ಮತದಾರರ ಪಟ್ಟಿ ಪರಿಷ್ಕರಣೆಗೆ ಸೂಚನೆ

• ಸೆ.31ರವರೆಗೆ ಹೆಸರು ಸೇರ್ಪಡೆ-ತಿದ್ದುಪಡಿಗೆ ಅವಕಾಶ • ತಪ್ಪಾಗದಂತೆ ಜಾಗೃತಿ ವಹಿಸಿ: ಮಂಜುನಾಥ

Team Udayavani, Sep 2, 2019, 3:10 PM IST

rc-tdy-1

ದೇವದುರ್ಗ: ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಬೂತ್‌ ಮಟ್ಟದ ಅಧಿಕಾರಿಗಳು.

ದೇವದುರ್ಗ: ಸೆ.1ರಿಂದ 31ರವರೆಗೆ ಹೊಸ ಮತದಾರರ ಸೇರ್ಪಡೆ, ಹೆಸರು ತಿದ್ದುಪಡಿ, ವರ್ಗಾವಣೆ ಕಾರ್ಯ ನಡೆಯಲಿದೆ. ಬಿಎಲ್ಒಗಳು ಯಾವುದೇ ಲೋಪ ಆಗದಂತೆ ಮತ್ತು ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಹಶೀಲ್ದಾರ್‌ ಮಂಜುನಾಥ ಸೂಚನೆ ನೀಡಿದರು.

ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ರವಿವಾರ ನಡೆದ ಬಿಎಲ್ಒಗಳ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮತದಾರರ ಪಟ್ಟಿಯಲ್ಲಿ ಗೊಂದಲ ಉಂಟಾಗದಂತೆ ಕ್ರಮಬದ್ಧವಾಗಿ ಕರ್ತವ್ಯ ನಿರ್ವಹಿಸ ಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳು ಬರದಂತೆ ನೋಡಿಕೊಳ್ಳ ಬೇಕು. ಮೃತಪಟ್ಟ ಮತದಾರರು ಹೆಸರು ತೆಗೆದು ಹಾಕಬೇಕು ಎಂದರು.

ಪಟ್ಟಣ ಸೇರಿ ತಾಲೂಕಿನಾದ್ಯಂತ 265 ಬಿಎಲ್ಓಗಳಿದ್ದಾರೆ. ಬೂತ್‌ಮಟ್ಟದ ಅಧಿಕಾರಿಗಳು ಮನೆ ಮನೆಗಳಿಗೆ ಭೇಟಿ ನೀಡಿ ಹೆಸರು ಸೇರ್ಪಡೆ, ತಿದ್ದುಪಡಿ, ವರ್ಗಾವಣೆ ಸೇರಿ ಇತರೆ ಸಮಸ್ಯಗಳಿಗೆ ಸ್ಪಂದಿಸುವಂತೆ ಕೆಲಸ ಮಾಡಬೇಕು ಎಂದು ಹೇಳಿದರು. ಫಾರ್ಮ್ ನಂ. 6ಮತ್ತು 7ಸೇರಿ ಇತರೆ ಫಾರಂಗಳಲ್ಲಿ ಒಂದೊಂದು ಹಂತದ ಮಾಹಿತಿ ಲಭ್ಯವಿದೆ. ಹೀಗಾಗಿ ಯಾವುದೇ ಗೊಂದಲವಿಲ್ಲದಂತೆ ಹೆಸರು, ವಿಳಾಸ ತಪ್ಪಾಗದಂತೆ ನೋಡಿಕೊಂಡು ಕೆಲಸ ಮಾಡಬೇಕು ಎಂದು ಸೂಚಿಸಿದರು.

ಪುರಸಭೆ ಮಾಜಿ ಸದಸ್ಯ ಚಂದ್ರಶೇಖರ ಚಲುವಾದಿ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ಮೃತಪಟ್ಟ ಮತದಾರರ ಹೆಸರು ಮತಪಟ್ಟಿಯಲ್ಲಿವೆ. ತೆಗೆದು ಹಾಕುವಂತೆ ಬಿಎಲ್ಒಗಳ ಗಮನಕ್ಕೆ ತಂದರೂ ತೆಗೆದು ಹಾಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಸಾಪ ತಾಲೂಕು ಅಧ್ಯಕ್ಷ ಎಚ್. ಶಿವರಾಜ ಮಾತನಾಡಿ, ಗಣಕಯಂತ್ರ ಸಿಬ್ಬಂದಿಗಳ ಎಡವಟ್ಟಿನಿಂದ ಮತದಾರರ ಪಟ್ಟಿಯಲ್ಲಿ ಹೆಸರುಗಳು ತಪ್ಪಾಗಿ ಮುದ್ರಿತವಾಗುತ್ತಿವೆ ಸಭೆ ಗಮನಕ್ಕೆ ತಂದರು. ಬಿಎಲ್ಒಗಳು ಮತದಾರ ಪಟ್ಟಿಯಲ್ಲಿ ತಪ್ಪಾಗದಂತೆ ನಿಗಾವಹಿಸಿ ಕೆಲಸ ಮಾಡಬೇಕು ಎಂದು ತಹಶೀಲ್ದಾರ್‌ ಸೂಚಿಸಿದರು.

ವಿವಿಧ ಸಂಘಟನೆ ಪದಾಧಿಕಾರಿಗಳು ಮತದಾರ ಪಟ್ಟಿಯಲ್ಲಿರುವ ಗೊಂದಲದ ಬಗ್ಗೆ ಸಭೆ ಗಮನಕ್ಕೆ ತಂದರು. ಸೆ.3ರಂದು ಹೋಬಳಿವಾರು ಬಿಎಲ್ಓಗಳ ಸಭೆ ಕರೆದು ಯಾವುದೇ ಗೊಂದಲಗಳು ಉಂಟಾದಂತೆ ನಿಗಾವಹಿಸಿ ಕೆಲಸ ಮಾಡಬೇಕು ಎಂದು ಎಚ್ಚರಿಕೆ ನೀಡಲಾಗುತ್ತದೆ ಎಂದು ತಹಶೀಲ್ದಾರ್‌ ತಿಳಿಸಿದರು.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.