ಪರಭಾಷೆಯತ್ತ ಥ್ರಿಲ್ಲರ್‌ ಸ್ಟೋರಿ

ಚಿತ್ರತಂಡದ ಪ್ರಕಾರ ಸಿನಿಮಾ ಗೆದ್ದಿದೆ

Team Udayavani, Sep 6, 2019, 5:58 AM IST

b-31

ಕೆಲವು ಸಿನಿಮಾಗಳು ಬಿಡುಗಡೆಯಾದ ದಿನ ಭರ್ಜರಿ ಓಪನಿಂಗ್‌ ಪಡೆದು ಆ ನಂತರ ಪ್ರೇಕ್ಷಕರ ಕೊರತೆ ಎದುರಿಸುತ್ತವೆ. ಇನ್ನೊಂದಿಷ್ಟು ಸಿನಿಮಾಗಳು ಆರಂಭದಲ್ಲಿ ನಿಧಾನಗತಿಯಲ್ಲಿ ಟೇಕಾಫ್ ಆಗಿ ಆ ನಂತರ ಪ್ರೇಕ್ಷಕರನ್ನು ಸೆಳೆದು ಚಿತ್ರತಂಡದ ಮೊಗದಲ್ಲಿ ನಗುತರಿಸುತ್ತವೆ. ಇದರಲ್ಲಿ ‘ನನ್ನ ಪ್ರಕಾರ’ ಚಿತ್ರ ಎರಡನೇ ವರ್ಗಕ್ಕೆ ಸೇರುತ್ತದೆ. ಆರಂಭದಲ್ಲಿ ದೊಡ್ಡ ಅಬ್ಬರ ಮಾಡದೇ ಬಿಡುಗಡೆಯಾಗಿ ಮೆಚ್ಚುಗೆ ಪಡೆದ ಚಿತ್ರ, ಈಗ ಪ್ರೇಕ್ಷಕರನ್ನು ಸೆಳೆಯುತ್ತಾ 25ನೇ ದಿನದತ್ತ ದಾಪುಗಾಲು ಹಾಕುತ್ತಿದೆ. ಆರಂಭದಲ್ಲಿ ಹೆಚ್ಚು ಶೋ ಕೊಡಲು ಹಿಂದೇಟು ಹಾಕಿದ್ದ ಮಲ್ಟಿಪ್ಲೆಕ್ಸ್‌ಗಳು ಈಗ ‘ನನ್ನ ಪ್ರಕಾರ’ ಚಿತ್ರದ ಶೋ ಹೆಚ್ಚಿಸಿವೆ. ಜೊತೆಗೆ ಚಿತ್ರದ ತೆಲುಗು, ತಮಿಳು ಡಬ್ಬಿಂಗ್‌ ರೈಟ್ಸ್‌ ಮಾರಾಟವಾಗಿದ್ದರೆ, ಹಿಂದಿ ರೀಮೇಕ್‌ ರೈಟ್ಸ್‌ ಕುರಿತಾದ ಮಾತುಕತೆ ನಡೆಯುತ್ತಿದೆ. ಈ ಎಲ್ಲಾ ಕಾರಣಗಳಿಂದಾಗಿ ಚಿತ್ರತಂಡ ಖುಷಿಯಾಗಿದೆ.

ಚಿತ್ರದ ಬಗ್ಗೆ ಖುಷಿಯಿಂದ ಮಾತನಾಡುವ ನಿರ್ಮಾಪಕ ಗುರುರಾಜ್‌, ‘ಈಗಾಗಲೇ ತಮಿಳು, ತೆಲುಗು ಡಬ್ಬಿಂಗ್‌ ರೈಟ್ಸ್‌ ಮಾರಾಟವಾಗಿದೆ. ಹಿಂದಿ ರೀಮೇಕ್‌ ಮಾತುಕತೆ ನಡೆಯುತ್ತಿದೆ. ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಸೆಂಟರ್‌ಗಳಲ್ಲಿ ಸಿನಿಮಾವಿದೆ. ಈ ವಾರದಿಂದ ಬಿ.ಸಿ.ಸೆಂಟರ್‌ಗಳಲ್ಲೂ ಚಿತ್ರ ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರಕ್ಕೆ ಹಾಕಿದ ಬಂಡವಾಳ ವಾಪಾಸ್‌ ಆಗಿದ್ದು, ಮುಂದೆ ಚಿತ್ರಮಂದಿರದಿಂದ ಬರುವ ಕಲೆಕ್ಷನ್‌ ಲಾಭ ಎನ್ನಬಹುದು’ ಎಂದು ಹೇಳಿಕೊಂಡರು.

ತಮ್ಮ ಚೊಚ್ಚಲ ಚಿತ್ರ ಹಿಟ್ಲಿಸ್ಟ್‌ ಸೇರಿದ್ದರಿಂದ ನಿರ್ದೇಶಕ ವಿನಯ್‌ ಬಾಲಾಜಿ ಖುಷಿಯಾಗಿದ್ದರು. ಸಿನಿಮಾ ನೋಡಿದವರೆಲ್ಲಾ, ಇದು ವಿನಯ್‌ ಅವರ ಮೊದಲ ಸಿನಿಮಾನಾ ಎಂದು ಕೇಳುತ್ತಿರುವುದರಿಂದ ಅವರ ಖುಷಿ ಮತ್ತಷ್ಟು ಹೆಚ್ಚಿದೆ. ಚಿತ್ರ 25 ದಿನ ಪೂರ್ಣಗೊಳಿಸುತ್ತಿದ್ದಂತೆ ವಿದೇಶಗಳಲ್ಲೂ ಬಿಡುಗಡೆಯಾಗಲಿದೆಯಂತೆ. ಇನ್ನು, ಪ್ರವಾಹದಿಂದ ಉತ್ತರ ಕರ್ನಾಟಕದಲ್ಲಿ ಚಿತ್ರ ಬಿಡುಗಡೆಯಾಗಿರಲಿಲ್ಲ. ಮುಂದಿನ ದಿನಗಳಲ್ಲಿ ಅಲ್ಲೂ ಚಿತ್ರ ಬಿಡುಗಡೆಯಾಗಲಿದೆ. ಬೇರೆ ಭಾಷೆಯ ದೊಡ್ಡ ಸಿನಿಮಾಗಳ ಮಧ್ಯೆಯೂ ಚಿತ್ರದ ಕಲೆಕ್ಷನ್‌ ಚೆನ್ನಾಗಿರುವುದು ಖುಷಿ ತಂದಿದೆ ಎಂದು ವಿವರ ನೀಡಿದರು ನಿರ್ದೇಶಕ ವಿನಯ್‌.

ಚಿತ್ರದಲ್ಲಿ ನಟಿಸಿರುವ ಕಿಶೋರ್‌, ಮಯೂರಿ, ತಮ್ಮ ಸಿನಿಮಾಗಳ ಸಕ್ಸಸ್‌ಮೀಟ್ ನೋಡದೇ ತುಂಬಾ ದಿನಗಳೇ ಆಗಿತ್ತು. ಈ ಸಿನಿಮಾ ಸಕ್ಸಸ್‌ ಆಗಿರುವುದು ಖುಷಿ ಕೊಟ್ಟಿದೆ ಎಂದರು. ಉಳಿದಂತೆ ಚಿತ್ರದಲ್ಲಿ ನಟಿಸಿದ ಕಲಾವಿದರು ಹಾಗೂ ತಾಂತ್ರಿಕ ವರ್ಗ ಗೆಲುವನ್ನು ಸಂಭ್ರಮಿಸಿತು.

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.