ಚಂದ್ರಯಾನ-2: ಗಮನ ಸೆಳೆಯುತ್ತಿದೆ ಸುದರ್ಶನ್ ಪಟ್ನಾಯಕ್ ಮರಳು ಶಿಲ್ಪ
Team Udayavani, Sep 7, 2019, 12:52 AM IST
ಪುರಿ: ಪ್ರಸಿದ್ಧ ಮರಳು ಶಿಲ್ಪ ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ಪುರಿ ಸಮುದ್ರ ಕಿನಾರೆಯಲ್ಲಿ ಚಂದ್ರಯಾನ-2ರ ಯಶಸ್ಸಿಗಾಗಿ ಅತ್ಯಾಕರ್ಷಕ ಮರಳು ಶಿಲ್ಪವನ್ನು ರಚಿಸಿದ್ದಾರೆ.
ಸುದರ್ಶನ್ ಪಟ್ನಾಯಕ್ ಅವರು ಪ್ರಮುಖ ದಿನಗಳ ಸಂದರ್ಭದಲ್ಲಿ ವಿಶೇಷ ಥೀಮ್ ಗಳನ್ನು ಇರಿಸಿಕೊಂಡು ಮರಳು ಶಿಲ್ಪವನ್ನು ರಚಿಸುತ್ತಾ ಬರುತ್ತಿದ್ದಾರೆ.
ಈ ಬಾರಿ ಚಂದ್ರಯಾನ-2ರ ಯಶಸ್ಸಿಗಾಗಿ ಸುದರ್ಶನ್ ರಚಿಸಿರುವ ಮರಳು ಶಿಲ್ಪ ಎಲ್ಲರ ಗಮನ ಸೆಳೆಯುತ್ತಿದೆ. ಆಕಾಶ ಬಣ್ಣದ ಹಿನ್ನಲೆಯಲ್ಲಿ ಚಂದ್ರನ ಚಿತ್ರವನ್ನು ಬಿಡಿಸಿ ತ್ರಿವರ್ಣದಲ್ಲಿ ಚಂದ್ರನ ಕಕ್ಷೆಯನ್ನು ಪಡಿಮೂಡಿಸಲಾಗಿದೆ ಮತ್ತು ವಿಕ್ರಂ ಲ್ಯಾಂಡರ್ ಮೇಲೆ ಭಾರತದ ತ್ರಿವರ್ಣ ಧ್ವಜನ್ನು ಚಿತ್ರಿಸಿರುವುದು ಗಮನ ಸೆಳೆಯುವಂತಿದೆ.
ಚಂದ್ರಯಾನ-2ರ ಯಶಸ್ಸಿಗಾಗಿ ದೇಶವಾಸಿಗಳೆಲ್ಲಾ ಕಾತರದಿಂದ ಕಾಯುತ್ತಿದ್ದಾರೆ. ಮತ್ತು ಇಸ್ರೋ ವಿಜ್ಞಾನಿಗಳ ಯಶಸ್ಸಿಗಾಗಿ ಪ್ರಾರ್ಥಿಸುತ್ತಿದ್ದಾರೆ.
#Chandrayaan2 #IndiaCreatingHistory My SandArt at Puri beach in Odisha with messege #JaiVigyan #JaiBharat ?? pic.twitter.com/xIDzSEvZzl
— Sudarsan Pattnaik (@sudarsansand) September 6, 2019
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ
IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್ಗಳ ಜಯ
Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ