ವೈದ್ಯರ ಮೇಲೆ ಹಲ್ಲೆಗೆ 10 ವರ್ಷ ಜೈಲು?
Team Udayavani, Sep 4, 2019, 5:21 AM IST
ಹೊಸದಿಲ್ಲಿ: ಕರ್ತವ್ಯದಲ್ಲಿರುವ ವೈದ್ಯರ ಮೇಲೆ ಹಲ್ಲೆ ನಡೆಸಿದರೆ ಹತ್ತು ಲಕ್ಷ ರೂ. ದಂಡ ಮತ್ತು ಹತ್ತು ವರ್ಷಗಳ ವರೆಗೆ ಜೈಲು ಶಿಕ್ಷೆ!
ಕೇಂದ್ರ ಸರಕಾರ ಜಾರಿಗೊಳಿಸಲು ಉದ್ದೇಶಿಸಿರುವ ಆರೋಗ್ಯ ಸೇವೆಗಳ ಸಿಬಂದಿ ಮತ್ತು ಕ್ಲಿನಿಕಲ್ ಸಂಸ್ಥೆಗಳ (ಆಸ್ತಿ ನಷ್ಟ ಮತ್ತು ಹಿಂಸಾಚಾರ ನಿಷೇಧ) ಮಸೂದೆ 2019ರ ಪ್ರಧಾನ ಅಂಶ ಇದಾಗಿದೆ. ಅಸ್ಸಾಂನಲ್ಲಿ 73 ವರ್ಷದ ವೈದ್ಯರೊಬ್ಬರನ್ನು ಥಳಿಸಿ ಕೊಂದ ಘಟನೆಯ ಬೆನ್ನಲ್ಲೇ ಈ ಮಸೂದೆ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ ಪಡೆದುಕೊಳ್ಳಲು ಅದನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬಿಡುಗಡೆ ಮಾಡಿದೆ.
ವೈದ್ಯರ ಮೇಲೆ ಹೆಚ್ಚುತ್ತಿರುವ ಹಲ್ಲೆ ತಡೆ ಯುವ ನಿಟ್ಟಿನಲ್ಲಿ ಈ ಮಸೂದೆ ಸಿದ್ಧಪಡಿಸಲಾ ಗಿದೆ. ಅದರ ಬಗ್ಗೆ ಸಾರ್ವಜನಿಕರು ಅಭಿಪ್ರಾಯ ತಿಳಿಸುವ ನಿಟ್ಟಿಲ್ಲಿ ಕರಡು ಪ್ರತಿಯನ್ನು ಬಿಡುಗಡೆ ಮಾಡಿದ್ದೇವೆ ಎಂದು ಹಿರಿಯ ಅಧಿಕಾರಿ ತಿಳಿಸಿ ದ್ದಾರೆ. ವೈದ್ಯರ ಮೇಲೆ ಹಲ್ಲೆ, ಅವರ ಕ್ಲಿನಿಕ್, ಆಸ್ಪತ್ರೆಗೆ ಹಾನಿ ನಡೆಸಿದರೆ, ಆ ಪ್ರಕರಣ ಜಾಮೀನು ರಹಿತ ಅಪರಾಧ ಎಂದು ಮಸೂದೆ ಯಲ್ಲಿ ಸೂಚಿಸಲಾಗಿದೆ. ಗಾಯಗೊಂಡ ಆರೋಗ್ಯ ಸೇವೆಗಳ ಸಿಬಂದಿಗೆ ಸೂಕ್ತ ಪರಿಹಾರ ನೀಡುವ ಬಗ್ಗೆಯೂ ಅದರಲ್ಲಿ ಸಲಹೆ ಮಾಡಲಾಗಿದೆ.
ವೈದ್ಯರ ಮುಷ್ಕರ: ಈ ನಡುವೆ ಅಸ್ಸಾಂನಲ್ಲಿ ಹಿರಿಯ ವೈದ್ಯನನ್ನು ಕೊಂದಿರುವ ಘಟನೆ ಖಂಡಿಸಿ ರಾಜ್ಯಾದ್ಯಂತ ವೈದ್ಯರು ಮಂಗಳವಾರ ಕರ್ತವ್ಯಕ್ಕೆ ಹಾಜರಾಗದೇ ಮುಷ್ಕರ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ