“ಕೆಎಂಎಫ್ನ್ನು ನಂ.1 ಮಾಡಿ’
Team Udayavani, Sep 2, 2019, 3:00 AM IST
ಗೋಕಾಕ: ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್)ಕ್ಕೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅರಭಾವಿ ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು.
ಮುಖ್ಯಮಂತ್ರಿಗಳ ಗೃಹ ನಿವಾಸ ಡಾಲರ್ ಕಾಲೋನಿಯಲ್ಲಿರುವ ಧವಳಗಿರಿ ನಿವಾಸಕ್ಕೆ ಶನಿವಾರ ರಾತ್ರಿ ಭೇಟಿ ನೀಡಿದ ಕೆಎಂಎಫ್ ಅಧ್ಯಕ್ಷ, ಬಾಲಚಂದ್ರ ಜಾರಕಿಹೊಳಿ, ತಮ್ಮ ಆಯ್ಕೆಗೆ ಸಹಕಾರ ನೀಡಿದ್ದಕ್ಕಾಗಿ ಸಿಎಂಗೆ ಕೃತಜ್ಞತೆ ಸಲ್ಲಿಸಿದರು.
ಜಾರಕಿಹೊಳಿಗೆ ಅಭಿನಂದನೆ ಸಲ್ಲಿಸಿದ ಯಡಿಯೂರಪ್ಪ, ಕೆಎಂಎಫ್ನ ಅಭಿವೃದ್ಧಿಗಾಗಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ರೈತಪರ ಯೋಜನೆಗಳನ್ನು ಅನುಷ್ಠಾನಗೊಳಿಸಿ ಕೆಎಂಎಫ್ನ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಕೆಎಂಎಫ್ನ್ನು ನಂ.1 ಸ್ಥಾನಕ್ಕೆ ತರಲು ಶ್ರಮಿಸಬೇಕು ಎಂದು ಸೂಚನೆ ನೀಡಿದರು.