ತ್ಯಾಜ್ಯ ಎಸೆಯುವವರ ಪತ್ತೆಗೆ ಸಿಸಿ ಕೆಮರಾ ಅಳವಡಿಸಲು ಸಿದ್ಧತೆ


Team Udayavani, Sep 8, 2019, 5:30 AM IST

cc-camera

ಬಂಟ್ವಾಳ : ಇಲ್ಲಿನ ಪುರಸಭಾ ವ್ಯಾಪ್ತಿಯ ಗಡಿ ಪ್ರದೇಶದಲ್ಲಿ ತ್ಯಾಜ್ಯ ರಾಶಿಯ ಸಮಸ್ಯೆ ಉಲ್ಬಣಿಸು ತ್ತಿದ್ದು, ತ್ಯಾಜ್ಯ ಎಸೆಯುವ ಕಿಡಿಗೇಡಿಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಬಂಟ್ವಾಳ ಪುರಸಭೆ 5 ಕಡೆಗಳಲ್ಲಿ ಸಿಸಿ ಕೆಮರಾಗಳ ಅಳವಡಿಕೆಗೆ ಸಿದ್ಧತೆ ನಡೆಸಿದೆ. 15 ದಿನಗಳೊಳಗೆ ಸಿಸಿ ಕೆಮರಾಗಳು ಅಳವಡಿಕೆ ಯಾಗಲಿದ್ದು, ಸ್ಥಳಗಳನ್ನು ಇನ್ನೂ ಬಹಿರಂಗಪಡಿಸಿಲ್ಲ.

ಪಾಣೆಮಂಗಳೂರು ಸೇತುವೆಯ ಬಳಿ, ಅಮಾrಡಿ, ತಲಪಾಡಿ, ಲೊರೆಟ್ಟೋ ಪ್ರದೇಶಗಳಲ್ಲಿ ತ್ಯಾಜ್ಯ ರಾಶಿ ಕಂಡುಬರುತ್ತಿದ್ದು, ಈ ಎಲ್ಲ್ಲ ಪ್ರದೇಶಗಳು ಗ್ರಾ.ಪಂ.ವ್ಯಾಪ್ತಿಗೆ ಬರುತ್ತಿವೆ ಎಂದು ಪುರಸಭಾ ಅಧಿಕಾರಿಗಳು ಹೇಳುತ್ತಾರೆ. ಅದು ತನ್ನ ಗಡಿಪ್ರದೇಶದಲ್ಲಿ ಇರುವ ಕಾರಣ ಪುರಸಭೆಯು ಈಗಾಗಲೇ ಆ ಭಾಗದ ಸಂಬಂಧಪಟ್ಟ ಗ್ರಾ.ಪಂ.ಗಳಿಗೆ ನೋಟಿಸ್‌ ನೀಡಿದ್ದರೂ ಸಮಸ್ಯೆಗೆ ಮುಕ್ತಿ ಸಿಕ್ಕಿಲ್ಲ.

ಪುರಸಭೆಯಿಂದ ಆ ಪ್ರದೇಶದಲ್ಲಿ ತ್ಯಾಜ್ಯ ತೆರವು ಗೊಳಿಸಿದರೂ ಕಿಡಿಗೇಡಿಗಳು ಮತ್ತೆ ಮತ್ತೆ ತ್ಯಾಜ್ಯ ತಂದು ಹಾಕುತ್ತಿರುವುದಿಂದ ಸಾರ್ವಜನಿಕರಿಗೆ ತೊಂದರೆ ಯಾಗುತ್ತಿದೆ. ಹೀಗಾಗಿ ಕಿಡಿಗೇಡಿಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಪುರಸಭೆ ಸಿಸಿ ಕೆಮರಾಗಳ ಅಳವಡಿಕೆಗೆ ಚಿಂತನೆ ನಡೆಸಿ, ಅನುದಾನ ಮೀಸಲಿಟ್ಟಿತ್ತು.

ಸ್ಥಳ ಬಹಿರಂಗವಿಲ್ಲ

ಬಂಟ್ವಾಳ ಪುರಸಭೆಯ ಅನುದಾನ ದಿಂದ ಸಿಸಿ ಕೆಮರಾ ಅಳವಡಿಕೆಯಾಗಲಿದ್ದು, ಟೆಂಡರ್‌ ಪ್ರಕ್ರಿಯೆ ಪೂರ್ಣ ಗೊಂಡಿದೆ. ಹೀಗಾಗಿ ಮುಂದಿನ 2 ವಾರ ಗಳೊಳಗೆ 5 ಕಡೆಗಳಲ್ಲಿ ಸಿಸಿ ಕೆಮರಾ ಅಳವಡಿಕೆಯಾಗಲಿದೆ.

ಆದರೆ ಅಳವಡಿಕೆ ಪ್ರದೇಶ ಗಳನ್ನು ಪುರಸಭೆ ಗೌಪ್ಯವಾಗಿರಿಸಿದೆ. ಸಿಸಿ ಕೆಮರಾ ಅಳವಡಿಕೆಯಾಗಿದೆ ಎಂದಾಗ ಕಿಡಿಗೇಡಿಗಳು ಬೇರೆ ಸ್ಥಳ ಹುಡುಕ ಬಹುದೆಂಬ ಕಾರಣಕ್ಕೆ ಸಿಸಿ ಕೆಮರಾ ಅಳವಡಿಕೆ ಸ್ಥಳ ಬಹಿರಂಗಗೊಳಿಸಿಲ್ಲ

ಪುರಸಭೆಯ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹದ ಕುರಿತು ಗೊಂದಲಗಳಿದ್ದರೆ ಪುರಸಭೆಗೆ ತಿಳಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಸಮಸ್ಯೆಯಿದ್ದರೆ ಪುರಸಭೆಯ ಗಮನಕ್ಕೆ ಬಂದಾಗ ಅದನ್ನು ಸರಿಪಡಿಸಬಹುದು. ಅದರ ಬದಲು ರಸ್ತೆ ಬದಿಗೆ ತಂದು ಎಸೆದರೆ ಮತ್ತೂಂದು ಸಮಸ್ಯೆ ಉದ್ಭವಿಸುತ್ತದೆ. ಹೀಗಾಗಿ ದೂರವಾಣಿ ಮೂಲಕ ತಿಳಿಸುವಂತೆ ಪುರಸಭೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಕಿಡಿಗೇಡಿಗಳ ಪತ್ತೆಗೆ ಕ್ರಮ

ರಸ್ತೆ ಬದಿ ತ್ಯಾಜ್ಯ ಎಸೆಯುವ ಕಿಡಿಗೇಡಿಗಳ ಪತ್ತೆಗೆ ಪುರಸಭೆ ಸಿಸಿ ಕೆಮರಾ ಅಳವಡಿಕೆಗೆ ಕ್ರಮ ಕೈಗೊಂಡಿದೆ. ತ್ಯಾಜ್ಯ ರಾಶಿ ಇರುವ ಸ್ಥಳಗಳು ಗ್ರಾ.ಪಂ.ವ್ಯಾಪ್ತಿಗೆ ಬರುತ್ತಿದ್ದು, ತೆರವಿಗೆ ಗ್ರಾ.ಪಂ.ಗೆ ನೋಟಿಸ್‌ ನೀಡಿ ದ್ದೇವೆ. ತ್ಯಾಜ್ಯ ವಿಲೇ ಸಮಸ್ಯೆಗಳಿದ್ದರೆ ನಮ್ಮ ಬಳಿ ತಿಳಿಸಿ, ಅದರ ಬದಲು ರಸ್ತೆಗೆ ತಂದು ಎಸೆಯುವುದು ಸರಿಯಲ್ಲ.
– ರೇಖಾ ಜೆ. ಶೆಟ್ಟಿ

ಮುಖ್ಯಾಧಿಕಾರಿ, ಬಂಟ್ವಾಳ ಪುರಸಭೆ
ದೂರವಾಣಿ ಮೂಲಕ ತಿಳಿಸಿ

ಪುರಸಭೆಯ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹದ ಕುರಿತು ಗೊಂದಲಗಳಿದ್ದರೆ ಪುರಸಭೆಗೆ ತಿಳಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಸಮಸ್ಯೆಯಿದ್ದರೆ ಪುರಸಭೆಯ ಗಮನಕ್ಕೆ ಬಂದಾಗ ಅದನ್ನು ಸರಿಪಡಿಸಬಹುದು. ಅದರ ಬದಲು ರಸ್ತೆ ಬದಿಗೆ ತಂದು ಎಸೆದರೆ ಮತ್ತೂಂದು ಸಮಸ್ಯೆ ಉದ್ಭವಿಸುತ್ತದೆ. ಹೀಗಾಗಿ ದೂರವಾಣಿ ಮೂಲಕ ತಿಳಿಸುವಂತೆ ಪುರಸಭೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.