ಶಿಕ್ಷಣದಿಂದ ಸಮಾಜ ಅಭಿವೃದ್ಧಿ

•ಬಸವಣ್ಣನ ಆದರ್ಶ ಪಾಲಿಸುತ್ತಿದೆ ಬಣಜಿಗ ಸಮಾಜ•ಬಡ ಮಕ್ಕಳಿಗೆ ಸಹಾಯ ಮಾಡಿ

Team Udayavani, Sep 2, 2019, 12:56 PM IST

kopala-tdt-01

ಕೊಪ್ಪಳ: ಮಹಾವೀರ ಕಲ್ಯಾಣ ಮಂಟಪದಲ್ಲಿ ನಡೆದ ತಾಲೂಕು ಬಣಜಿಗ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಸಮಾವೇಶವನ್ನು ಗಣ್ಯರು ಉದ್ಘಾಟಿಸಿದರು.

ಕೊಪ್ಪಳ: ಯಾವುದೇ ಒಂದು ಸಮಾಜದ ಅಭಿವೃದ್ಧಿ ಶಿಕ್ಷಣದಲ್ಲಿ ಅಡಗಿದೆ. ಬಣಜಿಗ ಸಮಾಜ ಕಾಯಕ ಬಂಧು ಸಮಾಜವಾಗಿದೆ. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಮುಂದಾಗಬೇಕೆಂದು ಸಂಸದ ಸಂಗಣ್ಣ ಕರಡಿ ಹೇಳಿದರು.

ನಗರದ ಮಹಾವೀರ ಕಲ್ಯಾಣ ಮಂಟದಲ್ಲಿ ತಾಲೂಕು ಬಣಜಿಗ ಸಂಘದ ಪದಾಧಿಕಾರಿಗಳ ಪದಗ್ರಹಣ ಹಾಗೂ ಸಮಾವೇಶದಲ್ಲಿ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಣಜಿಗ ಸಮಾಜ ಕಾಯಕವೇ ಕೆೈಲಾಸ ಎಂದು ಬಸವಣ್ಣನ ತತ್ವದಡಿ ಜೀವನ ನಡೆಸಿದೆ. ಇಲ್ಲಿನ ಜನತೆ ಅರ್ಥಶಾಸ್ತ್ರದಂತೆ ಲೆಕ್ಕಾಚಾರ, ಚಾಣಿಕ್ಯನ ನೀತಿಯಂತೆ ಕೆಲಸ ಮಾಡುತ್ತಿದ್ದಾರೆ. ಸಮಾಜವು ತಕ್ಕಡಿಯಲ್ಲಿ ಹೇಗೆ ಲೆಕ್ಕಾಚಾರ ಮಾಡುವರೋ ಅದೇ ರೀತಿ ನ್ಯಾಯಯುತವಾಗಿ ಜೀವನ ನಡೆಸಿ ಇತರರಿಗೆ ಮಾದರಿಯಾಗಿದೆ. ಕರ್ನಾಟಕ ರಾಜ್ಯಕ್ಕೆ ಬಣಜಿಗ ಸಮಾಜವು 7 ಮುಖ್ಯಮಂತ್ರಿಗಳನ್ನು ಕೊಟ್ಟ ಕೀರ್ತಿ ಹೊಂದಿದೆ. ವಿಜಯ ಸಂಕೇಶ್ವರ ಅವರಂತ ವ್ಯಕ್ತಿ ಇಂದು ಬಹು ದೊಡ್ಡ ಉದ್ಯಮ ಸ್ಥಾಪನೆ ಮಾಡಿ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ. ಇವರೊಟ್ಟಿಗೆ ಹಲವು ಮುಖಂಡರು ಉದ್ಯಮದಲ್ಲಿ ತಮ್ಮ ಜೀವನ ಕಂಡುಕೊಂಡಿದ್ದಾರೆ. ಬಡ ಕುಟುಂಬಕ್ಕೆ ಉದ್ಯೋಗ ನೀಡಿ ಅವರ ಜೀವನಕ್ಕೂ ದಾರಿಯಾಗಿದ್ದಾರೆ. ಈ ಸಮಾಜದ ಅಭಿವೃದ್ಧಿಗೆ ಶಿಕ್ಷಣಕ್ಕೆ ಒತ್ತು ನೀಡಿದಾಗ ಮಾತ್ರ ಅಭಿವೃದ್ಧಿ ಕಾಣಲು ಸಾಧ್ಯವಿದೆ ಎಂದರು.

ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಮಾತನಾಡಿ, ಬಣಜಿಗ ಸಮಾಜ ಕಾಯಕವೇ ಕೆೈಲಾಸ ಎಂದು ನಂಬಿ ಕೆಲಸ ಮಾಡುವ ಸಮಾಜವಾಗಿದೆ. ಬಸವಣ್ಣನ ತತ್ವ ಆದರ್ಶದಲ್ಲಿ ಬದುಕಿದ ಸಮಾಜವಾಗಿದೆ. ಇಲ್ಲಿಯೂ ಬಡವರು ತುಂಬ ಜನ ಇದ್ದಾರೆ. ಶ್ರೀಮಂತರು ಸಮಾಜದ ಬಡ ಮಕ್ಕಳಿಗೆ ನೆರವಾಗಿ ಶಿಕ್ಷಣ ಕೊಡಿಸುವ ಕೆಲಸ ಮಾಡಬೇಕು. ಅವರನ್ನು ಮೇಲೆತ್ತುವ ಕೆಲಸ ಎಲ್ಲರಿಂದ ನಡೆಯಬೇಕು. ಜೊತೆಗೆ ಒಕ್ಕಟ್ಟಿನಿಂದ ಕೆಲಸ ಮಾಡಿದರೆ ಸಮಾಜ ರಾಜ್ಯದಲ್ಲಿಯೇ ಮಾದರಿಯಾಗಲಿದೆ ಎಂದರು.

ಶಾಸಕ ರಾಘವೇಂದ್ರ ಹಿಟ್ನಾಳ ಮಾತನಾಡಿ, ಬಣಜಿಗ ಸಮಾಜವು ಬಸವಣ್ಣನ ಆದರ್ಶಗಳಂತೆ ನಡೆದು ಜೀವನ ನಡೆಸುತ್ತಿದೆ. ಇಲ್ಲಿ ಸಮಾಜಕ್ಕೆ ನಮ್ಮ ಕೊಡುಗೆ ಏನು ಎನ್ನುವುದು ಮುಖ್ಯ. ಹಾಗಾಗಿ ಸಮಾಜದ ಮುಖಂಡರು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಅಭಿವೃದ್ಧಿಯತ್ತ ಸಾಗುವಂತೆ ಕರೆ ನೀಡಿದರು. ಬಣಜಿಗ ಸಮಾಜದ ರಾಜ್ಯಾಧ್ಯಕ್ಷ ಡಾ| ಶಿವಬಸಪ್ಪ ಹೆಸರೂರು ಮಾತನಾಡಿದರು. ಶ್ರೀಶೈಲ ಅಂಗಡಿ, ಶಿವಬಸಪ್ಪ, ರುದ್ರಣ್ಣ ಹೊಸಕೇರಿ, ಪ್ರೇಮಕ್ಕ ಅಂಗಡಿ, ಅಂದಣ್ಣ ಜವಳಿ, ವಿಶ್ವನಾಥ ಬಳೊಳ್ಳಿ, ರೇಣುಕಾ ಪಾಟೀಲ, ವೀರಣ್ಣ ಬುಳ್ಳಾ, ರಾಜಶೇಖರ ಅಂಗಡಿ, ಮಂಜುನಾಥ ಅಂಗಡಿ, ಅಪರ್ಣಾ ಬಳ್ಳೊಳ್ಳಿ, ಚನ್ನಬಸಪ್ಪ ಬಳ್ಳೊಳ್ಳಿ, ಶೇಖರಪ್ಪ, ಎಸ್‌.ಎಸ್‌. ಪಟ್ಟಣಶೆಟ್ಟರ್‌, ಬಸಟ್ಟೆಪ್ಪ, ವಿರೇಶ ಚಿನಿವಾರ, ಶರಣ ಬಸವರಾಜ, ರಾಜೇಶ ವಾಲಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

11-

Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.