ಪಕ್ಷಿ ಸಂಕುಲ ಉಳಿವಿಗೆ ಆದ್ಯತೆ: ಶಾಸಕ ಭೀಮಾನಾಯ್ಕ

20 ಲಕ್ಷ ರೂ ಅನುದಾನದಲ್ಲಿ ಪಕ್ಷಿಧಾಮದ ಕೆರೆ ತುಂಬಿಸುವ ಕಾರ್ಯಕ್ಕೆ ಚಾಲನೆ

Team Udayavani, Sep 7, 2019, 5:52 PM IST

7-September-33

ಹಗರಿಬೊಮ್ಮನಹಳ್ಳಿ: ತಾಲೂಕಿನ ಅಂಕಸಮುದ್ರ ಪಕ್ಷಿಧಾಮದ ಕೆರೆ ನೀರು ತುಂಬಿಸುವ ಯೋಜನೆಗೆ ಶಾಸಕ ಭೀಮಾನಾಯ್ಕ ಚಾಲನೆ ನೀಡಿದರು.

ಹಗರಿಬೊಮ್ಮನಹಳ್ಳಿ: ಸಣ್ಣ ನೀರಾವರಿ ಇಲಾಖೆಯ 20 ಲಕ್ಷ ರೂ. ಅನುದಾನದಲ್ಲಿ ತಾಲೂಕಿನ ಅಂಕಸಮುದ್ರ ಪಕ್ಷಿಧಾಮದ ಕೆರೆ ತುಂಬಿಸಲು ಪಂಪ್‌ ಮತ್ತು ಮೋಟಾರ್‌ ಅಳವಡಿಸಿ ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆಗೆ ಶಾಸಕ ಭೀಮಾನಾಯ್ಕ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಹೈ.ಕ. ವ್ಯಾಪ್ತಿಯ ಮೊದಲ ಪಕ್ಷಿಬೇಧ ಸಂರಕ್ಷಿತ ಪ್ರದೇಶವಾಗಿದ್ದರಿಂದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. 2001ರಲ್ಲಿ ನನೆಗುದಿಗೆ ಬಿದ್ದಿದ್ದ ಕಾಮಗಾರಿಗೆ ಜೀವತುಂಬುವ ಮೂಲಕ ಪಕ್ಷಿ ಸಂಕುಲ ಉಳಿವಿಗೆ ಕೈಜೋಡಿಸಲಾಗಿದೆ. ಕೆರೆಗೆ ಪ್ರತಿವರ್ಷ 174 ಪ್ರಬೇಧದ ಪಕ್ಷಿಗಳು ಸಂತಾನಕ್ಕಾಗಿಯೇ ಇಲ್ಲಿಗೆ ಆಗಮಿಸುವುದು ವಿಶೇಷವಾಗಿದೆ. ಜೊತೆಗೆ 75 ವಿದೇಶಗಳ ಪಕ್ಷಿಗಳು ಆಗಮಿಸುವುದು ಮತ್ತೂಂದು ವಿಶೇಷವಾಗಿದೆ. ಪಕ್ಷಿಗಳ ಸಂರಕ್ಷಣೆ ಜೊತೆಗೆ ಅಂತರ್ಜಲ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಕೆರೆ ತುಂಬಿಸುವ ಯೋಜನೆಗೆ ಆದ್ಯತೆ ನೀಡಲಾಗಿದೆ. ಟೀಕಾಕಾರರಿಗೆ ಕೆಲಸದ ಮೂಲಕ ಸೂಕ್ತ ಉತ್ತರ ಕೊಡುತ್ತೇನೆ. ಕ್ಷೇತ್ರದ 12 ಕೆರೆ ತುಂಬಿಸುವ ಯೋಜನೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂದರು.

ನಂದಿಪುರ ಮಹೇಶ್ವರ ಸ್ವಾಮೀಜಿ ಮಾತನಾಡಿ, ಶಾಸಕರು ನೀರಾವರಿ ಯೋಜನೆಗೆ ಹೆಚ್ಚು ಆದ್ಯತೆ ನೀಡುತ್ತಿರುವುದು ಅತ್ಯಂತ ಸಂತೋಷಕರ. ಪಕ್ಷಿ ಸಂಕುಲ ಸಂರಕ್ಷಿಸುವ ಹಿನ್ನೆಲೆಯಲ್ಲಿ ಅಂಕಸಮುದ್ರ ಪಕ್ಷಿಧಾಮಕ್ಕೆ ನೀರು ತುಂಬಿಸಲು ಬೃಹತ್‌ ಮೋಟಾರ್‌ ಪಂಪು ಅಳವಡಿಸಿರುವುದು ನೈಜ ಕಾಳಜಿಯಾಗಿದೆ. ಪಕ್ಷಿದಾಮದ ಅಭಿವೃದ್ಧಿ ಪ್ರವಾಸಿಗರನ್ನು ಸೆಳೆಯುವಲ್ಲಿ ಯಶಸ್ವಿಯಾಗುತ್ತದೆ ಎಂದರು.

ಹನಸಿ ಹಾಲಶಂಕರ ಸ್ವಾಮೀಜಿ, ಮುಖಂಡ ರವೀಂದ್ರಗೌಡ ಮಾತನಾಡಿದರು. ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ್‌, ಪುರಸಭೆ ಸದಸ್ಯ ಹುಡೇದ ಗುರುಬಸವರಾಜ, ಮುಟುಗನಹಳ್ಳಿ ಕೊಟ್ರೇಶ, ಕನ್ನಿಹಳ್ಳಿ ಚಂದ್ರಶೇಖರ, ಹಾಲ್ದಾಳ್‌ ವಿಜಯಕುಮಾರ, ಕೇಶವರೆಡ್ಡಿ, ಚಂದ್ರಶೇಖರ ರೆಡ್ಡಿ, ಕಲ್ಲನಗೌಡ, ಶಿವಕುಮಾರ, ಉಮೇಶ ಇತರರಿದ್ದರು. ಗ್ರಾಮದ ಯುವಬ್ರಿಗೇಡ್‌ ಯುವಕರು ಕೆರೆ ತುಂಬಿಸಲು ಶಾಸಕರು ತೋರಿದ ಕಾಳಜಿಗೆ ಮೆಚ್ಚಿ ಶಾಸಕರನ್ನು ಸನ್ಮಾನಿಸಿ ಗೌರವಿಸಿದರು.

ಟಾಪ್ ನ್ಯೂಸ್

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

Kollywood: ಅಣ್ಣಾಮಲೈ ಬಯೋಪಿಕ್‌ಗೆ ತಯಾರಿ? ಖಡಕ್‌ ಐಪಿಎಸ್‌ ಅಧಿಕಾರಿಯಾಗಿ ವಿಶಾಲ್‌ ನಟನೆ?

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

dvs

Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1BP

NADA; ಕುಸ್ತಿಪಟು ಬಜರಂಗ್ ಅನಿರ್ದಿಷ್ಟಾವಧಿಗೆ ಅಮಾನತು: ಒಲಿಂಪಿಕ್ಸ್‌ ಭಾಗಿ ಅನುಮಾನ

8-

ಸಂವಿಧಾನ ಬದಲಿಸುವ BJPಗೆ ಬುದ್ಧಿ ಕಲಿಸಲು Congress ಪಕ್ಷ ಗೆಲ್ಲಬೇಕು: ದರ್ಶನ್ ಧ್ರುವನಾರಾಯಣ

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

Gadag; ಚುನಾವಣೆ ಬಳಿಕ ಸಿಎಂ ರಾಜೀನಾಮೆ ಕೊಡುವ ಸಂದರ್ಭ ಬರಬಹುದು: ಸಿ.ಸಿ.ಪಾಟೀಲ್

15

ʼIndian 2ʼ ರಿಲೀಸ್ ಮುಂದೂಡಿಕೆ ಬೆನ್ನಲ್ಲೇ ಧನುಷ್‌ ʼರಾಯನ್‌ʼ ಬಿಡುಗಡೆಗೆ ಪ್ಲ್ಯಾನ್

England Women’s Cricket Team Selection Using AI Technology

AI ತಂತ್ರಜ್ಞಾನ ಬಳಸಿ ಇಂಗ್ಲೆಂಡ್‌ ಮಹಿಳಾ ಕ್ರಿಕೆಟ್‌ ತಂಡದ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.