ಬಂಧನದಿಂದ ಡಿಕೆಶಿ ಆಪ್ತರು ಸದ್ಯ ಬಚಾವ್
10 ದಿನಗಳವರೆಗೆ ಬಂಧಿಸುವುದಿಲ್ಲ ಎಂದು ಹೈಕೋರ್ಟ್ಗೆ ಇಡಿ ಹೇಳಿಕೆ
Team Udayavani, Sep 6, 2019, 5:56 AM IST
ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ದಾಳಿ ಸಂದರ್ಭದಲ್ಲಿ ದೆಹಲಿಯ ಮನೆಗಳಲ್ಲಿ ಸಿಕ್ಕ ಕೋಟ್ಯಂತರ ರೂ.ನಗದು ಸಂಬಂಧ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಆರೋಪಿಗಳು ಹಾಗೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಆಪ್ತರಾದ ಆಂಜನೇಯ, ಸಚಿನ್ ನಾರಾಯಣ್, ಸುನಿಲ್ ಶರ್ಮಾ ಬಂಧನದ ಭೀತಿಯಿಂದ ತಾತ್ಕಾಲಿಕವಾಗಿ ಬಚಾವ್ ಆಗಿದ್ದಾರೆ.
ಆರೋಪಿಗಳನ್ನು ಸದ್ಯಕ್ಕೆ 10 ದಿನಗಳ ಕಾಲ ಬಂಧಿಸುವುದಿಲ್ಲ. ಆದರೆ, ಸಮನ್ಸ್ ನೀಡಿದಾಗ ಅವರು ವಿಚಾರಣೆಗೆ ಹಾಜರಾಗಿ ಹೇಳಿಕೆ ನೀಡಬೇಕು ಎಂದು ಜಾರಿ ನಿರ್ದೇಶನಾಲಯ ಪರ ವಕೀಲರು ಹೈಕೋರ್ಟ್ಗೆ ತಿಳಿಸಿದರು. ಇದನ್ನು ದಾಖಲಿಸಿಕೊಂಡ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾ.ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿದಾರರನ್ನು (ಆರೋಪಿಗಳನ್ನು) ಬಂಧಿಸದಂತೆ ಗುರುವಾರ ಆದೇಶ ನೀಡಿ ವಿಚಾರಣೆ ಮುಂದೂಡಿತು.
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಹೈಕೋರ್ಟ್ನ ಏಕಸದಸ್ಯ ನ್ಯಾಯಪೀಠ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಮೂವರು ಆರೋಪಿಗಳು ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದೀರಿ. ಆದರೆ, ಏಕಸದಸ್ಯ ನ್ಯಾಯಪೀಠದ ಮೂಲ ಅರ್ಜಿಗೆ ಸಂಬಂಧಿಸಿದಂತೆ ತೀರ್ಪು ನೀಡಿದ ಬಳಿಕ ಅರ್ಜಿದಾರರು ಸಲ್ಲಿಸಿದ ಮಧ್ಯಂತರ ಅರ್ಜಿಯ ಮೇಲೂ ಮತ್ತೂಂದು ಆದೇಶ ನೀಡಿದೆ. ಅದರಲ್ಲಿ ಸಿಆರ್ಪಿಸಿ 482ರಡಿಯೂ ಆದೇಶ ನೀಡಲಾಗಿದೆ ಎಂದು ನ್ಯಾಯಪೀಠ ಹೇಳಿದೆ. ಹೀಗಿರುವಾಗ, ಈ ಮೇಲ್ಮನವಿ ಊರ್ಜಿತವಾಗುವುದಿಲ್ಲ. ಬೇಕಿದ್ದರೆ, ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿ ಆ.30ರಂದು ಏಕಸದಸ್ಯ ನ್ಯಾಯಪೀಠ ನೀಡಿದ ತೀರ್ಪನ್ನು ಸಹ ಪ್ರಶ್ನಿಸಬೇಕಾಗುತ್ತದೆ ಎಂದು ಹೇಳಿತು.
ಅದಕ್ಕೆ, ಆ.29ರಂದು ಹೊರಡಿಸಿದ ಆದೇಶ ಸಂವಿಧಾನದ ಕಲಂ 227ರಡಿ ಆಗಿದೆ. ಆದರೂ ಆ.30ರಂದು ಕೊಟ್ಟಿರುವ ತೀರ್ಪನ್ನೂ ಪ್ರಶ್ನಿಸಲಾಗುವುದು. ಅದಕ್ಕಾಗಿ ಸ್ವಲ್ಪ ಕಾಲಾವಕಾಶ ಬೇಕು ಎಂದು ಅರ್ಜಿದಾರರ ಪರ ವಕೀಲರು ಕೋರಿದರು. ಅದಕ್ಕೆ, ಹಾಗಿದ್ದರೆ ಅಲ್ಲಿಯವರೆಗೆ ಅರ್ಜಿದಾರರನ್ನು ಬಂಧಿಸುವುದಿಲ್ಲವೇ ಎಂದು ಇಡಿ ಪರ ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು. ಸದ್ಯಕ್ಕೆ ಬಂಧಿಸುವುದಿಲ್ಲ. ಏಕೆಂದರೆ, ಸಮನ್ಸ್ ನೀಡಿಲ್ಲ ಎಂದು ಇಡಿ ಪರ ವಕೀಲರು ಸ್ಪಷ್ಟನೆ ನೀಡಿದರು. ಇದನ್ನು ಆಕ್ಷೇಪಿಸಿದ ಅರ್ಜಿದಾರರ ಪರ ವಕೀಲರು, ಈಗಾಗಲೇ ಜಾರಿ ನಿರ್ದೇಶನಾಲಯ ಇಬ್ಬರು ಅರ್ಜಿದಾರರಿಗೆ ಸಮನ್ಸ್ ನೀಡಿದೆ ಎಂದರು. ಈ ಬಗ್ಗೆ ಇಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ತಿಳಿಸಿ ಎಂದು ಹೇಳಿ ನ್ಯಾಯಪೀಠ ಕೆಲ ಕಾಲ ವಿಚಾರಣೆ ಮುಂದೂಡಿತು.
ಪುನ: ವಿಚಾರಣೆ ಆರಂಭವಾಗುತ್ತಿದ್ದಂತೆ ಒಂದು ವಾರ ಅರ್ಜಿದಾರರನ್ನು ಬಂಧಿಸುವುದಿಲ್ಲ. ಆದರೆ, ವಿಚಾರಣೆಗೆ ಕರೆದಾಗ ಹಾಜರಾಗಿ ಹೇಳಿಕೆ ನೀಡಬೇಕು. ಏಕೆಂದರೆ, ಈಗಾಗಲೇ ಪ್ರಕರಣದ ಪ್ರಮುಖ ಆರೋಪಿ ಇಡಿ ವಶದಲ್ಲಿದ್ದಾರೆ. ಅವರ ಮುಂದಿನ ತನಿಖೆಗೆ ಇತರ ಆರೋಪಿಗಳ ಹೇಳಿಕೆ ಮುಖ್ಯವಾಗುತ್ತದೆ ಎಂದು ಇಡಿ ಪರ ವಕೀಲರು ನ್ಯಾಯಪೀಠಕ್ಕೆ ಮನವರಿಕೆ ಮಾಡಿಕೊಟ್ಟರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅರ್ಜಿದಾರರ ಪರ ವಕೀಲರು, ಈಗಾಗಲೇ ಬಂಧನದಲ್ಲಿರುವವರನ್ನು ಮುಂದಿಟ್ಟುಕೊಂಡು ಇತರರ ಹೇಳಿಕೆ ಪಡೆದು ಅವರನ್ನು ‘ಅಪ್ರೂವರ್’ ಮಾಡುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು. ಹಾಗಿದ್ದರೆ, ಅರ್ಜಿದಾರರ ಉದ್ದೇಶದ ಬಗ್ಗೆ ಅನುಮಾನ ಪಡಬೇಕಾಗುತ್ತದೆ ಎಂದು ಇಡಿ ಪರ ವಕೀಲರು ಹೇಳಿದರು.
ವಾದ-ಪ್ರತಿವಾದ ಆಲಿಸಿದ ಬಳಿಕ ಅಂತಿಮವಾಗಿ ಸೆ.16ರವರೆಗೆ ಅರ್ಜಿದಾರರನ್ನು ಬಂಧಿಸಬಾರದು ಎಂದು ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿ, ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ
PU ಕಂಪ್ಯೂಟರ್ ಸೈನ್ಸ್, ಸೈಕಾಲಜಿಗೂ ಎನ್ಸಿಇಆರ್ಟಿ ಪಠ್ಯ
Bengaluru-Mysuru Expressway; 15 ದಿನಗಳಲ್ಲಿ 12 ಸಾವಿರ ವಾಹನಗಳಿಗೆ ದಂಡ!
Kota ಮೇಲ್ಮನೆ ಸ್ಥಾನ ನಳಿನ್ ಕುಮಾರ್ಗೆ ? ವಿಧಾನಸಭೆ ಮೂಲಕ ಪರಿಷತ್ ಪ್ರವೇಶಿಸಲು ಯತ್ನ
Karnataka ಶಿಕ್ಷಣ ವ್ಯವಸ್ಥೆ ಹಾಳು ಮಾಡಿದ್ದೇ ಸರ್ಕಾರದ ಸಾಧನೆ: ಸುರೇಶ್ ಕುಮಾರ್
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ