ಪಿಡಿಒ ವರ್ಗಾವಣೆ: ನಿಟ್ಟುಸಿರು ಬಿಟ್ಟ ಜನಪ್ರತಿನಿಧಿಗಳು
Team Udayavani, Sep 4, 2019, 10:43 AM IST
ಜೋಯಿಡಾ: ನಾಗೋಡಾ ಪಿಡಿಒ ವರ್ಗಾವಣೆ ಹಿನ್ನೆಲೆಯಲ್ಲಿ ಗ್ರಾ.ಪಂ. ಸದಸ್ಯರು ಪತ್ರಿಕಾಗೋಷ್ಠಿ ನಡೆಸಿದರು.
ಜೋಯಿಡಾ: ತಾಲೂಕಿನ ನಾಗೋಡಾ ಗ್ರಾಪಂ ಅಭಿವೃದ್ಧಿಗೆ ಅಡ್ಡಿಪಡಿಸುತ್ತಿರುವ ಅಲ್ಲಿನ ಪಿಡಿಒರನ್ನು ಸ್ಥಳಿಯ ಶಾಸಕ ಆರ್.ವಿ.ದೇಶಪಾಂಡೆ ಮೇಲಾಧಿಕಾರಿಗಳಿಗೆ ಸೂಚನೆ ನೀಡಿ ವರ್ಗಾವಣೆ ಮಾಡಿಸುವ ಮೂಲಕ ಸಾರ್ವಜನಿಕರಿಗೆ ಸ್ಪಂದಿಸಿದ್ದಾರೆ. ಇದರಿಂದಾಗಿ ನಾವು ನಿಟ್ಟುಸಿರು ಬಿಡುವಂತಾಗಿದೆ ಎಂದು ಅಲ್ಲಿನ ಜನಪ್ರತಿನಿಧಿಗಳು ತಿಳಿಸಿದ್ದಾರೆ.
ನಾಗೋಡಾ ಗ್ರಾಪಂ ಅಧ್ಯಕ್ಷೆ ಚಂದನಾ ಮಿರಾಶಿ, ಸದಸ್ಯರಾದ ದಿಗಂಬರ ದೇಸಾಯಿ, ಸುಧಾಕರ್ ದೇಸಾಯಿ, ಲಕ್ಷ್ಮಿ ನಾಯ್ಕ ಮುಂತಾದವರು ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ, ನಾಗೋಡಾ ಗ್ರಾಪಂ ಅಭಿವೃದ್ಧಿ ಅಧಿಕಾರಿ ರವಿಕುಮಾರ ಗ್ರಾಮದ ಅಭಿವೃದ್ಧಿಗೆ ಸಹಕರಿಸದೆ, ಜನಸಾಮಾನ್ಯರ ಸಮಸ್ಯಗೆ ಸ್ಪಂದಿಸದೆ ಅಡ್ಡಿಪಡಿಸುತ್ತಿದ್ದ ಬಗ್ಗೆ ಇಲ್ಲಿನ ಜನಪ್ರತಿನಿಧಿಗಳು ಇಒಗೆ ದೂರು ಸಲ್ಲಿಸಿದ್ದೆವು. ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದಿದ್ದೆವು. ಆದರೆ ಪಿಡಿಒ ತನ್ನ ವರ್ತನೆ ಬದಲಾಯಿಸದ ಹಿನ್ನೆಲೆಯಲ್ಲಿ ಗ್ರಾಪಂ ಅಧ್ಯಕ್ಷೆ ಚಂದನಾ ಮಿರಾಶಿ ರಾಜೀನಾಮೆಗೆ ಇಂಗೀತ ವ್ಯಕ್ತಪಡಿಸಿದ್ದಳು. ಈ ವಿಷಯ ತಿಳಿದ ಶಾಸಕ ಆರ್.ವಿ. ದೇಶಪಾಂಡೆ ಕೂಡಲೇ ಪಿಡಿಒ ಬದಲಾವಣೆಗೆ ಕ್ರಮಕೈಗೊಂಡಿದ್ದಾರೆ. ಇದು ನಮಗೆ ಅತ್ಯಂತ ಖುಷಿ ನೀಡಿದ್ದು, ಗ್ರಾಪಂ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾನಂದ ದಬಗಾರ ಉಪಸ್ಥಿತರಿದ್ದರು. ಶಾಸಕರ ಶೀಘ್ರ ಸ್ಪಂದನೆಗೆ ನಾಗೋಡಾ ಗ್ರಾಮಸ್ಥರ ಪರವಾಗಿ ಅಭಿನಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ