ಬರ-ನೆರೆ ಮಧ್ಯೆ ಗಣೇಶ ಹಬ್ಬಕ್ಕೆ ಗಣಿನಾಡು ಸಜ್ಜು

•ಜನರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ •ವ್ಯಾಪಾರದಲ್ಲಿ ಕುಸಿತ- ಮಾರಾಟಗಾರರಲ್ಲಿ ಆತಂಕ

Team Udayavani, Sep 2, 2019, 1:21 PM IST

ballary-tdy-1

ಬಳ್ಳಾರಿ: ಗಣೇಶ ಹಬ್ಬ ಆಚರಣೆಗೆ ಮಹಿಳೆಯೊಬ್ಬರು ಗಣೇಶ ವಿಗ್ರಹ ಖರೀದಿಸುತ್ತಿರುವುದು.

ಬಳ್ಳಾರಿ: ಬರಗಾಲ, ನೆರೆಹಾವಳಿಯಲ್ಲೂ ವಿಘ್ನಗಳ ನಿವಾರಕ ವಿನಾಯಕನ ಹಬ್ಬವನ್ನು ಆಚರಿಸಲು ಗಣಿನಾಡು ಬಳ್ಳಾರಿ ಜಿಲ್ಲೆ ಸಿದ್ಧಗೊಂಡಿದ್ದು ಬೆಲೆ ಏರಿಕೆ ನಡುವೆ ಹಬ್ಬ ಕಳೆಗಟ್ಟಿದೆ.

ಗಣೇಶನ ಹಬ್ಬಕ್ಕೆ ಗಣಿನಾಡು ಬಳ್ಳಾರಿ ಸಿದ್ಧಗೊಂಡಿದೆ. ಮನೆಮನೆಗಳಲ್ಲಿ, ಓಣಿ, ಬಡಾವಣೆಗಳಲ್ಲಿ ವಿನಾಯಕನನ್ನು ಪ್ರತಿಷ್ಠಾಪಿಸಲು ಟೆಂಟ್‌ಗಳು ಸಿದ್ಧಗೊಂಡಿದೆ. ಬೆಲೆ ಏರಿಕೆ ನಡುವೆಯೂ ಪರಿಸರ ಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳಿಗೆ ಬೇಡಿಕೆ ಹೆಚ್ಚಾಗಿದೆ. ಮನೆಗಳಲ್ಲೇ ಪ್ರತಿಷ್ಠಾಪಿಸಿ ಹಬ್ಬ ಆಚರಿಸುವ ಗ್ರಾಹಕರು, ಚಿಕ್ಕ ಚಿಕ್ಕ ಮಣ್ಣಿನ ಗಣಪನ ಮೂರ್ತಿಯನ್ನೂ ದುಬಾರಿ ಬೆಲೆಗೆ ಖರೀದಿಸಿ ಹಬ್ಬವನ್ನು ಆಚರಿಸಲು ಸಿದ್ಧತೆ ನಡೆಸುತ್ತಿದ್ದಾರೆ.

ನಗರದ ನಾನಾಕಡೆ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಮಾರಾಟ ಕಂಡುಬರುತ್ತಿದೆ. ರಾಜ್ಯದ ಬೆಂಗಳೂರು ಸೇರಿದಂತೆ ಸ್ಥಳೀಯ ಕೆಲವೆಡೆ ಹಾಗೂ ನೆರೆಯ ಆಂಧ್ರದಿಂದಲೂ ಸಹ ಗಣೇಶನ ವಿಗ್ರಹಗಳು ಮಾರುಕಟ್ಟೆಗೆ ಮೂರು ದಿನ ಮುನ್ನವೇ ಬಂದಿದ್ದು, ಈ ಬಾರಿ ವ್ಯಾಪಾರವೂ ಇಲ್ಲದಿರುವುದರಿಂದ ವಿಗ್ರಹ ಮಾರಾಟಗಾರರಲ್ಲಿ ಆತಂಕ ಮನೆಮಾಡಿದೆ. ಬರ ಆವರಿಸಿರುವುದರಿಂದ ಹಬ್ಬದ ಸಂಭ್ರಮ ಎಲ್ಲೆಡೆ ಕಂಡುಬರುತ್ತಿಲ್ಲ. ಉತ್ತಮ ಮಳೆಯಾಗಿ ಬೆಳೆಯೂ ಚೆನ್ನಾಗಿ ಬಂದಿದ್ದರೆ ರೈತರಲ್ಲಿ ಸಂಭ್ರಮ ಇರುತ್ತಿತ್ತು, ಸುತ್ತಮುತ್ತಲಿನ ಹಳ್ಳಿಗಳಿಂದ ನಗರಕ್ಕೆ ಬಂದು ಗಣೇಶ ಮೂರ್ತಿಗಳ ಖರೀದಿಗೆ ಮುಂದಾಗುತ್ತಿದ್ದರು. ಆದರೆ ಆ ವಾತಾವರಣ ಇದೀಗ ಕಾಣದಾಗಿದೆ. ಅಷ್ಟೇ ಅಲ್ಲ ಬೆಲೆ ಏರಿಕೆಯ ಬಿಸಿಯೂ ಸಹ ಜನರಲ್ಲಿ ಉತ್ಸಾಹವನ್ನೂ ಕುಗ್ಗಿಸಿದೆ.

ಹೆಚ್ಚಿದ ಹೂವು, ಹಣ್ಣುಗಳ ಬೆಲೆ: ಗಣೇಶನ ಹಬ್ಬಕ್ಕೆಂದು ವಿಧವಾದ ಹಣ್ಣುಗಳು ಈಗಾಗಲೇ ಮಾರುಕಟ್ಟೆಯಲ್ಲಿ ಲಭ್ಯವಿದೆ. ಬೆಲೆ ಏರಿಕೆಯಿಂದಾಗಿ ಮಾರಾಟದ ಪ್ರಮಾಣ ಕಡಿಮೆಯಾಗಿದೆ. ಸೇಬು, ದಾಳಿಂಬೆ, ದ್ರಾಕ್ಷಿ ಹಣ್ಣುಗಳು ಕೆಜಿ 100 ರೂ. ಇದೆ. ಡಜನ್‌ ಬಾಳೆಹಣ್ಣು 50 ರೂ, ಪೇರಲಹಣ್ಣು 60 ರೂ.ಬೆಲೆ ಇದೆ. ಗ್ರಾಹಕರು ತೀರಾ ಚೌಕಾಸಿ ಮಾಡಿದರೆ 5ರಿಂದ 10 ರೂ. ರಿಯಾಯಿತಿ ದೊರೆಯುತ್ತದೆ ಹೊರತು, ಅದಕ್ಕೂ ಕಡಿಮೆ ಕೇಳಿದರೆ ಬೆಳಗ್ಗೆಯಿಂದ ವ್ಯಾಪಾರವೇ ಆಗಿಲ್ಲ. ಸಿಗೋ 10 ರೂಗಳಲ್ಲೂ ಚೌಕಾಸಿ ಮಾಡುತ್ತಾರೆ ಎಂದು ಮಾರಾಟಗಾರರು ಗೊಣಗುತ್ತಾರೆ. ಇದರಿಂದ ಜನಸಾಮಾನ್ಯರು ಹಣ್ಣುಗಳನ್ನು ಖರೀದಿಸಲು ಹಿಂದೇಟು ಹಾಕುವಂತಾಗಿದೆ. ಆದರೆ, ಹಬ್ಬಕ್ಕೆ ಹಣ್ಣುಗಳು ಬೇಕಾಗಿರುವುದರಿಂದ ಕಡಿಮೆ ಬೆಲೆಗೆ ಲಭಿಸುವ ಹಣ್ಣುಗಳನ್ನು ಖರೀದಿಸಲು ಗ್ರಾಹಕರು ಮುಂದಾಗುತ್ತಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ವ್ಯಾಪಾರ ತುಂಬಾ ಕಡಿಮೆಯಿದೆ. ಹಬ್ಬದ ದಿನದಂದು ಉತ್ತಮ ವ್ಯಾಪಾರವಾಗುವ ನಿರೀಕ್ಷೆಯಿದೆ ಎಂದು ಆಶಯ ವ್ಯಕ್ತಪಡಿಸುತ್ತಾರೆ ಹಣ್ಣಿನ ವ್ಯಾಪಾರಿ ಗಾದಿಲಿಂಗ.

ಹೆಚ್ಚಿದ ಹೂವಿನ ಬೆಲೆ: ಮಳೆ ಇಲ್ಲದಿರುವ ಕಾರಣ ಹೂವಿನ ಬೆಲೆಯಲ್ಲೂ ಹೆಚ್ಚಳ ಕಂಡುಬಂದಿದೆ. ಕನಕಾಂಬರಿ 800ರೂಗೆ ಕೆಜಿ, ಮಲ್ಲಿಗೆ 240ರೂಗೆ ಕೆಜಿ, ಸುಗಂಧರಾಜ ಹೂವು 200 ರೂ., ಗುಲಾಬಿ 200ರೂ., ಚಂಡು ಹೂವು 100ರೂ.ಗೆ ಒಂದು ಕೆಜಿ ಇದೆ. ಸೋಮವಾರ ಹಬ್ಬ ಇರುವುದರಿಂದ ಹೂವಿನ ಬೆಲೆಯಲ್ಲೂ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಹೂವಿನ ವ್ಯಾಪಾರಿ ಹೊನ್ನೂರಸ್ವಾಮಿ. ಹಬ್ಬಕ್ಕೆಂದು ನಾನಾ ವಿಧದ ಹೂವುಗಳನ್ನು ಮಾರಾಟಕ್ಕೆಂದು ತಂದಿದ್ದೇವೆ ಆದರೆ ವ್ಯಾಪಾರ ಮಾತ್ರ ತುಂಬಾ ಕಡಿಮೆಯಿದೆ, ತಂದ ಹೂವುಗಳು ಸಹ ಬಾಡುತ್ತಿವೆ ಎಂದು ಬೇಸರ ವ್ಯಕ್ತಪಡಿಸುತ್ತಾರೆ.

ನಾನಾ ಅಲಂಕಾರಿಕ ವಸ್ತುಗಳ ಮಾರಾಟ: ವಿನಾಯಕನ ಹಬ್ಬ ಆಚರಣೆಗೆಂದು ಟೆಂಟ್‌ಗಳನ್ನು ನಿರ್ಮಿಸಿಕೊಂಡು ಸಿದ್ದತೆ ಮಾಡಿಕೊಂಡಿರುವ ಯುವಕರು, ಟೆಂಟ್‌ಗಳನ್ನು ಅಲಂಕರಿಸಲು ಬೇಕಾದ ಚಿತ್ತಾರದ ವಿದ್ಯುತ್‌ ದೀಪಗಳನ್ನು ಖರೀದಿಸುವಲ್ಲಿ ನಿರತರಾಗಿದ್ದರು. ಹೂ ಕುಂಡಗಳು, ಬಣ್ಣಬಣ್ಣದ ಚಿಕ್ಕ ಗಾತ್ರದ ವಿದ್ಯುತ್‌ ಬಲ್ಬ್ಗಳು, ಬಾಳೆಕಂಬ, ವೀಳ್ಯದೆಲೆ ಖರೀದಿಸುವ ಭರಾಟೆ ಜೋರಿತ್ತು.

ನಿರೀಕ್ಷಿತ ವ್ಯಾಪಾರವಿಲ್ಲ:

ಕಳೆದ ವರ್ಷಕ್ಕೆ ಹೋಲಿಸಿದರೆ, ಪ್ರಸಕ್ತ ವರ್ಷ ವ್ಯಾಪಾರದಲ್ಲಿ ಭಾರಿ ವ್ಯತ್ಯಾಸವಾಗಿದೆ. ಪಿಒಪಿ ಗಣೇಶ ವಿಗ್ರಹಗಳ ಮಾರಾಟಕ್ಕೆ ಬ್ರೇಕ್‌ ಬಿದ್ದಿರುವುದರಿಂದ ಮಣ್ಣಿನ ಗಣೇಶ ವಿಗ್ರಹಗಳಿಗೆ ಬೇಡಿಕೆ ಹೆಚ್ಚಿದೆ. ಜತೆಗೆ ಬೆಲೆಯೂ ಏರಿಕೆಯಾಗಿದೆ. ಹಾಗಾಗಿ ವ್ಯಾಪಾರವೂ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಪರಿಣಾಮ ವಿಗ್ರಹಗಳು ಸಹ ಮಾರಾಟವಾಗದೇ ಉಳಿದಿದ್ದು, ನಷ್ಟವಾಗುವ ಸಾಧ್ಯತೆಯಿದೆ. ಹಬ್ಬದ ದಿನದಂದು ನಿರೀಕ್ಷಿತ ಪ್ರಮಾಣದಲ್ಲಿ ವಿಗ್ರಹಗಳು ಮಾರಾಟವಾಗುವ ನಿರೀಕ್ಷೆಯಿದೆ.•ಎರ್ರಿಸ್ವಾಮಿ, ಗಣೇಶ ವಿಗ್ರಹ ಮಾರಾಟಗಾರ
•ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆBandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Bandipur: ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿದ ಹೆಣ್ಣಾನೆ

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

online

Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

ಪ್ರಜ್ವಲ್‌ ಪ್ರಕರಣ ತನಿಖೆಯಲ್ಲಿದ್ದರೂ ಬಿಜೆಪಿಯಿಂದ ರಾಜಕೀಯ:ಸಚಿವ ಬಿ. ನಾಗೇಂದ್ರ

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

Lok Sabha Elections ಬಿಜೆಪಿ ಗೆಲ್ಲುವ 400 ಸ್ಥಾನಗಳಲ್ಲಿ ನಾನೂ ಒಬ್ಬ: ಶ್ರೀರಾಮುಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqeqwe

List ಅಲ್ಲಿ ಹೆಸರಿಲ್ಲದೆ ಮಮತಾ ಬ್ಯಾನರ್ಜಿ ಸಹೋದರನಿಗೆ ಮತ ಹಾಕಲು ಸಾಧ್ಯವಾಗಲಿಲ್ಲ!

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Hunsur ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಛಾವಣಿ; ಬ್ಯಾರನ್‌ಗೂ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.