ನವನವೀನ “ನವರಂಗ್‌’

ಹೊಸ ಸ್ಪರ್ಶದೊಂದಿಗೆ ಚಿತ್ರಮಂದಿರ ರೆಡಿ

Team Udayavani, Sep 2, 2019, 3:01 AM IST

Navarang

ಬೆಂಗಳೂರಿನ ಕೆಂಪೇಗೌಡ ರಸ್ತೆಯಲ್ಲಿದ್ದ ಅನೇಕ ಚಿತ್ರಮಂದಿರಗಳು ಸಂಪೂರ್ಣ ಮುಚ್ಚಿಹೋಗಿದ್ದು ಗೊತ್ತೇ ಇದೆ. ಇನ್ನು ಕೆಲವು ಚಿತ್ರಮಂದಿರಗಳು ನವೀಕರಣದೊಂದಿಗೆ ಪುನಃ ಸಿನಿರಸಿಕರ ಪಾಲಿಗೆ ಸಂತಸ ತಂದಿದ್ದೂ ಇದೆ. ಈಗ ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಸಾವಿರಾರು ಚಿತ್ರಗಳ ಪ್ರದರ್ಶನ ನೀಡಿದ್ದ ನವರಂಗ್‌ ಚಿತ್ರಮಂದಿರ ಕೂಡ ನವೀಕರಣಗೊಳ್ಳುವ ಮೂಲಕ ನೋಡುಗರಿಗೆ ಹೊಸ ಫೀಲ್‌ ಕೊಡುವ ತಯಾರಿಯಲ್ಲಿದೆ.

ಹೌದು, ಈಗಾಗಲೇ ಮೆಜೆಸ್ಟಿಕ್‌, ಸಾಗರ್‌, ಕಲ್ಪನಾ, ಕೈಲಾಶ್‌, ತ್ರಿಭುವನ್‌, “ಕಪಾಲಿ’ ಹೀಗೆ ಪ್ರಮುಖ ಚಿತ್ರಮಂದಿರಗಳು ಸಂಪೂರ್ಣ ಮುಚ್ಚಿವೆ. ಆದರೆ, ಕಳೆದ ಮೂರು ತಿಂಗಳಿನಿಂದ ತಾತ್ಕಾಲಿಕ ಪ್ರದರ್ಶನ ನಿಲ್ಲಿಸಿದ್ದ ರಾಜಾಜಿನಗರದ ಡಾ.ರಾಜಕುಮಾರ್‌ ರಸ್ತೆಯಲ್ಲಿರುವ ನವರಂಗ್‌ ಚಿತ್ರಮಂದಿರ, ಈಗ ನವೀಕರಣದೊಂದಿಗೆ ಸಿನಿರಸಿಕರನ್ನು ಆಕರ್ಷಿಸಲು ಸಜ್ಜಾಗುತ್ತಿದೆ.

ನವರಂಗ್‌ ಚಿತ್ರಮಂದಿರದ ಮಾಲೀಕ ಕೆಸಿಎನ್‌ ಮೋಹನ್‌ ಅವರು, ಚಿತ್ರಮಂದಿರಕ್ಕೆ ಇನ್ನಷ್ಟು ಉನ್ನತಮಟ್ಟ ಕಲ್ಪಿಸಿ, ಒಳ್ಳೆಯ ವಾತಾವರಣ ಕಲ್ಪಿಸುವ ಉದ್ದೇಶದಿಂದ ನವೀಕರಣಗೊಳಿಸುತ್ತಿದ್ದಾರೆ. ಈ ಕುರಿತು “ಉದಯವಾಣಿ’ ಜೊತೆ ಮಾತನಾಡಿದ ಕೆಸಿಎನ್‌ ಮೋಹನ್‌, “ಕಳೆದ 53 ವರ್ಷಗಳಿಂದಲೂ ಇರುವ ನವರಂಗ್‌ ಚಿತ್ರಮಂದಿರ ಇನ್ನು ಮುಂದೆ ಸುಸಜ್ಜಿತಗೊಂಡು, ಸಿನಿಮಾ ನೋಡುವ ಪ್ರೇಕ್ಷಕರಿಗೆ ಹೊಸ ಫೀಲ್‌ ತಂದುಕೊಡಲಿದೆ.

ಮೊದಲು ಕೆಳಗಡೆ 800 ಆಸನಗಳಿದ್ದವು. ಈಗ 450 ಕ್ಕೆ ಇಳಿಸಲಾಗಿದೆ. ಬಾಲ್ಕನಿಯಲ್ಲಿದ್ದ 350 ಆಸನಗಳನ್ನು ಈಗ 250 ಕ್ಕೆ ಇಳಿಸಲಾಗಿದೆ. ಹೊಸ ಬಗೆಯ ಆಸನ ವ್ಯವಸ್ಥೆ ಕಲ್ಪಿಸುವ ಮೂಲಕ ನವರಂಗ್‌ ಚಿತ್ರಮಂದಿರದ ಒಳಗೆ ಬರುವ ಪ್ರತಿಯೊಬ್ಬರಿಗೂ ಮಲ್ಟಿಪ್ಲೆಕ್ಸ್‌ನಲ್ಲಿ ಸಿನಿಮಾ ನೋಡಿದ ಅನುಭವ ಆಗುವಂತಹ ವಾತಾವರಣ ಕಲ್ಪಿಸಲಾಗುತ್ತಿದೆ. ಸೆಪ್ಟೆಂಬರ್‌ 12 ರಂದು “ಪೈಲ್ವಾನ’ ಚಿತ್ರ ಬಿಡುಗಡೆಯಾಗುತ್ತಿದ್ದು, ಆ ಚಿತ್ರದ ಮೂಲಕ ನವೀಕರಣಗೊಂಡಿರುವ ನವರಂಗ್‌ ಚಿತ್ರಮಂದಿರಕ್ಕೆ ಚಾಲನೆ ಕೊಡುವ ಪ್ರಯತ್ನ ಮಾಡಲಾಗುವುದು’ ಎನ್ನುತ್ತಾರೆ ಮೋಹನ್‌.

ಅದೇನೆ ಇರಲಿ, ಡಾ.ರಾಜಕುಮಾರ್‌ ಅಭಿನಯದ “ವೀರಕೇಸರಿ’ ಈ ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡ ಮೊದಲ ಚಿತ್ರ. ಬಹುತೇಕ ಚಿತ್ರಗಳನ್ನು ಪ್ರದರ್ಶಿಸಿದ ಖ್ಯಾತಿ ನವರಂಗ್‌ ಚಿತ್ರಮಂದಿರಕ್ಕಿದೆ. ಕನ್ನಡದ ಎಲ್ಲಾ ಸ್ಟಾರ್‌ ಚಿತ್ರಗಳು ಇಲ್ಲಿನ ಪರದೆ ಮೇಲೆ ಬಿತ್ತರಗೊಂಡಿವೆ. ಸಿಂಗಲ್‌ ಸ್ಕ್ರೀನ್‌ ಚಿತ್ರಮಂದಿರಗಳು ಮುಚ್ಚೇ ಹೋಗುತ್ತಿರುವ ಸಂದರ್ಭದಲ್ಲಿ ಇರುವ ಚಿತ್ರಮಂದಿರವನ್ನು ನವೀಕರಿಸಿ, ಪುನಃ ಹೊಸ ವಾತಾವರಣ ಕಲ್ಪಿಸುವ ಧೈರ್ಯ ಮಾಡುತ್ತಿರುವುದನ್ನು ಮೆಚ್ಚಲೇಬೇಕು.

ಟಾಪ್ ನ್ಯೂಸ್

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Sandalwood; ‘ಕನ್ನಡ ಮಾಧ್ಯಮ’ದಲ್ಲಿ ಹೊಸಬರ ಕನಸು

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Rishi; ರುದ್ರ ಗರುಡ ಪುರಾಣ ಫಸ್ಟ್ ಲುಕ್ ಬಿಡುಗಡೆ

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ ಬಿಜೆಪಿಯಿಂದ 10 ಲಕ್ಷ ಸರ್ಕಾರಿ ಉದ್ಯೋಗದ ಭರವಸೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.