ಇವರೇ ಚಂದಿರನ ಹಿಂದಿನ ತಾರೆಯರು!

ಮಹಿಳಾ ಅಧಿಕಾರಿಗಳ ನಿರ್ದೇಶನದಲ್ಲೇ ಇಸ್ರೋ ಕೈಗೊಳ್ಳಲಿದೆ ದಿಗ್ವಿಜಯ

Team Udayavani, Sep 6, 2019, 10:37 PM IST

v-8

ಬೆಂಗಳೂರು: ಮಹತ್ವಾಕಾಂಕ್ಷಿ ಚಂದ್ರಯಾನ-2ರ ಹಿಂದಿರುವುದು ಮಹಿಳೆಯರು, ಜತೆಗೆ ವಿಜ್ಞಾನಿಗಳ ದೊಡ್ಡ ತಂಡ ಇಬ್ಬರು ಮಹಿಳೆಯರು ಇಡೀ ಚಂದ್ರಯಾನದ ಯೋಜನೆಯನ್ನು ಮುನ್ನಡೆಸುತ್ತಿದ್ದಾರೆ. ವಿಜ್ಞಾನಿ ಮುತ್ತಯ್ಯ ವನಿತಾ ಅವರು ಚಂದ್ರಯಾನದ ಯೋಜನೆ ನಿರ್ದೇಶಕರಾದರೆ, ರಿತು ಕರಿದಲ್‌ ಅವರು ಚಂದ್ರಯಾನದ ಕಾರ್ಯಯೋಜನೆ ನಿರ್ದೇಶಕರು.

ವನಿತಾ ಅವರು ಇಸ್ರೋದ ಉಪಗ್ರಹ ವಿಭಾಗದ ಟೆಲಿಕಾಂ ಮತ್ತು ಡಿಜಿಟಲ್‌ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಇದರೊಂದಿಗೆ ಅವರು ಡಿಜಿಟಲ್‌ ವ್ಯವಸ್ಥೆಯ ಟೆಲಿಮೆಟ್ರಿ ಮತ್ತು ಟೆಲಿಕಾಂ ವಿಭಾಗದ ಮುಖ್ಯಸ್ಥರೂ ಆಗಿದ್ದಾರೆ. ಕಾಟೋಸ್ಯಾಟ-1ರ ಉಪನಿರ್ದೇಶಕರೂ ಆಗಿದ್ದರು. ಓಸೀನ್‌ಸ್ಯಾಟ್‌, ಇತರ ಉಪಗ್ರಹ ನಿಯೋಜನೆಗಳಿಗೂ ಕೆಲಸ ಮಾಡಿದ್ದರು. ಉಪಗ್ರಹ ತಯಾರಿಕೆ, ಅವುಗಳ ಪರಿಶೀಲನೆ, ಜೋಡಿಸುವಿಕೆ, ಯೋಜನೆ ಜಾರಿ ಇತ್ಯಾದಿ ಕೆಲಸಗಳನ್ನು ಅವರ ಇಸ್ರೋದಲ್ಲಿ ಯಶಸ್ವಿಯಾಗಿ ನಿರ್ವಃಇಸಿದ್ದಾರೆ. 2006ರಲ್ಲಿ ಅವರು ಅತ್ಯುತ್ತಮ ಮಹಿಳಾ ವಿಜ್ಞಾನಿ ಪ್ರಶಸ್ತಿ ಪಡೆದಿದ್ದರು. 1987ರಲ್ಲಿ ಅವರು ಇಸ್ರೋ ಸೇರಿದ್ದರು.

ರೀತು ಅವರು ಕಾರ್ಯಯೋಜನೆ ನಿರ್ದೇಶಕರಾಗಿದ್ದು, ಇದಕ್ಕೂ ಮೊದಲು ಮಂಗಳಯಾನದ ಕಾರ್ಯನಿರ್ವಹಣೆ ನಿರ್ದೇಶಕರಾಗಿದದ್ದರು. ಇದು ಇಸ್ರೋದ ಪ್ರಮುಖ ಯೋಜನೆ ಮತ್ತು ಅನ್ಯಗ್ರಹಕ್ಕೆ ಉಪಗ್ರಹ ಕಳಿಸಿದ ಮೊದಲ ಯೋಜನೆಯಾಗಿದೆ. ಬಾಹ್ಯಾಕಾಶ ನೌಕೆಯ ಸ್ವಯಂಚಾಲಿತ ವ್ಯವಸ್ಥೆಗಳು, ಉಪಗ್ರಹದ ಸ್ವಯಂಚಾಲಿತ ವ್ಯವಸ್ಥೆಗಳು ಮತ್ತು ಬಾಹ್ಯಾಕಾಶದಲ್ಲಿ ಅವುಗಳು ಹಾಳಾದರೆ ತನ್ನಿಂದತಾನಾಗಿಯೇ ಸರಿಪಡಿಸಿಕೊಳ್ಳುವ ವ್ಯವಸ್ಥೆಯನ್ನು ರೂಪಿಸುವುದರಲ್ಲಿ ರೀತು ಅವರು ಹೆಚ್ಚಿನ ಪರಿಣತಿ ಹೊಂದಿದ್ದಾರೆ. ಐಐಎಸ್‌ಸಿಯಲ್ಲಿ ಅವರು ಏರೋಸ್ಪೇಸ್‌ ಎಂಜಿನಿಯರಿಂಗ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, 1997ರಿಂದ ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದಾರೆ. 2007ರಲ್ಲಿ ಅವರು ಮಾಜಿ ರಾಷ್ಟ್ರಪತಿ ಡಾ| ಎ.ಪಿ.ಜೆ. ಅಬ್ದುಲ್‌ ಕಲಾಂರಿಂದ ಯುವ ವಿಜ್ಞಾನಿ ಪ್ರಶಸ್ತಿ ಪಡೆದಿದ್ದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.