ನೆರೆ ಮಧ್ಯೆಯೂ ಬೆನಕನ ಸಂಭ್ರಮ


Team Udayavani, Sep 2, 2019, 12:12 PM IST

bg-tdy-1

ಬೆಳಗಾವಿ: ಪ್ರತಿಷ್ಠಾಪನೆಗೆ ಸಿದ್ಧಗೊಂಡಿರುವ ಗಣೇಶ ಮೂರ್ತಿ.

ಬೆಳಗಾವಿ: ಅತ್ಯಂತ ವಿಜೃಂಭಣೆಯಿಂದ ಆಚರಿಸಲ್ಪಡುವ, ರಾಜ್ಯದಲ್ಲಿಯೇ ಮಾದರಿ ಎನಿಸಿಕೊಂಡ ವಿಘ್ನ ನಿವಾರಕ ಶ್ರೀ ಗಣೇಶನ ಹಬ್ಬಕ್ಕೆ ಬೆಳಗಾವಿ ಸಕಲ ರೀತಿಯಿಂದ ಸಜ್ಜಾಗಿದೆ. ಪ್ರವಾಹದ ಕಾರ್ಮೋಡದಲ್ಲಿಯೂ ಗಣಪನನ್ನು ಬರಮಾಡಿಕೊಳ್ಳಲು ಜನರು ಕಾತರರಾಗಿದ್ದಾರೆ.

ಮನೆ-ಮನಗಳಲ್ಲಿ ಗಣಪನನ್ನು ಪ್ರತಿಷ್ಠಾಪಿಸಲು ಕುಂದಾನಗರಿ ಸಜ್ಜುಗೊಂಡಿದೆ. ಮುಂಬೈ ಹಾಗೂ ಪುಣೆ ನಂತರ ಬೆಳಗಾವಿಯ ಗಣೇಶೋತ್ಸವ ಎಲ್ಲೆಡೆ ಪ್ರಖ್ಯಾತಿ ಪಡೆದುಕೊಂಡಿದೆ. ಬೇರೆ ಬೇರೆ ಜಿಲ್ಲೆ, ರಾಜ್ಯಗಳ ಜನರೂ ಗಣೇಶನ ಹಬ್ಬ ವೀಕ್ಷಿಸಲು ಬೆಳಗಾವಿಗೆ ಆಗಮಿಸುತ್ತಾರೆ. ಇಂತಹ ವಿಶೇಷ ಮೆರಗು ನೀಡುವ ಬೆನಕನ ಹಬ್ಬಕ್ಕೆ ಈ ಬಾರಿ ಪ್ರವಾಹದ ಕಾರ್ಮೋಡ ಕವಿದಿದ್ದರೂ ಸಂಪ್ರದಾಯದಲ್ಲಿ ಯಾವುದೇ ಕಡಿಮೆ ಕಂಡು ಬರುತ್ತಿಲ್ಲ.

ಗಣೇಶ ಹಬ್ಬಕ್ಕಾಗಿ ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ತಯಾರಿ ಜೋರಾಗಿ ನಡೆದಿದೆ. ಸಾರ್ವಜನಿಕ ಗಣಪತಿ ಮೂರ್ತಿಗಳ ಪ್ರತಿಷ್ಠಾಪನೆಗಾಗಿ ಮಂಟಪಗಳನ್ನು ಹಾಕಿ ವಿದ್ಯುತ್‌ ಅಲಂಕಾರಗಳ ತಯಾರಿ ನಡೆದಿದೆ. ನಗರದಲ್ಲಿ 380ಕ್ಕೂ ಹೆಚ್ಚು ಸೇರಿದಂತೆ ಜಿಲ್ಲೆಯಾದ್ಯಂತ ಮೂರು ಸಾವಿರಕ್ಕೂ ಹೆಚ್ಚು ಸಾರ್ವಜನಿಕ ಗಣೇಶ ಮೂರ್ತಿಗಳು ಪ್ರತಿಷ್ಠಾಪನೆ ಆಗುತ್ತವೆ. ಬಹುತೇಕ ಗಣೇಶ ಮಂಡಳಿಯವರು ಸರಳವಾಗಿ ಹಬ್ಬ ಆಚರಿಸಿ ಹೆಚ್ಚುವರಿ ಹಣವನ್ನು ನೆರೆ ಸಂತ್ರಸ್ತರಿಗೆ ನೀಡಲು ಮುಂದಾಗಿದ್ದಾರೆ.

ನಗರದ ಝಂಡಾ ಚೌಕೌದಲ್ಲಿ ಮೊದಲ ಸಾರ್ವಜನಿಕ ಗಣಪತಿಯನ್ನು ಲೋಕಮಾನ್ಯ ಬಾಲಗಂಗಾಧರ ಟಿಳಕರು ಪ್ರತಿಷ್ಠಾಪನೆ ಮಾಡಿದ್ದು, ಈಗಲೂ ಪ್ರತಿ ವರ್ಷ ಈ ಸ್ಥಳದಲ್ಲಿ ಗಣಪನನ್ನು ಪ್ರತಿಷ್ಠಾಪಿಸುವ ಸಂಪ್ರದಾಯ ಮುಂದುವರಿದುಕೊಂಡು ಬಂದಿದೆ. ಶ್ರೀಮಂತಿಕೆಯಿಂದ ಬೆಳೆದು ಬಂದಿರುವ ಹಬ್ಬ ಈಗಲೂ ತನ್ನ ಗತವೈಭವವನ್ನು ಕಡಿಮೆ ಆಗಿಲ್ಲ.

ಜಿಲ್ಲೆಯ ಬಹುತೇಕ ಹಳ್ಳಿಗಳು ಪ್ರವಾಹದಿಂದ ನಲುಗಿದ್ದು, ನೆರೆಯಲ್ಲಿ ಮುಳುಗಡೆಯಾದ ಹಳ್ಳಿಗಳಲ್ಲಿ ಕೆಲವು ಸಂಘ-ಸಂಸ್ಥೆಗಳು ಸಹಾಯ ಮಾಡಿ ಸಂತ್ರಸ್ತರೊಂದಿಗೆ ಹಬ್ಬ ಆಚರಿಸಲು ಸಿದ್ಧತೆ ಮಾಡಿಕೊಂಡಿವೆ. ಇನ್ನೂ ಕೆಲವು ಹಳ್ಳಿಗಳ ಓಣಿ ಓಣಿಗಳಲ್ಲಿ ಪ್ರತಿಷ್ಠಾಪನೆ ಆಗುವ ಗಣೇಶ ಮೂರ್ತಿ ಸಣ್ಣ ಪ್ರಮಾಣದಲ್ಲಿ ಮಾಡಲಾಗುತ್ತಿದೆ. ಮಹಾರಾಷ್ಟ್ರದಿಂದ ತರುತ್ತಿದ್ದ ಗಣಪತಿ ಮೂರ್ತಿಗಳ ಪ್ರಮಾಣದಲ್ಲಿ ಈ ಬಾರಿ ಗಣನೀಯವಾಗಿ ಇಳಿಕೆ ಕಂಡಿದೆ. ಸ್ಥಳೀಯವಾಗಿ ಮೂರ್ತಿಕಾರರಿಂದ ಗಣೇಶನನ್ನು ಖರೀದಿಸಿ ಪ್ರತಿಷ್ಠಾಪಿಸಲಾಗುತ್ತಿದೆ.

ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗಲಿ ಹಾಗೂ ಗೋಕಾಕ ತಾಲೂಕಿನ ಕೊಣ್ಣೂರದಲ್ಲಿ ಅತಿ ಹೆಚ್ಚು ಗಣಪತಿ ಮೂರ್ತಿಗಳು ತಯಾರಾಗುತ್ತವೆ. ಈ ಭಾಗದಲ್ಲಿ ಅತಿ ಹೆಚ್ಚು ಪ್ರವಾಹ ಬಂದು ಎಷ್ಟೋ ಗಣಪತಿ ಮೂರ್ತಿಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಮೂರ್ತಿಗಳೇ ಇಲ್ಲದಂಥ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಬೇರೆ ಬೇರೆ ಪ್ರದೇಶಗಳಿಂದ ಜನರು ಮೂರ್ತಿಗಳನ್ನು ಖರೀದಿಸಿ ಪ್ರತಿಷ್ಠಾಪಿಸುತ್ತಿದ್ದಾರೆ.

ಗಣಪತಿ ಮೂರ್ತಿ ಪ್ರತಿಷ್ಠಾಪನೆಗಾಗಿ ಅಗತ್ಯ ಇರುವ ಪೂಜಾ ಸಾಮಗ್ರಿಗಳನ್ನು ಖರೀದಿಸಲು ಭಕ್ತರು ನಗರದ ಮಾರುಕಟ್ಟೆಯಲ್ಲಿ ಮುಗಿ ಬಿದ್ದಿದ್ದಾರೆ. ಹೂ-ಹಣ್ಣು, ಮಾಲೆಗಳನ್ನು ಖರೀದಿಸುತ್ತಿದ್ದಾರೆ. ಈ ಸಲ ಹೂವಿನ ದರ ಹೆಚ್ಚಾಗಿದ್ದು, ಜನರ ಜೇಬಿಗೆ ಕತ್ತರಿ ಬೀಳುತ್ತಿದೆ. ಗಣೇಶನ ಮೂರ್ತಿ ಅಲಂಕಾರಕ್ಕೆ ಚಿಕ್ಕ ಚಿಕ್ಕ ಥರ್ಮಾಕೋಲ್ ಮಂಟಪಗಳು, ವಿದ್ಯುತ್‌ ದೀಪಗಳು, ಅಲಂಕಾರಿಕ ವಸ್ತುಗಳನ್ನು ಜನರು ಖರೀದಿಸುತ್ತಿದ್ದಾರೆ.

ಸೆ.2ರಂದು ಪ್ರತಿಷ್ಠಾಪನೆ ಆಗುವ ಗಣಪನಿಗೆ 5,7, 9 ಹಾಗೂ 11 ದಿನಗಳವರೆಗೆ ಪೂಜಿಸಲಾಗುತ್ತದೆ. ಬಹುತೇಕ ಮನೆಯಲ್ಲಿ ಪ್ರತಿಷ್ಠಾಪನೆ ಆಗುವ ಗಣಪನ ಮೂರ್ತಿಗಳನ್ನು ಐದನೇ ದಿನಕ್ಕೆ ವಿಸರ್ಜನೆ ಮಾಡಲಾಗುತ್ತದೆ. 11ನೇ ದಿನಕ್ಕೆ ಅತಿ ಹೆಚ್ಚು ಮೂರ್ತಿಗಳ ಪ್ರತಿಷ್ಠಾಪನೆ ಆಗುತ್ತವೆ.

ಪ್ರವಾಹದ ಬಿಸಿ: ಜಿಲ್ಲೆಯಾದ್ಯಂತ ಪಟಾಕಿ-ಮನರಂಜನೆಗೆ ಬ್ರೇಕ್‌

ಈ ಬಾರಿ ಪ್ರವಾಹದ ಬಿಸಿ ಎಲ್ಲೆಡೆಯೂ ತಟ್ಟಿದ್ದರಿಂದ ಜಿಲ್ಲೆಯಾದ್ಯಂತ ಈ ಬಾರಿ ಗಣೇಶೋತ್ಸವಕ್ಕೆ ಪಟಾಕಿ ಸಿಡಿ ಮದ್ದುಗಳ ಅಬ್ಬರಕ್ಕೆ ಕಡಿವಾಣ ಹಾಕಲಾಗಿದೆ. ಜನತೆಗೆ ಸಾರ್ವಜನಿಕ ಗಣೇಶ ಮಂಡಳದವರು ಹಮ್ಮಿಕೊಳ್ಳುತ್ತಿದ್ದ ಸಾಂಸ್ಕೃತಿಕ ಹಾಗೂ ಮನರಂಜನೆ ಕಾರ್ಯಕ್ರಮಗಳಿಗೆ ಬಾರಿ ಬ್ರೇಕ್‌ ಹಾಕಲಾಗಿದೆ. ಭಕ್ತರಿಂದ ಸಂಗ್ರಹವಾಗುವ ಕಾಣಿಕೆ ಹಣವನ್ನು ಹಾಗೂ ಸರಳ ಆಚರಣೆ ಮಾಡಿ ಹೆಚ್ಚುವರಿ ಆಗಿ ಉಳಿಯುವ ಹಣವನ್ನು ಸಂತ್ರಸ್ತರ ನೆರವಿಗೆ ನೀಡಲು ಮಂಡಳದವರು ನಿರ್ಧರಿಸಿದ್ದಾರೆ.
•ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.