ಬೇಡಿಕೆ ಈಡೇರಿಕೆಗೆ ಮಹಿಳಾ ಕಾರ್ಮಿಕರ ಆಗ್ರಹ


Team Udayavani, Sep 4, 2019, 11:23 AM IST

cb-tdy-1

ಗೌರಿಬಿದನೂರು: ವಿವಿಧ ಬೇಡಿಕೆಗಳನ್ನು ಈಡೆರಿಸುವಂತೆ ಆಗ್ರಹಿಸಿ ರೇಮಾಂಡ್ಸ್‌ ಕಾರ್ಖಾನೆಯ ಸುಮಾರು 2450 ಮಹಿಳಾ ಕಾರ್ಮಿಕರು ಕಾರ್ಖಾನೆ ಮುಂದೆ ಪ್ರತಿಭಟನೆ ನಡೆಸಿದರು.

ಕಳೆದ ಭಾನುವಾರ ಕಾರ್ಖಾನೆಯ ಮಹಿಳಾ ಕಾರ್ಮಿಕರು ಕೆಲಸ ಮುಗಿಸಿಕೊಂಡು ಆಟೋದಲ್ಲಿ ತಮ್ಮ ಗ್ರಾಮಗಳಿಗೆ ತೆರಳುತ್ತಿದ್ದಾಗ ಖಾಸಗಿ ಬಸ್‌ ಮತ್ತು ಆಟೋ ನಡುವೆ ಡಿಕ್ಕಿ ಸಂಭವಿಸಿ 3 ಜನ ಸಾವನ್ನಪ್ಪಿ, 8 ಜನರು ಗಾಯಾಳುಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ ರಜೆ ನೀಡಲಿ: ನಮ್ಮ ಬೇಡಿಕೆಯಂತೆ ಕಾರ್ಖಾನೆಯ ಆಡಳಿತ ಮಂಡಳಿ ಪ್ರತಿ ಭಾನುವಾರ ರಜೆ ನೀಡಿದ್ದರೆ ನಮ್ಮ ಸಹಪಾಠಿಗಳು ಸಾವನ್ನಪ್ಪುತ್ತಿರಲಿಲ್ಲ. ಈ ಸಾವಿಗೆ ಕಾರ್ಖಾನೆಯ ಹಿರಿಯ ಅಧಿಕಾರಿಗಳ ಧೋರಣೆಯೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಖಾನೆಯಲ್ಲಿ ಮಹಿಳಾ ಕಾರ್ಮಿಕರಿಗೆ ಕಿರುಕುಳ ನೀಡಲಾಗುತ್ತಿದೆ. ಕೇವಲ 7,200 ವೇತನ ನೀಡುತ್ತಿದ್ದು ಬೆಳಗ್ಗೆ 8.30 ರಿಂದ ಸಂಜೆ 5.30ರವರೆಗೆ ಕೆಲಸ ಮಾಡಬೇಕಿದೆ. ಆದರೆ ವೇತನ ಮಾತ್ರ ಹೆಚ್ಚಿಸಿಲ್ಲ. ಅನಾರೋಗ್ಯದ ಸಂದರ್ಭದಲ್ಲಿ ರಜೆ ನೀಡುತ್ತಿಲ್ಲ ಎಂದು ದೂರಿದರು.

ಸಂಬಳ ಕಡಿತ: ಅನಿವಾರ್ಯವಾಗಿ ಅರ್ಧ ಗಂಟೆ ವಿಳಂಬವಾಗಿ ಬಂದರೆ ಅರ್ಧ ದಿನದ ಸಂಬಳ ಕಡಿತ ಮಾಡುತ್ತಾರೆ. ನಾವೇ ರಜೆ ತೆಗೆದುಕೊಂಡರೆ 500 ರೂ. ಕಡಿತ ಮಾಡುತ್ತಾರೆ. ಅವರೇ ರಜೆ ನೀಡಿದರೆ 200 ಕಡಿತ ಮಾಡುತ್ತಾರೆ. ಕಾರ್ಖಾನೆ ಮಹಿಳಾ ಅಧಿಕಾರಿ ಮಣಿ ಎಂಬುವವರು ಕಾರ್ಮಿಕ‌ರಿಗೆ ಕಿರುಕುಳ ನೀಡುತ್ತಾರೆ. ಅನಗತ್ಯ ನಿಬಂಧನೆಗಳನ್ನು ವಿಧಿಸುತ್ತಾರೆ. ಅವರ ಮೇಲೆ ಕ್ರಮಕೈಗೊಳ್ಳಬೇಕು. ಮಹಿಳೆಯರ ವೈಯಕ್ತಿಕ ಆರೋಗ್ಯ ಸಮಸ್ಯೆಗಳಿಗೆ ಆದ್ಯತೆ ನೀಡುತ್ತಿಲ್ಲ ಎಂದು ಕಿಡಿಕಾರಿದರು.

ಬಸ್‌ ವ್ಯವಸ್ಥೆ ಕಲ್ಪಿಸಲಿ: 10 ಸಾವಿರ ರೂ. ಸಂಬಳ ಕೊಡಬೇಕು. ಗ್ರಾಮಗಳಿಗೆ ತೆರಳಲು ಬಸ್‌ ವ್ಯವಸ್ಥೆ ಮಾಡಬೇಕು, ಪ್ರತಿ ಭಾನುವಾರ ಕಡ್ಡಾಯವಾಗಿ ರಜೆ ನೀಡಬೇಕು, ಅನಾರೋಗ್ಯ, ವೈಯಕ್ತಿಕ ಆರೋಗ್ಯಗಳ ಸಮಸ್ಯೆಯಾದಾಗ ಮಹಿಳಾ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸಿ ಚಿಕಿತ್ಸೆಗೆ ಹಾಗೂ ರಜೆಗೆ ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಅಳಲು: ಒಂದು ವೃತ್ತಿಗೆ ನಮ್ಮನ್ನು ನೇಮಕ ಮಾಡಿ ಕೊಂಡು ಮೂರು ರೀತಿಯ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ. ಇದರಿಂದ ನಮಗೆ ಸಮಸ್ಯೆಯಾಗುತ್ತಿದೆ. ಊಟಕ್ಕೆ ಅರ್ಧಗಂಟೆ ಸಮಯವಿದ್ದರೂ ಹತ್ತು ನಿಮಿಷಕ್ಕೆ ವಿಜಲ್ ಹಾಕುತ್ತಾರೆ. ಕಡ್ಡಾಯವಾಗಿ ಷೂ ಹಾಕಿಕೊಂಡು ಬರಬೇಕೆಂದು ಒತ್ತಾಯ ಮಾಡು ತ್ತಾರೆ ಎಂದು ವಿವಿಧ ಮಹಿಳಾ ಕಾರ್ಮಿಕರು ಅಳಲು ತೋಡಿಕೊಂಡರು.

ಈ ಮಧ್ಯೆ ಕಾರ್ಖಾನೆ ಉತ್ಪಾದನಾ ವಿಭಾಗದ ಹಿರಿಯ ವ್ಯವಸ್ಥಾಪಕ ನರಸಪ್ಪ ಮಾತನಾಡಿ, ಕಾರ್ಖಾನೆಯ ಮಂಡಳಿಯೊಂದಿಗೆ ಚರ್ಚಿಸಿ 20 ದಿನಗಳಲ್ಲಿ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಪ್ರತಿಭಟನಾ ಸ್ಥಳದಲ್ಲಿ ಪೊಲೀಸ್‌ ವೃತ್ತ ನಿರೀಕ್ಷಕ ಅಮರನಾರಾಯಣ, ನಗರ ಠಾಣೆ ಪಿಎಸ್‌ಐ ಅವಿ ನಾಶ್‌, ಗ್ರಾಮಾಂತರ ಪಿಎಸ್‌ಐ ಮೋಹನ್‌ ಅವರು ಪೊಲೀಸ್‌ ಬಂದೋಬಸ್ತ್ ಮಾಡಿದ್ದರು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.