“ಅಪರಾಧ-ಅಪಘಾತ ನಿಯಂತ್ರಣಕ್ಕೆ ಮೊದಲ ಆದ್ಯತೆ’

ಕುಂದಾಪುರದ ಎಎಸ್ಪಿಯಾಗಿ ಹರಿರಾಂ ಶಂಕರ್‌ ಅಧಿಕಾರ ಸ್ವೀಕಾರ

Team Udayavani, Sep 6, 2019, 5:41 AM IST

0509KDPP4

ಡಿವೈಎಸ್‌ಪಿ ಬಿ.ಪಿ. ದಿನೇಶ್‌ ಕುಮಾರ್‌ ಅವರಿಂದ ಅಧಿಕಾರ ಸ್ವೀಕರಿಸಿದ ಎಎಸ್ಪಿ ಹರಿರಾಂ ಶಂಕರ್‌.

ಕುಂದಾಪುರ: ಕುಂದಾಪುರ ಉಪವಿಭಾಗದ ನೂತನ ಎಎಸ್ಪಿಯಾಗಿ 2017ರ ಬ್ಯಾಚಿನ ಐಪಿಎಸ್‌ ಅಧಿಕಾರಿ ಹರಿರಾಂ ಶಂಕರ್‌ ಅವರು ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಇಲ್ಲಿನ ಪೊಲೀಸ್‌ ಉಪಾಧೀಕ್ಷಕರ ಕಚೇರಿಯಲ್ಲಿ ನಿರ್ಗಮನ ಡಿವೈಎಸ್ಪಿ ಬಿ.ಪಿ. ದಿನೇಶ್‌ ಕುಮಾರ್‌ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಹರಿರಾಂ ಶಂಕರ್‌, ಕುಂದಾಪುರದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು, ಅಪರಾಧ ಚಟುವಟಿಕೆ ನಿಯಂತ್ರಣ ಹಾಗೂ ಅಪಘಾತ ಪ್ರಕರಣಗಳು ಘಟಿಸದಂತೆ ತಡೆಯಲು ಮೊದಲ ಆದ್ಯತೆ ನೀಡಲಾಗುವುದು. ಇದರೊಂದಿಗೆ ಕಾನೂನು – ಸುವ್ಯವಸ್ಥೆಗೆ ಎಂದಿನಂತೆ ಒತ್ತು ನೀಡುತ್ತೇವೆ. ಅದಕ್ಕೂ ಮೊದಲು ಕುಂದಾಪುರ ಉಪ ವಿಭಾಗ ವ್ಯಾಪ್ತಿಯ ಬಗ್ಗೆ ತಿಳಿದುಕೊಳ್ಳುತ್ತೇನೆ. ಈ ಹಿಂದೆ ಇಲ್ಲಿ ನಡೆದಿರುವ ಕೊಲೆ, ಕಳ್ಳತನ ಮತ್ತಿತರ ಅಪರಾಧ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು, ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

ಟ್ರಾಫಿಕ್‌ ಸಮಸ್ಯೆಗೆ ಒತ್ತು
ಹೆದ್ದಾರಿ ಸಹಿತ ಕೆಲವೊಂದು ಪ್ರದೇಶದಲ್ಲಿ ಟ್ರಾಫಿಕ್‌ ಸಮಸ್ಯೆಗಳಿದ್ದು, ಅವುಗಳನ್ನು ಅಪಘಾತ ವಲಯಗಳಾಗಿ ಗೊತ್ತು ಮಾಡಿ, ತಜ್ಞರ ತಂಡದಿಂದ ಅಧ್ಯಯನ ನಡೆಸಿ, ಬ್ಲಾಕ್‌ ಸ್ಪಾಟ್‌ ಎಂದು ಗುರುತಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಪ್ರಯತ್ನ ಮಾಡಲಾಗುವುದು. ಫ್ಲೆ$çಓವರ್‌, ರಸ್ತೆ ಕಾಮಗಾರಿಯು ಬಾಕಿಯಿದ್ದು, ಅದನ್ನೆಲ್ಲ ಪರಿಶೀಲಿಸಿ ಸಂಚಾರ ವ್ಯವಸ್ಥೆ ಸರಿಪಡಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ನೂತನ ಎಎಸ್ಪಿ ಹೇಳಿದರು.

2018 ರ ಮಾ. 22 ರಿಂದ ಕುಂದಾಪುರ ಉಪ ವಿಭಾಗದ ಡಿವೈಎಸ್‌ಪಿ ಆಗಿದ್ದ ಬಿ.ಪಿ. ದಿನೇಶ್‌ ಕುಮಾರ್‌ ಅವರು ಈಗ ವರ್ಗಾವಣೆಗೊಂಡಿದ್ದು, ಹೊಸ ಹುದ್ದೆಗೆ ಇನ್ನಷ್ಟೇ ನಿಯೋಜನೆಗೊಳಿಸಬೇಕಿದೆ.

ಈ ಸಂದರ್ಭದಲ್ಲಿ ಕುಂದಾಪುರ ವೃತ್ತ ನಿರೀಕ್ಷಕ ಮಂಜಪ್ಪ, ಬೈಂದೂರು ವೃತ್ತ ನಿರೀಕ್ಷಕ ಪರಮೇಶ್ವರ್‌ ಗುನಗ, ಉಪ ವಿಭಾಗದ ವಿವಿಧ ಠಾಣೆಗಳ ಎಸ್‌ಐಗಳು, ಪೊಲೀಸ್‌ ಸಿಬಂದಿ ಉಪಸ್ಥಿತರಿದ್ದರು.

ಹರಿರಾಂ ಶಂಕರ್‌ ಪರಿಚಯ
ಕೇರಳದ ತೃಶ್ಶೂರ್‌ ಮೂಲದ ಹರಿರಾಂ ಶಂಕರ್‌ ಅವರು 2017 ಬ್ಯಾಚಿನ ಐಪಿಎಸ್‌ ಅಧಿಕಾರಿಯಾಗಿದ್ದು, ಬೆಳಗಾವಿಯ ಅಥಣಿಯಲ್ಲಿ ಪ್ರೊಬೇಶನರಿ ಎಎಸ್ಪಿಯಾಗಿ ಕಾರ್ಯನಿರ್ವಹಿಸಿ, ಬಳಿಕ 2 ತಿಂಗಳು ಹೈದರಬಾದಿನಲ್ಲಿ 2ನೇ ಹಂತದ ತರಬೇತಿ ಮುಗಿಸಿ, ಈಗ ಕುಂದಾಪುರಕ್ಕೆ ವರ್ಗವಣೆಗೊಂಡಿದ್ದಾರೆ. ಕ್ಯಾಲಿಕಟ್‌ ಎನ್‌.ಐ.ಟಿ.ಯಲ್ಲಿ ಮೆಕ್ಯಾನಿಕಲ್‌ ಎಂಜಿನಿಯರ್‌ ವ್ಯಾಸಂಗ ಮುಗಿಸಿ, ಸಿವಿಲ್‌ ಸರ್ವಿಸ್‌ ಪರೀಕ್ಷೆ ಬರೆದಿದ್ದರು.

2ನೇ ಐಪಿಎಸ್‌ ಅಧಿಕಾರಿ
ಕುಂದಾಪುರ ಉಪ ವಿಭಾಗದ ಮುಖ್ಯಸ್ಥರಾಗಿ 2007 ರಿಂದ ಈ ವರೆಗೆ 9 ಮಂದಿ ಕಾರ್ಯನಿರ್ವಹಿಸಿದ್ದು, ಹರಿರಾಂ ಶಂಕರ್‌ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಎರಡನೇ ಐಪಿಎಸ್‌ ಅ ಧಿಕಾರಿಯಾಗಿದ್ದಾರೆ. ಇದಕ್ಕೂ ಮೊದಲು 2010ರಿಂದ 2012 ರವರೆಗೆ ಡಾ| ರಾಮ್‌ ನಿವಾಸ್‌ ಸೆಪಟ್‌ ಎಎಸ್ಪಿಯಾಗಿದ್ದರು. 2007ರಿಂದ ಸಿ.ಕೆ. ಶಶಿಧರ್‌, ವಿಶ್ವನಾಥ್‌ ಪಂಡಿತ್‌, ಶೇಖರ ಎ. ಅಗಡಿ, ಸಿ.ಬಿ. ಪಾಟೀಲ್‌, ಎಂ. ಮಂಜುನಾಥ ಶೆಟ್ಟಿ, ಪ್ರವೀಣ್‌ ಎಚ್‌. ನಾಯಕ್‌ ಹಾಗೂ ಬಿ.ಪಿ. ದಿನೇಶ್‌ ಕುಮಾರ್‌ ಡಿವೈಎಸ್‌ಪಿಗಳಾಗ ಪದೋನ್ನತಿಗೊಂಡು ಇಲ್ಲಿ ಕಾರ್ಯನಿರ್ವಹಿಸಿದ್ದರೆ, 2012 ರಿಂದ 2013 ರವರೆಗೆ ಯಶೊದಾ ಎಸ್‌. ಒಂಟಿಗೋಡಿ ಅವರು ಕೆಎಸ್‌ಪಿಎಸ್‌ ಪರೀಕ್ಷೆ ಬರೆದು ನಿಯೋಜನೆಗೊಂಡಿದ್ದರು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.