ಬೆಲೆ ಏರಿಕೆ ನಡುವೆಯೂ ಹಬ್ಬಕ್ಕೆ ಖರೀದಿ


Team Udayavani, Sep 2, 2019, 3:00 AM IST

bele-arike

ಚಾಮರಾಜನಗರ: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ನಗರದಲ್ಲಿ ಗೌರಿ ಗಣೇಶ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳನ್ನು ಖರೀದಿಸುವ ಸಂಭ್ರಮ ಮನೆ ಮಾಡಿತ್ತು.

ನಗರದ ಅಗ್ರಹಾರ ಬೀದಿಯಲ್ಲಿರುವ ರಾಮಮಂದಿರದ ಎದುರು ಹಾಗೂ ರಥದ ಬೀದಿಯಲ್ಲಿ ಗಣೇಶ ಮೂರ್ತಿಗಳ ಮಾರಾಟ ನಡೆಯುತ್ತಿದ್ದು, ಭಕ್ತಾದಿಗಳು ತಮಗೆ ಬೇಕಾದ ರೀತಿಯ ಗಣೇಶ ಮೂರ್ತಿಯನ್ನು ಖರೀದಿಸುವಲ್ಲಿ ನಿರತರಾಗಿದ್ದರು. 50-100 ರೂ.ಗಳಿಂದ ಸಾವಿರಾರು ರೂ.ಗಳವೆರೆಗಿನ ಗಣೇಶ ಮೂರ್ತಿಗಳು ಮಾರಾಟವಾದವು.

ಮಣ್ಣಿನ ಗಣಪ ಖರೀದಿಗೆ ಹೆಚ್ಚು ಆಸಕ್ತಿ ತೋರದ ಜನ: ಪಿಒಪಿ ಗಣೇಶ ನಿಷೇಧ ಹಿನ್ನೆಲೆಯಲ್ಲಿ ಮಣ್ಣಿನ ಗಣೇಶ ಮೂರ್ತಿಗಳನ್ನು ಮಾರಾಟಕ್ಕಿಡಲಾಗಿತ್ತು. ತಯಾರಕರು ಮಣ್ಣಿನಿಂದ ಮಾಡಿ ಪರಿಸರ ಸ್ನೇಹಿ ಬಣ್ಣ ಹಾಕಿದ್ದರು. ಬಣ್ಣದ ಗಣೇಶನಿಗೆ ಬೇಡಿಕೆಯಿತ್ತು. ಮಣ್ಣಿನಿಂದ ಮಾಡಿ ಬಣ್ಣ ಹಚ್ಚದ ಮೂರ್ತಿಗಳನ್ನು ಕೊಳ್ಳಲು ಜನರು ಹೆಚ್ಚು ಆಸಕ್ತಿ ತೋರಿಸಲಿಲ್ಲ.

ತಮಗಿಷ್ಟವಾದ ಗಣೇಶ ಕೊಂಡೊಯ್ದರು: ಗ್ರಾಮಾಂತರ ಪ್ರದೇಶಗಳಿಂದ ಗೂಡ್ಸ್‌ ಆಟೋದಲ್ಲಿ ಬಂದ ಜನರು ತಮ್ಮ ಬೀದಿಗಳಲ್ಲಿ ಪ್ರತಿಷ್ಠಾಪಿಸಲು ದೊಡ್ಡ ದೊಡ್ಡ ಗಣಪನ ಮೂರ್ತಿಯನ್ನು ಕೊಳ್ಳಲು ಆಸಕ್ತಿ ತೋರಿದರು. ಮಾರಾಟಗಾರರಲ್ಲಿ ಚೌಕಾಶಿ ಮಾಡಿ, ತಮಗಿಷ್ಟವಾದ ಗಣೇಶನ ಮೂರ್ತಿಯನ್ನು ಕೊಂಡು ಆಟೋಗಳಲ್ಲಿ ಕೊಂಡೊಯ್ದರು.

ದರ ಏರಿಕೆ: ಹಬ್ಬದ ಅಂಗವಾಗಿ ಮಾರುಕಟ್ಟೆ ಹಾಗೂ ರಸ್ತೆ ಬದಿಯಲ್ಲಿ, ಬಾಳೆ ಕಂದು, ಮಾವಿನಸೊಪ್ಪು, ಕಬ್ಬಿನ ಜಲ್ಲೆ ಮಾರಾಟ ನಡೆಯಿತು. ಹಬ್ಬದ ಹಿನ್ನೆಲೆಯಲ್ಲಿ ಪೂಜಾ ಸಾಮಗ್ರಿಗಳ ದರ ಏರಿಕೆ ಕಂಡಿತ್ತು. ಮೀಟರ್‌ ಮಲ್ಲಿಗೆಗೆ 30 ರೂ. ಸೇವಂತಿಗೆ 50ರೂ. ಕನಕಾಂಬರ 50 ರೂ. ಮುಲ್ಲೆ 50 ರೂ. ಚೆಂಡುಮಲ್ಲಿಗೆ 50 ರೂ. ದರವಿತ್ತು. ಸೇಬು ಕೆಜಿಗೆ 100 ರಿಂದ 150, ರೂ. ಇದ್ದರೆ, ಏಲಕ್ಕಿ ಬಾಳೆ 80 ರೂ. ದಾಳಿಂಬೆ 80 ರಿಂದ 100 ರೂ. ಸೀಬೆ 60 ರೂ. ಮೂಸಂಬಿ 50 ರಿಂದ 60 ರೂ. ಕಿತ್ತಳೆ 80 ರೂ. ಬೇರಿಕಾಯಿ 40 ರಿಂದ 50 ರೂ. ಪಚ್ಚ ಬಾಳೆ 30 ರೂ. ದರವಿತ್ತು.

ಗೊಣಗುತ್ತಲೇ ಸಾಮಾಗ್ರಿ ಖರೀದಿಸಿದ ಜನತೆ: ಜನ ಸಾಮಾನ್ಯರು ಹೂವು ಪೂಜಾ ಸಾಮಗ್ರಿಗಳ ಬೆಲೆಗಳನ್ನು ಕೇಳಿ, ಇದೇನು ಇಷ್ಟು ದರ ಎಂದು ಗೊಣಗುತ್ತಲೇ ಹಬ್ಬದ ಸಂಭ್ರಮದಿಂದ ಖರೀದಿಸುತ್ತಿದ್ದರು. ಭಾನುವಾರದಂದು ಜನ ದಟ್ಟಣೆ ಇಲ್ಲದಿರುವ ನಗರದ ಚಿಕ್ಕ ಅಂಗಡಿ ಬೀದಿ, ದೊಡ್ಡ ಅಂಗಡಿ ಬೀದಿ, ರಥದ ಬೀದಿಗಳು ಹಬ್ಬದ ಹಿನ್ನೆಲೆಯಲ್ಲಿ ಜನದಟ್ಟಣೆಯಿಂದ ಕೂಡಿದ್ದವು. ಹಬ್ಬದ ಹಿನ್ನೆಲೆಯಲ್ಲಿ ದಿನಸಿ ಅಂಗಡಿಗಳು ಸಹ ತೆರೆದಿದ್ದು, ಹಬ್ಬದ ಕಾರಣ ಜನರು ದಿನಸಿ ಸಾಮಾನುಗಳನ್ನು ಖರೀದಿಸಿದರು.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.