ನೆತನ್ಯಾಹು ಪ್ರವಾಸ ಮುಂದೂಡಿಕೆ
Team Udayavani, Sep 5, 2019, 5:46 AM IST
ಟೆಲ್ಅವೀವ್/ಬೀಜಿಂಗ್: ಭಾರತ ಪ್ರವಾಸ ಕೈಗೊಳ್ಳಬೇಕಾಗಿದ್ದ ಇಬ್ಬರು ಪ್ರಮುಖ ರಾಷ್ಟ್ರಗಳ ನಾಯಕರು ತಮ್ಮ ಪ್ರವಾಸ ಮುಂದೂಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಚುನಾವಣೆ ಹಿನ್ನೆಲೆಯಲ್ಲಿ ಸೆ.9ರಂದು ಕೈಗೊಳ್ಳಬೇಕಾಗಿದ್ದ ಹೊಸದಿಲ್ಲಿ ಪ್ರವಾಸವನ್ನು ಮುಂದೂಡಿದ್ದಾರೆ.
ಈ ವರ್ಷದ ಎಪ್ರಿಲ್ನಲ್ಲಿ ಕೂಡ ಆ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಪ್ರವಾಸ ಮುಂದೂಡಿದ್ದರು. ಸೆ.17ರಂದು ಚುನಾವಣೆ ಬಳಿಕ ಭಾರತ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಇದೇ ವೇಳೆ, ಚೀನ ವಿದೇಶಾಂಗ ಸಚಿವ ವಾಂಗ್ ಇ ಸೆ.9-10ರ ವರೆಗೆ ಕೈಗೊಳ್ಳಬೇಕಾಗಿದ್ದ ಹೊಸದಿಲ್ಲಿ ಪ್ರವಾಸವನ್ನು ಮುಂದೂಡಿದ್ದಾರೆ. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಜತೆಗೆ ಗಡಿ ವಿಚಾರ ಕುರಿತಂತೆ ಚೀನ ಸಚಿವ ಮಾತುಕತೆ ನಡೆಸಬೇಕಾಗಿತ್ತು. ಆದರೆ ಅವರು ನಿಗದಿಯಂತೆ ಶನಿವಾರ ಇಸ್ಲಾಮಾಬಾದ್ಗೆ ಭೇಟಿ ನೀಡಿಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು