ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಸಿಗ‌ಲಿ


Team Udayavani, Sep 6, 2019, 11:54 AM IST

hv-tdy-1

ಹಾನಗಲ್ಲ: ಸದಾಶಿವ ಮಂಗಲ ಭವನದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಸಿದ್ಧಾರೂಢ ಮಠದ ಶಂಕರಾನಂದ ಸ್ವಾಮೀಜಿ ಉದ್ಘಾಟಿಸಿದರು.

ಹಾನಗಲ್ಲ: ತಾಯಿಯಂತೆ ಮಮತೆ ತೋರಿ ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕನಿಗೆ ಸಮಾಜದಲ್ಲಿ ಗೌರವಗಳು ಸಿಗಬೇಕು ಎಂದು ಹೋತನಹಳ್ಳಿ ಸಿದ್ಧಾರೂಢ ಮಠದ ಶಂಕರಾನಂದ ಸ್ವಾಮೀಜಿ ಹೇಳಿದರು.

ಪಟ್ಟಣದ ಶ್ರೀ ಕುಮಾರೇಶ್ವರ ವಿರಕ್ತಮಠದ ಸದಾಶಿವ ಮಂಗಲಭವನದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ತಾಪಂ ಸಹಯೋಗದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರ ದಿನಾಚರಣೆ ನೆಪಕ್ಕೆ ಮಾತ್ರ ಆಗುವುದು ಬೇಡ. ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರಗಳು ಸಿಗುವಂತಾಗಬೇಕು. ಎಲ್ಲವನ್ನೂ ಹೋರಾಟದಿಂದ ಪಡೆಯುವ ಸ್ಥಿತಿ ಇರುವಾಗ ಇದಕ್ಕೆ ಶಿಕ್ಷಕರೂ ಹೊರತಾಗಿಲ್ಲ. ಶಿಕ್ಷಕರ ಶ್ರದ್ಧೆಯ ಸೇವೆ ಸಾರ್ಥಕವಾಗಲು ಸಮಾಜ ಹಾಗೂ ಸರ್ಕಾರ ಶಿಕ್ಷಕರನ್ನು ಗೌರವಿಸಬೇಕು ಎಂದರು.

ಡಾ| ಹೊನ್ನಪ್ಪ ಹೊನ್ನಪ್ಪನವರ ಮಾತನಾಡಿ, ಸರ್ವಪಲ್ಲಿ ರಾಧಾಕೃಷ್ಣನ್‌ ಅವರ ಆದರ್ಶಗಳನ್ನು ಶಿಕ್ಷಕರಾದವರು ಎಷ್ಟು ಅಳವಡಿಸಿಕೊಂಡಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಉತ್ತಮ ವಿದ್ಯಾರ್ಥಿಯಾದರೆ ಮಾತ್ರ ಉತ್ತಮ ಶಿಕ್ಷಕನಾಗಬಲ್ಲ ಎಂಬುದನ್ನು ಅರಿತು, ಈ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದರು. ಜಿಪಂ ಸದಸ್ಯ ಮಾಲತೇಶ ಸೊಪ್ಪಿನ ಮಾತನಾಡಿ, ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ. ಶಾಸಕ ಸಿ.ಎಂ. ಉದಾಸಿ ಅವರನ್ನು ಶಿಕ್ಷಕರ ಪದಾಧಿಕಾರಿಗಳೊಂದಿಗೆ ಭೇಟಿ ಮಾಡಿ ಶಿಕ್ಷಣ ಸಚಿವರ ಗಮನಸೆಳೆಯಲು ಪ್ರಯತ್ನಿಸಲಾಗುವುದು. ಶಿಕ್ಷಕರು ಕನ್ನಡ ಶಾಲೆಗಳ ಉಳಿವಿಗೆ ಕಾರ್ಯಯೋಜನೆ ರೂಪಿಸಬೇಕು. ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದರೂ, ಪಾಲಕರಲ್ಲಿ ಆಂಗ್ಲಮಾಧ್ಯಮ ವ್ಯಾಮೋಹ ತಪ್ಪುತ್ತಿಲ್ಲ. ಕನ್ನಡ ಮಾಧ್ಯಮದಲ್ಲಿ ಕಲಿತವರೂ ಉನ್ನತ ಹುದ್ದೆಗಳಲ್ಲಿದ್ದಾರೆ ಎಂಬುದನ್ನು ಅರಿತುಕೊಳ್ಳಿ ಎಂದು ಹೇಳಿದರು.

ಶಿಕ್ಷಕರ ಸಂಘದ ಅಧ್ಯಕ್ಷ ವಿಜೇಂದ್ರ ಯತ್ನಳ್ಳಿ ಮಾತನಾಡಿ, ಮೂರು ಸರ್ಕಾರಗಳು ಬಂದು ಹೋದರೂ ಶಿಕ್ಷಕರ ವರ್ಗಾವಣೆ ಸಮಸ್ಯೆ ಬಗೆಹರಿಯದಾಗಿದೆ. ಸಂವಿಧಾನ ತಿದ್ದಬಹುದು, ಶಿಕ್ಷಕರ ವರ್ಗಾವಣೆ ನೀತಿ ತಿದ್ದಲಾಗದ ಸ್ಥಿತಿಯಿದೆ. ನಿತ್ಯ ಪರಿಷ್ಕೃತ ವೇಳಾಪಟ್ಟಿ ನೋಡುವುದಾಗಿದೆ. ಇದರಿಂದ ಶಿಕ್ಷಕರ ಮನಸ್ಥಿತಿ ಹಾಳಾಗುತ್ತಿದೆ. ಶಿಕ್ಷಕರಿಗೆ ಪಾಠ-ಪ್ರವಚನಕ್ಕಿಂತ ಉಳಿದ ಕೆಲಸಗಳೇ ಹೆಚ್ಚಾಗುತ್ತಿವೆ. ಸರ್ಕಾರ ತಕ್ಷಣ ನಮ್ಮ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

ಜಿಪಂ ಸದಸ್ಯರಾದ ಟಾಕನಗೌಡ ಪಾಟೀಲ, ಗೌರವ್ವ ಶೇತಸನದಿ, ತಾಪಂ ಅಧ್ಯಕ್ಷ ಸಿದ್ದಪ್ಪ ಹಿರಗಪ್ಪನವರ, ಸದಸ್ಯರಾದ ಬಸವರಾಜ್‌ ಬೂದಿಹಾಳ, ಅಜ್ಜಪ್ಪ ಶಿರಳ್ಳಿ, ಎಪಿಎಂಸಿ ಅಧ್ಯಕ್ಷ ಶೇಕಣ್ಣ ಮಹರಾಜ್‌ಪೇಟ, ಎನ್‌.ಎಂ.ಪಾಟೀಲ, ವೆಂಕಟೇಶ ನಾಯಕ್‌, ಎನ್‌.ಪಿ.ಕಲ್ಲೇದೇವರು, ಬಿ.ಎಸ್‌.ಕರೆಣ್ಣನವರ, ಪ್ರಭು ಚಿಕ್ಕಾಂಶಿ, ಎಫ್‌.ಎಲ್.ನದಾಫ್‌, ಸಂತೋಷ ದೊಡ್ಡಮನಿ, ಎಸ್‌.ಎಂ.ದೊಡ್ಡಮನಿ, ದೀಪಾ ಮೇಸ್ತಾ, ಬಿ.ಎಂ.ಬೇವಿನಮರದ, ಬಿ.ಉಮೇಶ್‌, ಇಒ ಚನ್ನಪ್ಪ ರಾಯಣ್ಣನವರ, ಶೇಖರ ಹಂಚಿನಮನಿ, ಡಿ.ಮೋಹನ್‌ಕುಮಾರ್‌ ಅತಿಥಿಗಳಾಗಿದ್ದರು. ಬಿಇಒ ಎಚ್.ಶ್ರೀನಿವಾಸ ಸ್ವಾಗತಿಸಿದರು. ಅನಿಲ್ಕುಮಾರ ಗೋಣೆಣ್ಣವರ ನಿರ್ವಹಿಸಿದರು. ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರು, ವರ್ಗಾವಣೆಗೊಂಡ ಶಿಕ್ಷಕರು, ನಲಿಕಲಿ ಕೇಂದ್ರದ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.