ಮೆರೆದ ಕೋಮಲರಿಷಭ ಅಸಾವರಿ ತೋಡಿ


Team Udayavani, Sep 6, 2019, 5:10 AM IST

b-1

ರಂಜನಿ ಮೆಮೋರಿಯಲ್‌ ಟ್ರಸ್ಟ್‌ ಈ ವರ್ಷ ಮೇ ತಿಂಗಳಿನಿಂದ ತಿಂಗಳಿಗೊಂದು ಕಾರ್ಯಕ್ರಮವನ್ನು ಲತಾಂಗಿಯಲ್ಲಿ ಆಯೋಜಿಸುತ್ತಾ ಬಂದಿದೆ. ಈ ಬಾರಿ ಆ.15ರಂದು ಅನಿರುದ್ಧ ಐತಾಳ ಇವರಿಂದ ಹಿಂದೂಸ್ಥಾನಿ ಗಾಯನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಬೆಳಗ್ಗೆಯೇ ಅಪರೂಪದ ಮಧುರ ರಾಗಗಳನ್ನು ಕೇಳುವ ಅವಕಾಶ ದೊರಕಿತು.

ಕುಂದಾಪುರ ಮೂಲದ ಅನಿರುದ್ಧ ಐತಾಳ್‌ ಇನ್ನೂ ವಿದ್ಯಾರ್ಥಿ. ಚಿಕ್ಕ ವಯಸ್ಸಿನಲ್ಲೇ ಸಂಗೀತ ಅಭ್ಯಾಸ ಮಾಡಿ ಸುಲಲಿತವಾಗಿ ಹಾಡಬಲ್ಲ ಪ್ರತಿಭಾವಂತ ಕಲಾವಿದ. ವಾಡಿಕೆಗಿಂತ ಮೇಲಿನ ಶ್ರುತಿಯಲ್ಲಿ ಹಾಡುವ ಇವರ ಸಣ್ಣ ಸಣ್ಣ ಕುಸುರಿ ಕೆಲಸಗಳು ಹಾಗೂ ಅತಿ ಧೃತ್‌ ಗತಿಯ ತಾನ್‌ಗಳು ಬಹು ಸ್ಪಷ್ಟ. ಈಗಾಗಲೇ ಹಲವಾರು ಹೆಸರಾಂತ ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿ ಉತ್ತಮ ಕಲಾವಿದನಾಗಿ ರೂಪುಗೊಳ್ಳುವ ಭರವಸೆಯನ್ನು ಮೂಡಿಸಿದ್ದಾರೆ. ಕಛೇರಿಯಲ್ಲಿ ಮೊದಲಿಗೆ ರಾಗ ಕೋಮಲ ರಿಷಭ ಅಸಾವರಿಯನ್ನು ಆಯ್ದುಕೊಂಡಿದ್ದರು. ಇದರಲ್ಲಿ ಲಂಬಿತ್‌ ಏಕ್‌ತಾಲ್‌ನಲ್ಲಿ ರಬ ಮೆ ರವೊ ಎಂಬ ಪಾರಂಪಾರಿಕ ಬಂದಿಶ್‌ ಹಾಗೂ ಧೃತ್‌ನಲ್ಲಿ ಕಾಜ ಕೀಜಿಯೆ ಎಂಬ ಪಂಡಿತ್‌ ಪುಟ್ಟರಾಜ ಗವಾಯಿಗಳು ರಚಿಸಿದ ಬಂದಿಶ್‌ನ್ನು ಪ್ರಸ್ತುತ ಪಡಿಸಿದರು. ಅನಂತರ ರಾಗ ದೇಸಿಯಲ್ಲಿ ಮಧ್ಯಲಯ ತೀನ್‌ತಾಲ್‌ನಲ್ಲಿ ಬಂದಿಶ್‌ ಒಂದನ್ನು ಹಾಡಿದರು. ಬಳಿಕ ರಾಗ ದೇಸ್‌ಕಾರ್‌ನಲ್ಲಿ, ಪ್ರಸಿದ್ಧವಾದ ಹೂತೊ ತೋರೆ ಕಾರನ ಎಂಬ ರಚನೆಯನ್ನು ಹಾಡಿದರು. ತುಂಬಾ ವಿರಳವಾಗಿ ಕೇಳ ಸಿಗುವ ಕೆಲವು ಕನ್ನಡ ರಂಗಗೀತೆಗಳನ್ನು, ಅವುಗಳ ಸಂದರ್ಭವನ್ನೂ ತಿಳಿಸಿ ಸುಂದರವಾಗಿ ಹಾಡಿದರು. ಮರಾಠಿ ನಾಟ್ಯಸಂಗೀತವನ್ನು ಹಾಡುವ ಪರಿಪಾಠ ಎಲ್ಲಾ ಕಡೆ ಇದೆಯಾದರೂ ಕನ್ನಡ ರಂಗಗೀತೆಗಳು ಅಷ್ಟು ಜನಪ್ರಿಯತೆಯನ್ನು ಪಡೆದಿಲ್ಲ. ಈ ನಿಟ್ಟಿನಲ್ಲಿ, ಅನಿರುದ್ಧ ಅವರು ಇಟ್ಟ ಹೆಜ್ಜೆ ಸ್ತುತ್ಯರ್ಹವಾದದ್ದು. ವಚನ ಹಾಗೂ ಅಭಂಗವೊಂದನ್ನು ಹಾಡಿ, ನಂತರ ಭೈರವಿಯಲ್ಲಿ ಕನ್ನಡ ಹಾಡಿನೊಂದಿಗೆ ಮುಕ್ತಾಯಗೊಳಿಸಿದರು.ಹಾರ್ಮೋನಿಯಂನಲ್ಲಿ ಸತೀಶ್‌ ಭಟ್‌ ಹೆಗ್ಗಾರ ಹಾಗೂ ತಬಲಾದಲ್ಲಿ ಶ್ರೀದತ್ತ ಎಂ.ಜಿ. ಸಾಥ್‌ ನೀಡಿದರು.

ಶ್ರೀಮತಿದೇವಿ, ಮೈಸೂರು

ಟಾಪ್ ನ್ಯೂಸ್

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.