ಮತದಾರರ ಪಟ್ಟಿ ಪರಿಷ್ಕರಣೆ ಪ್ರಗತಿಯಲ್ಲಿ
•ತಿಂಗಳಾಂತ್ಯದೊಳಗೆ ಪ್ರತಿ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿ ಸೂಚನೆ
Team Udayavani, Sep 7, 2019, 2:26 PM IST
ಶಿವಮೊಗ್ಗ: ಮತದಾರರ ಪಟ್ಟಿ ಪರಿಷ್ಕರಣೆ ಕುರಿತಂತೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅಧಿಕಾರಿಗಳಿಗೆ ಮಾಹಿತಿ ನೀಡಿದರು.
ಶಿವಮೊಗ್ಗ: ಜಿಲ್ಲೆಯಲ್ಲಿ ಈಗಾಗಲೇ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಮತದಾರರ ಪಟ್ಟಿಯಲ್ಲಿನ ದೋಷಗಳನ್ನು ಸರಿಪಡಿಸಲು ಇದು ಉತ್ತಮ ಅವಕಾಶವಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ತಿಳಿಸಿದರು.
ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ತಾಲೂಕು ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಚುನಾವಣಾ ಶಾಖೆ ಸಿಬ್ಬಂದಿಗೆ ಆಯೋಜಿಸಲಾಗಿದ್ದ ಒಂದು ದಿನದ ತರಬೇತಿ ಉದ್ಘಾಟಿಸಿ ಅವರು ಮಾತನಾಡಿದರು.
ಚುನಾವಣಾ ಪ್ರಕ್ರಿಯೆ ಪ್ರಜಾಪ್ರಭುತ್ವದ ಅತ್ಯಂತ ಮಹತ್ವದ ವಿದ್ಯಮಾನವಾಗಿದೆ. ಎಲ್ಲರ ಸಹಭಾಗಿತ್ವದಿಂದ ಮಾತ್ರ ಪ್ರಜಾಪ್ರಭುತ್ವ ಬಲಗೊಳ್ಳಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸುವುದು ಪ್ರಮುಖ ಕಾರ್ಯವಾಗಿದೆ. ಎಲ್ಲಾ ಅರ್ಹ ಮತದಾರರನ್ನು ಮತದಾರರ ಪಟ್ಟಿಯಲ್ಲಿ ಸೇರಿಸುವುದು ಮಾತ್ರವಲ್ಲದೆ, ಮತದಾರರ ಪಟ್ಟಿಯಲ್ಲಿರಬಹುದಾದ ದೋಷಗಳನ್ನು ಸರಿಪಡಿಸುವುದು, ಮತದಾರರ ವೈಯಕ್ತಿಕ ಮಾಹಿತಿಯನ್ನು ಪಡೆದುಕೊಂಡು ಅವರೊಂದಿಗೆ ಸಂಪರ್ಕ ಸಾಧಿಸುವುದು ಸಹ ಈ ವಿಶೇಷ ಅಭಿಯಾನದ ಉದ್ದೇಶವಾಗಿದೆ ಎಂದರು.
ಎಲ್ಲಾ ಬಿಎಲ್ಒಗಳು ಸೆಪ್ಟೆಂಬರ್ ಅಂತ್ಯದ ಒಳಗಾಗಿ ಪ್ರತಿಯೊಂದು ಮನೆಗೆ ಭೇಟಿ ನೀಡಿ ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಸಂಗ್ರಹಿಸಬೇಕು. ಇದಕ್ಕಾಗಿ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗಿದ್ದು, ಈ ಕುರಿತು ತರಬೇತಿ ನೀಡಲಾಗಿದೆ. ಜಿಪಿಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಕೆಯಿಂದ ನಿಖರ ಮಾಹಿತಿಯನ್ನು ಸಂಗ್ರಹಿಸಲು ಸಾಧ್ಯವಿದೆ. ಯಾವುದೇ ಅರ್ಹ ಮತದಾರ ಬಿಟ್ಟು ಹೋಗದಂತೆ ಬಿಎಲ್ಒಗಳು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ನೋಂದಾಯಿಸಲು ಅರ್ಜಿ ನಮೂನೆ-06, ಬೇರೆ ಕಡೆ ಹೋಗಿರುವ ಮತದಾರರ ಹೆಸರು ತೆಗೆದು ಹಾಕಲು ನಮೂನೆ-07, ತಿದ್ದುಪಡಿಗಾಗಿ ನಮೂನೆ 08ರಲ್ಲಿ ಮಾಹಿತಿ ಪಡೆಯಬೇಕು. ಮನೆಯ ಎಲ್ಲಾ ಸದಸ್ಯರ ಹೆಸರು ಒಂದೇ ಮತಗಟ್ಟೆ ವ್ಯಾಪ್ತಿಯಲ್ಲಿ ಬರುವಂತೆ ಖಾತ್ರಿಪಡಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಹೆಚ್ಚುವರಿಯಾಗಿ ರಚಿಸಬಹುದಾದ ಮತಗಟ್ಟೆಗಳ ಕುರಿತು ಸರ್ಕಾರಿ ಕಟ್ಟಡಗಳ ಮಾಹಿತಿ ಸಂಗ್ರಹಿಸಬೇಕು. ಒಂದು ಜನವರಿ 2020ಕ್ಕೆ ಅನ್ವಯವಾಗುವಂತೆ ಒಂದು ಜನವರಿ 2002ರ ಪೂರ್ವದಲ್ಲಿ ಜನಿಸಿದವರ ಮಾಹಿತಿಯನ್ನು ಸಂಗ್ರಹಿಸಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಾಳಿ, ಶಿವಮೊಗ್ಗ ಉಪ ವಿಭಾಗಾಧಿಕಾರಿ ಪ್ರಕಾಶ್, ಎಲ್ಲಾ ತಹಶೀಲ್ದಾರ್ಗಳು, ತಾಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಬಿಇಒಗಳು ಮತ್ತಿತರ ಅಧಿಕಾರಿಗಳು ತರಬೇತಿಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ
Malpe ಬೀಚ್: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ
MUST WATCH
ಹೊಸ ಸೇರ್ಪಡೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
BJP ಅಧಿಕಾರದ ರಾಜ್ಯಗಳಲ್ಲಿ ಎಸ್ಸಿಪಿ, ಟಿಎಸ್ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!