ಸರ್ಕಾರಿ ಪ್ರೌಢಶಾಲೆ ಕಟ್ಟಡ ಉದ್ಘಾಟನೆ
Team Udayavani, Sep 2, 2019, 2:31 PM IST
ಭಾಲ್ಕಿ: ಮೆಹಕರ್ ಗ್ರಾಮದಲ್ಲಿನ ನೂತನ ಸರಕಾರಿ ಪ್ರೌಢಶಾಲೆ ಕಟ್ಟಡವನ್ನು ಶಾಸಕ ಈಶ್ವರ ಖಂಡ್ರೆ ಉದ್ಘಾಟಿಸಿದರು.
ಭಾಲ್ಕಿ: ತಾಲೂಕಿನ ಗಡಿ ಭಾಗದ ಮೆಹಕರ್ ಗ್ರಾಮದಲ್ಲಿ ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಯೋಜನೆಯಡಿ 1ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಸರಕಾರಿ ಪ್ರೌಢಶಾಲೆ ಕಟ್ಟಡವನ್ನು ಶಾಸಕ ಈಶ್ವರ ಖಂಡ್ರೆ ಉದ್ಘಾಟಿಸಿ, ಪರಿಶೀಲಿಸಿದರು.
ಬಳಿಕ ಕೆಲಕಾಲ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ವೇಳೆ ಶಾಸಕರ ಹಲವು ಪ್ರಶ್ನೆಗಳಿಗೆ ವಿದ್ಯಾರ್ಥಿಗಳು ಉತ್ತರ ಹೇಳಿ ಭೇಷ್ ಎನಿಸಿಕೊಂಡರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಾಲೆಗೆ ರಸ್ತೆ ವ್ಯವಸ್ಥೆ, ಆವರಣ ಗೋಡೆ, ಆಟದ ಮೈದಾನ ಸಮತಟ್ಟ ಮಾಡುವುದು, ಶುದ್ಧ ಕುಡಿವ ನೀರಿನ ವ್ಯವಸ್ಥೆ ಮಾಡುವುದು ಸೇರಿದಂತೆ, ಶಾಲೆಗೆ ಬಸ್ನಲ್ಲಿ ಬರುವಾಗ ನಿರ್ವಾಹಕ ಹಣ ಕೇಳುವುತ್ತಿರುವ ಕುರಿತು ಸಮಸ್ಯೆಗಳನ್ನು ಶಾಸಕರ ಎದುರು ತೆರೆದಿಟ್ಟರು.
ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿದ ಶಾಸಕರು, ತಕ್ಷಣ ಸಾರಿಗೆ ಘಟಕ ವ್ಯವಸ್ಥಾಪಕರಿಗೆ ದೂರವಾಣಿ ಮೂಲಕ ಮಾತನಾಡಿ, ಬಸ್ನ ನಿರ್ವಾಹಕರು ವಿದ್ಯಾರ್ಥಿಗಳಿಂದ ಹಣ ಪಡೆಯದಿರುವಂತೆ ಸೂಚನೆ ನೀಡಿದರು.
ರಾಷ್ಟ್ರೀಯ ಮಾಧ್ಯಮಿಕ ಯೋಜನೆಯಡಿ 1ಲಕ್ಷ ರೂ. ಅನುದಾನ ಬಳಕೆ ಮಾಡಿಕೊಂಡು ಎರಡ್ಮೂರು ದಿನಗಳಲ್ಲಿ ಶುದ್ಧ ಕುಡಿವ ನೀರಿನ ಘಟಕ ಅಳವಡಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ, ಮುಖ್ಯಶಿಕ್ಷಕರಿಗೆ ಸೂಚನೆ ನೀಡಿದರು. ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರಿಗೆ ಮಾತನಾಡಿ, ಮುಖ್ಯ ರಸ್ತೆಯಿಂದ ಶಾಲೆ ವರೆಗೂ ಮೆಟಲಿಂಗ್ ರಸ್ತೆ ಮಾಡಿಕೊಡುವಂತೆ ಶಾಸಕರು ಸೂಚನೆ ನೀಡಿದರು. ಉತ್ತಮ ಶಿಕ್ಷಣ ಪಡೆದು ಹೆತ್ತ ತಂದೆ ತಾಯಿ ಹಾಗೂ ಕಲಿತ ಶಾಲೆಗೆ ಗೌರವ ತಂದು ಕೊಡುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ತಾಪಂ ಅಧ್ಯಕ್ಷೆ ಮೀರಾ ಜನಾರ್ಧನ, ಉಪಾಧ್ಯಕ್ಷ ಮಾರುತಿರಾವ್ ಮಗರ, ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ್, ಗ್ರಾಪಂ ಅಧ್ಯಕ್ಷ ಶಿವರಾಜ ತೋರಣೆ, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದನೂರ್, ಅಕ್ಷರ ದಾಸೋಹ ಯೋಜನೆ ಸಹಾಯಕ ನಿರ್ದೇಶಕ ಸೂರ್ಯಕಾಂತ ಪಾಟೀಲ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
MUST WATCH
ಹೊಸ ಸೇರ್ಪಡೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್