ್ಥಾನ ಪಡೆದುಕೊಳ್ಳಲು ಶ್ರಮಿಸೋಣ ಎಂದರು.

ನಮ್ಮಿಂದ ಆಗದು ಎಂಬ ಮನಃಸ್ಥಿತಿಯನ್ನು ಬದಲಿಸಿಕೊಂಡರೆ ಅತ್ಯುತ್ತಮ ಆವಿಷ್ಕಾರಗಳನ್ನು ಮಾಡಲು ಸಾಧ್ಯ. ದೇಶದ ಪ್ರಗತಿಗೆ ಆವಿಷ್ಕಾರಗಳು ಬಹಳ ಮುಖ್ಯ. ಸತತ ಪ್ರಯತ್ನದ ಫ‌ಲವಾಗಿ ಸಿಂಗಾಪುರ, ಫಿನ್‌ಲೆಂಡ್‌, ದಕ್ಷಿಣ ಕೊರಿಯ, ಇಸ್ರೇಲ್ನಂಥ ದೇಶಗಳು ಆವಿಷ್ಕಾರದ ಚಾಂಪಿಯನ್‌ಗಳೆನಿಸಿವೆ.

ಈ ದೇಶಗಳಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳು ಹೆಚ್ಚಾಗಿವೆ. ಬಂಡವಾಳ ಹೂಡಿಕೆ ಅಧಿಕವಾಗಿದೆ. ಉದ್ಯಮಶೀಲತೆಯು ಬೆಳೆದಿದೆ ಎಂದು ತಿಳಿಸಿದರು.

ನಿರಂತರ ಕಲಿಕೆ ಇಂದಿನ ಅಗತ್ಯವಾಗಿದೆ. ನಿಮ್ಮ ಕೌಶಲ ಮತ್ತು ಕಾರ್ಯಕ್ಷಮತೆ ಸುಧಾರಿಸಿಕೊಳ್ಳಿ. ನಾಯಕತ್ವದ ಗುಣ ಬೆಳೆಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಅವರು ಕಿವಿಮಾತು ಹೇಳಿದರು.

ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಪದವಿ ಪೂರೈಸಿದ ಬಳಿಕ ಉದ್ಯೋಗ ಪಡೆಯುವುದಷ್ಟೇ ಮುಖ್ಯವಾಗಬಾರದು. ಬದುಕಿನಲ್ಲಿ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇಂಜಿನಿಯರುಗಳು ದೇಶ ಕಟ್ಟುವ ಕೆಲಸ ಮಾಡುತ್ತಾರೆ. ದೇಶಸೇವೆಯ ಮನೋಭಾವದಿಂದ ದುಡಿಯಬೇಕು. ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡಬೇಕು. ಒಳ್ಳೆಯ ನಡತೆಯಿಂದ ಎತ್ತರಕ್ಕೆ ಏರಬೇಕು ಎಂದು ಹೇಳಿದರು.

ಶ್ರೀಶೈಲ ಎಜ್ಯುಕೇಶನಲ್ ಟ್ರಸ್ಟ್‌ನ ಚೇರ್ಮನ್‌ ಜಿ.ಎಂ. ಪ್ರಸನ್ನ ಕುಮಾರ್‌, ಆಡಳಿತ ಮಂಡಳಿ ಸದಸ್ಯ ಡಾ| ಕೆ. ದಿವ್ಯಾನಂದ, ಆಡಳಿತಾಧಿಕಾರಿ ವೈ.ಯು. ಸುಭಾಶ್ಚಂದ್ರ, ಪ್ರಾಂಶುಪಾಲ ಡಾ.ವೈ. ವಿಜಯಕುಮಾರ್‌, ನಿಕಟಪೂರ್ವ ಪ್ರಾಂಶುಪಾಲ ಡಾ.ಪಿ. ಪ್ರಕಾಶ್‌, ಉಪ ಪ್ರಾಂಶುಪಾಲ ಡಾ.ಬಿ.ಆರ್‌. ಶ್ರೀಧರ್‌, ಎಂಬಿಎ ಪ್ರೋಗ್ರಾಂ ನಿರ್ದೇಶಕ ಪ್ರೊ.ಬಿ. ಬಕ್ಕಪ್ಪ, ಶೈಕ್ಷಣಿಕ ಡೀನ್‌ ಡಾ.ಬಿ.ಎಸ್‌. ಸುನೀಲಕುಮಾರ್‌, ಜೈವಿಕ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ.ಎಚ್. ಗುರುಮೂರ್ತಿ ಇದ್ದರು.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.