100 ಲಕ್ಷ ಕೋ.ರೂ. ಯೋಜನೆ ಜಾರಿಗೆ ಕಾರ್ಯಪಡೆ
Team Udayavani, Sep 8, 2019, 6:01 AM IST
ಹೊಸದಿಲ್ಲಿ: ದೇಶದ ಆರ್ಥಿಕತೆ ಕುಸಿತವನ್ನು ನಿಯಂತ್ರಿಸಲು ಕೆಲವೇ ದಿನಗಳ ಹಿಂದೆ ಹಲವು ಘೋಷಣೆ ಮಾಡಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈಗ ಮುಂದಿನ 5 ವರ್ಷಗಳವರೆಗೆ ದೇಶದ ಮೂಲ ಸೌಕರ್ಯ ಯೋಜನೆಗಳ
ರೂಪುರೇಷೆಗೆ ಕಾರ್ಯಪಡೆ ರಚಿಸುವುದಾಗಿ ಘೋಷಿಸಿದ್ದಾರೆ.
ಈಗಾಗಲೇ ಮೂಲ ಸೌಕರ್ಯಕ್ಕಾಗಿ 100 ಲಕ್ಷ ಕೋಟಿ ರೂ.ಗಳನ್ನು ನೀಡುವುದಾಗಿ ಕೇಂದ್ರ ಘೋಷಿಸಿದ್ದು, ಈ ಕಾರ್ಯ ಪಡೆಯು ಪ್ರಸ್ತುತ ಹಣಕಾಸು ವರ್ಷ, ಮುಂದಿನ 5 ವರ್ಷ ಕೈಗೊಳ್ಳಲಾಗುವ ಯೋಜನೆಗಳನ್ನು ಗುರುತಿಸಲಿದೆ. ತಾಂತ್ರಿಕವಾಗಿ, ಆರ್ಥಿಕವಾಗಿ ಸೂಕ್ತವಾದ ಯೋಜನೆಗಳನ್ನು ಗುರುತಿಸುವುದು, ಯೋಜನೆ ವೆಚ್ಚ ಅನಗತ್ಯ ವಾಗಿ ಹೆಚ್ಚಳವಾಗುವುದು, ವಿಳಂಬವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಈ ಕಾರ್ಯಪಡೆ ರೂಪುರೇಷೆ ಸಿದ್ಧಪಡಿಸಲಿದೆ.
ಕಾರ್ಯಪಡೆಯಲ್ಲಿ ಯಾರಿರುತ್ತಾರೆ?
ಹಣಕಾಸು ಸಚಿವಾಲಯದ ಆರ್ಥಿಕ ವ್ಯವಹಾರಗಳ ಕಾರ್ಯದರ್ಶಿ ನೇತೃತ್ವ ವಹಿಸ ಲಿದ್ದು, ಇತರ ಅಧಿಕಾರಿಗಳು ಇರುವರು.
ಒಟ್ಟು ಆರು ಸದಸ್ಯರು ಈ ಕಾರ್ಯಪಡೆಯಲ್ಲಿ ಇರಲಿದ್ದಾರೆ. ಅ. 31ರ ವೇಳೆಗೆ ಈ ವರ್ಷದ ಯೋಜನೆಯನ್ನು ಒದಗಿಸಲಿದೆ ಮತ್ತು 2021-25ರ ರೂಪುರೇಷೆಯನ್ನು ಡಿ.31ರಂದು ನೀಡಲಿದೆ.
ಆರ್ಥಿಕತೆಯ ಗುರಿ
5 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿಯನ್ನು ಸಾಧಿಸಲು ಗುಣಮಟ್ಟದ ಮೂಲಸೌಕರ್ಯ ಅತ್ಯಂತ ಪ್ರಮುಖ. ದೇಶದ ಅಭಿವೃದ್ಧಿ ದರ ಹೆಚ್ಚಳ ಕಾಣಲು ಮೂಲ ಸೌಕರ್ಯದಲ್ಲಿ ಹೂಡಿಕೆ ಮಾಡಬೇಕಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು
Chennai: ಪಾರ್ಕ್ ನಲ್ಲಿ ಬಾಲಕಿಯ ಮೇಲೆ ಎರಡು ರಾಟ್ ವೀಲರ್ ನಾಯಿಗಳ ದಾಳಿ; ಮಾಲೀಕರ ಬಂಧನ
MUST WATCH
ಹೊಸ ಸೇರ್ಪಡೆ
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ