ಕೃಷ್ಣಾತೀರದಲ್ಲಿ ಮತ್ತೆ ಪ್ರವಾಹ ಭೀತಿ

•ಜಮಖಂಡಿ ತಾಲೂಕಿನ 27,ಬಾಗಲಕೋಟೆ ತಾಲೂಕಿನ 12 ಹಳ್ಳಿಗಳು ಪುನಃ ಪ್ರವಾಹಕ್ಕೊಳಗಾಗುವ ಸಾಧ್ಯತೆ

Team Udayavani, Sep 6, 2019, 10:57 AM IST

bk-tdy-2

ಬಾಗಲಕೋಟೆ: ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಡ್ಯಾಂಗೆ ಅಪಾರ ನೀರು ಬಿಡಲಾಗಿದೆ. ಹೀಗಾಗಿ ಕೂಡಲಸಂಗಮ ಬಳಿ ಹೆಚ್ಚಿದ ನೀರು.

ಬಾಗಲಕೋಟೆ: ಜಿಲ್ಲೆಯ ಮೂರು ನದಿಗಳ ಪ್ರವಾಹ ನಿಂತು ಇನ್ನೂ ತಿಂಗಳು ಗತಿಸಿಲ್ಲ. ಈಗ ಕೃಷ್ಣಾ ತೀರದಲ್ಲಿ ಮತ್ತೇ ಪ್ರವಾಹ ಭೀತಿ ಎದುರಾಗಿದೆ.

ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ ನದಿಗಳು ಕಳೆದ ತಿಂಗಳು ರುದ್ರನರ್ತನ ಮಾಡಿದ್ದು, ಈ ರೌದ್ರಾವತಾರಕ್ಕೆ ಜಿಲ್ಲೆಯ ಬರೋಬ್ಬರಿ 195 ಹಳ್ಳಿಗಳು ಅಕ್ಷರಶಃ ನಲುಗಿವೆ. ಇದರಿಂದ 43,136 ಕುಟುಂಬಗಳ 1,49,408 ಜನರು ಬೀದಿಗೆ ಬಿದ್ದಿದ್ದವು. ಇದೀಗ ಅವರೆಲ್ಲ ನೀರು ಹೊಕ್ಕು ಹೋದ ಮನೆಗಳತ್ತ ನಿರಾಳವಾಗಿ ಹೆಜ್ಜೆ ಇಡುತ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಮತ್ತೆ ಪ್ರವಾಹ ಉಂಟಾಗುವ ಭೀತಿ ಎದುರಾಗಿದೆ.

2ಲಕ್ಷ ಕ್ಯೂಸೆಕ್‌ ದಾಟುವ ಆತಂಕ: ಕೃಷ್ಣಾ ನದಿ ಉಗಮಸ್ಥಾನ ಮಹಾರಾಷ್ಟ್ರದ ಮಹಾಬಲೇಶ್ವರ ಸೇರಿದಂತೆ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆ ಬೀಳುತ್ತಿದೆ. ಹೀಗಾಗಿ 519.60 ಮೀಟರ್‌ (123 ಟಿಎಂಸಿ ಅಡಿ) ಎತ್ತರದ ಆಲಮಟ್ಟಿ ಜಲಾಶಯದಲ್ಲಿ ಈಗಾಗಲೇ 519.14 ಮೀಟರ್‌ (115.221 ಟಿಎಂಸಿ ಅಡಿ ನೀರು)ಸಂಗ್ರಹವಾಗಿದ್ದು, ಗುರುವಾರ ಸಂಜೆ ಆಲಮಟ್ಟಿ ಜಲಾಶಯಕ್ಕೆ 63,760 ಕ್ಯೂಸೆಕ್‌ ನೀರು ಹರಿದು ಬರುತ್ತಿದೆ.

ಮುಂಜಾಗ್ರತಾ ಕ್ರಮವಾಗಿ ಜಲಾಶಯದಿಂದ ಹೆಚ್ಚಿನ ನೀರನ್ನು ಹೊರ ಬಿಡುವಂತೆ ಈಗಾಗಲೇ ಬೆಳಗಾವಿ ಜಿಲ್ಲಾಡಳಿತ ಹಾಗೂ ಮಹಾರಾಷ್ಟ್ರದ ಅಧಿಕಾರಿಗಳು, ಕೆಬಿಜೆಎನ್‌ಎಲ್ಗೆ ಮನವಿ ಮಾಡಿದ್ದು, ಆ ಹಿನ್ನೆಲೆಯಲ್ಲಿ ಆಲಮಟ್ಟಿ ಜಲಾಶಯದಿಂದ ಕಾಲುವೆ ಮತ್ತು ಗೇಟ್ ಮೂಲಕ ಒಟ್ಟು 1,85,095 ಕ್ಯೂಸೆಕ್‌ ನೀರು ಹೊಡ ಬಿಡಲಾಗುತ್ತಿದೆ. ಇನ್ನೂ 2ರಿಂದ 3 ದಿನಗಳಲ್ಲಿ ಕೃಷ್ಣಾ ನದಿಗೆ 2ಲಕ್ಷ ಕ್ಯೂಸೆಕ್‌ ವರೆಗೆ ನೀರು ಹರಿದು ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಜಮಖಂಡಿ ತಾಲೂಕಿನ 27 ಹಳ್ಳಿಗಳು, ಬಾಗಲಕೋಟೆ ತಾಲೂಕಿನ 12 ಹಳ್ಳಿಗಳು ಪುನಃ ಪ್ರವಾಹಕ್ಕೊಳಗಾಗುವ ಸಾಧ್ಯತೆ ಇದೆ.

ಈ ಬಾರಿ ದಾಖಲೆ ಪ್ರವಾಹ: ಕೃಷ್ಣಾ ನದಿಗೆ ಈ ಬಾರಿ 5.79 ಲಕ್ಷ ಕ್ಯೂಸೆಕ್‌ (4.13 ಲಕ್ಷ ಕ್ಯೂಸೆಕ್‌ ಹಳೆಯ ದಾಖಲೆ) ನೀರು ಹರಿದು ಬಂದರೆ, ಘಟಪ್ರಭಾ ನದಿಗೆ 2.29 ಲಕ್ಷ (65 ಸಾವಿರ ಹಳೆಯ ದಾಖಲೆ) ಕ್ಯೂಸೆಕ್‌, ಮಲಪ್ರಭಾ ನದಿಗೆ 93,920 ಕ್ಯೂಸೆಕ್‌ (22 ಸಾವಿರ ಹಳೆಯ ದಾಖಲೆ) ನೀರು ಹರಿದು ಬಂದಿದೆ. ಇದು ಮೂರು ನದಿಗಳ ಇತಿಹಾಸದಲ್ಲೇ ದಾಖಲೆ ನೀರಿನ ಹರಿವಾಗಿತ್ತು.

ಆಲಮಟ್ಟಿ, ನಾರಾಯಣಪುರ ಜಲಾಶಯಗಳ ಹಿನ್ನೀರು ಹಾಗೂ ಮೂರೂ ನದಿಗಳ ದಡದಲ್ಲಿ ಆಗಾಗ ಒತ್ತಿ ಬರುವ ನೀರಿನಿಂದ ಬಹುತೇಕ ಮುಳುಗಡೆ ಜಿಲ್ಲೆಯಾಗಿರುವ ಬಾಗಲಕೋಟೆಗೆ ಪ್ರವಾಹ ಹೊಸದೇನಲ್ಲ. 2007 ಮತ್ತು 2009ರಲ್ಲಿ ಬಂದ ಪ್ರವಾಹಗಳನ್ನೇ ಭೀಕರ ಜಲಪ್ರಳಯ ಎಂದು ಹೇಳಲಾಗಿತ್ತು. ಆದರೆ, ಅದೆಲ್ಲ ದಾಖಲೆಗಳನ್ನು ಮುರಿದು, 105 ವರ್ಷಗಳ ಹಿಂದೆ ಬಂದಿದ್ದ ಪ್ರವಾಹದ ದಾಖಲೆಯನ್ನೂ ಜಿಲ್ಲೆಯ ಮೂರೂ ನದಿಗಳು ಮುರಿದಿವೆ.

ಆಗಲೂ ಆಗಸ್ಟ್‌ ತಿಂಗಳಲ್ಲೇ ಬಂದಿತ್ತು: 1914ರ ಆಗಸ್ಟ್‌ 8ರಂದು ಕೃಷ್ಣಾ ನದಿಯಲ್ಲಿ ಭಾರೀ ಪ್ರವಾಹ ಬಂದಿತ್ತು. ಅಂದು ಬಂದಿದ್ದ ಪ್ರವಾಹ ಬಹುದೊಡ್ಡ ಹಾಗೂ ಭೀಕರವಾಗಿತ್ತು ಎಂದು ಆಗಿನ ಹಿರಿಯರಿಂದ ಕೇಳಿದ್ದ ಈಗಿನ ಹಿರಿಯರು ಹೇಳುತ್ತಾರೆ. ಆಗಲೂ ಆಗಸ್ಟ್‌ ತಿಂಗಳಲ್ಲೇ ಪ್ರವಾಹ ಬಂದಿತ್ತು. ಈ ಬಾರಿಯೂ ಆಗಸ್ಟ್‌ 1ರಿಂದ ಆರಂಭಗೊಂಡ ಕೃಷ್ಣೆಯ ವೇಗದ ಹರಿದು, ಆಗಸ್ಟ್‌ 8ರಂದು (105 ವರ್ಷಗಳ ಹಿಂದೆಯೂ ಆಗಸ್ಟ್‌ 8ರಂದು ಬಂದಿತ್ತು) 5.79 ಲಕ್ಷ ಕ್ಯೂಸೆಕ್‌ಗೆ ದಾಟಿತ್ತು. ಕೃಷ್ಣಾ ನದಿಯಲ್ಲಿ ಈ ನೀರು ಹರಿದು ನದಿಯ ಇತಿಹಾಸದಲ್ಲೇ ದೊಡ್ಡ ದಾಖಲೆಯಾಗಿತ್ತು.

 

•ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

1-araga

Pendrive Case: ರಾಜಕೀಯವಾಗಿ ಒಂದು ಕುಟುಂಬ ಮುಗಿಸಲು ತಂತ್ರ: ಆರಗ ಜ್ಞಾನೇಂದ್ರ

1-wqeqweqeqw

Prajwal Pen Drive: ಡಿಸಿಎಂ ವಿರುದ್ಧ ರಾಮನಗರದಲ್ಲಿ ಜೆಡಿಎಸ್-ಬಿಜೆಪಿ ಪ್ರತಿಭಟನೆ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ

Mangaluru: ನೇಮೋತ್ಸವದಲ್ಲಿ ಭಾಗಿಯಾಗಿ ಹರಕೆ ಸಲ್ಲಿಸಿದ ʼಕೆಜಿಎಫ್ʼ ನಟಿ ಶ್ರೀನಿಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

Rajamouli: ʼಬಾಹುಬಲಿʼ ಪ್ರಚಾರಕ್ಕೆ ಒಂದು ಪೈಸೆಯನ್ನು ಖರ್ಚು ಮಾಡಿಲ್ಲ; ನಿರ್ದೇಶಕ ರಾಜಮೌಳಿ

DKSHI (2)

Pen drive case; ಮುಗಿಸೋದೇ ಕುಮಾರಸ್ವಾಮಿ ಕೆಲಸ: ಡಿ.ಕೆ.ಶಿವಕುಮಾರ್ ಆಕ್ರೋಶ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

ಬಡವರಿಗೆ ಆರ್ಥಿಕ ಬಲ ತುಂಬಿದ ಗ್ಯಾರಂಟಿ: ಗಡ್ಡದೇವರಮಠ

2–sscl-result

SSLC Result: ಮೇ.9 ರಂದು ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟ

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

ಆಟೋ ಚಾಲಕಿಯರ ಬ್ಯಾಂಕ್‌ ಸಾಲ ತೀರಿಸಿ ರಿಯಲ್‌ ಲೈಫ್‌ನಲ್ಲೂ ಹೀರೋ ಆದ ನಟ ರಾಘವ ಲಾರೆನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.