ವರ್ಗಾವಣೆ ಕೌನ್ಸೆಲಿಂಗ್‌ ಗೊಂದಲದ ಗೂಡು

ಮೊಳಕಾಲ್ಮೂರು ತಾಲೂಕಿಗೆ ಹೋಗಲು ಶಿಕ್ಷಕರ ನಕಾರ •ಕಡ್ಡಾಯ ವರ್ಗಾವಣೆಗೆ ಶಿಕ್ಷಕರ ಆಕ್ರೋಶ

Team Udayavani, Sep 8, 2019, 5:07 PM IST

8-Sepctember-19

ಚಿತ್ರದುರ್ಗ: ಡಿಡಿಇಐ ಕಚೇರಿಯ ಎಸ್‌ಎಸ್‌ಎ ಸಭಾಂಗಣದಲ್ಲಿ ನಡೆದ ವರ್ಗಾವಣೆ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಿದ್ದ ಶಿಕ್ಷಕರು.

ಚಿತ್ರದುರ್ಗ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಶನಿವಾರ ನಗರದಲ್ಲಿ ನಡೆಸಿದ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್‌ ಪ್ರಕ್ರಿಯೆ ಗೊಂದಲದ ಗೂಡಾಗಿತ್ತು.

ಬೆಳಿಗ್ಗೆ 10:30 ಗಂಟೆಗೆ ಆರಂಭವಾಗಬೇಕಿದ್ದ ಕೌನ್ಸೆಲಿಂಗ್‌ ಪ್ರಕ್ರಿಯೆ ತಾಂತ್ರಿಕ ಕಾರಣಗಳಿಂದ ಮಧ್ಯಾಹ್ನ 1 ಗಂಟೆಗೆ ಆರಂಭವಾಯಿತು. ಇದರ ಜತೆಗೆ ಕಡ್ಡಾಯ ವರ್ಗಾವಣೆ ವಿರೋಧಿಸಿ ಕಳೆದ ಹಲವು ದಿನಗಳಿಂದ ಮುನಿಸಿನಲ್ಲಿದ್ದ ಶಿಕ್ಷಕರು ಇಲಾಖೆಯ ಕ್ರಮದ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದರು.

ಮೊದಲ ಹಂತದಲ್ಲಿ ಎ ವಲಯದಿಂದ ಬಿ ಮತ್ತು ಎ ವಲಯದಿಂದ ಸಿ ವಲಯಕ್ಕೆ ಶೇ. 20ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇರುವ ತಾಲೂಕುಗಳಿಗೆ ವರ್ಗಾವಣೆ ಪ್ರಾರಂಭವಾಯಿತು. ಈ ವೇಳೆ ಕೆಲ ಶಿಕ್ಷಕರು ಆಕ್ಷೇಪ ವ್ಯಕ್ತಪಡಿಸಿದರು. ಎಲ್ಲವನ್ನೂ ಸರಿಪಡಿಸಿ ಮತ್ತೆ ಆನ್‌ಲೈನ್‌ ಮೂಲಕ ಕೌನ್ಸೆಲಿಂಗ್‌ ಆರಂಭಿಸುವ ಹೊತ್ತಿಗೆ ದೂರದ ಮೊಳಕಾಲ್ಮೂರು ತಾಲೂಕಿಗೆ ವರ್ಗವಾಗಲು ಇಷ್ಟವಿಲ್ಲದ ಶಿಕ್ಷಕರು ಮೊದಲು ನಮ್ಮನ್ನು ತೆಗೆದುಕೊಳ್ಳಬೇಡಿ. ಸುತ್ತಮುತ್ತ ಇರುವ ಶಿಕ್ಷಕರಿಗೆ ಆದ್ಯತೆ ಕೊಡಿ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು ಕಡೆಯಿಂದ ಮೊಳಕಾಲ್ಮೂರು ತಲುಪಲು ನೂರು ಕಿಮೀಗಿಂತ ದೂರವಾಗುತ್ತದೆ ಎಂದು ಒತ್ತಾಯಿಸಿದರು.

ಆದರೆ ಇದ್ಯಾವುದನ್ನೂ ಪರಿಗಣಿಸದೆ ಇಲಾಖೆಯ ಆದೇಶದನ್ವಯ ರಾತ್ರಿ 7 ಗಂಟೆವರೆಗೆ ಡಿಡಿಪಿಐ ಕಚೇರಿಯಲ್ಲಿ ಆನ್‌ಲೈನ್‌ ಕೌನ್ಸೆಲಿಂಗ್‌ ‌ಡೆಯಿತು. ಜಿಲ್ಲೆಯಲ್ಲಿ ಹೆಚ್ಚು ಹುದ್ದೆಗಳು ಖಾಲಿ ಇರುವುದು ಮೊಳಕಾಲ್ಮೂರು ತಾಲೂಕಿನಲ್ಲಿ. ಆದರೆ ಅಲ್ಲಿಗೆ ಹೋಗಲು ಯಾರೂ ಒಪ್ಪದೇ ಇರುವುದು ಕಂಡು ಬಂತು. ಹಲವಾರು ಶಿಕ್ಷಕರು, ಗಲ್ಲಿಗೇರಿಸುವಾಗಲಾದರೂ ಕೊನೆಯ ಆಸೆ ಕೇಳುತ್ತಾರೆ. ಆದರೆ ಇಲಾಖೆ ನಮ್ಮ ಮಾತನ್ನೇ ಕೇಳದಂತೆ ಏಕಾಏಕಿ ವರ್ಗಾವಣೆ ಮಾಡಲು ಮುಂದಾಗಿದೆ. ಇದರಿಂದ ನಮ್ಮ ಬದುಕು ಅಸ್ತವ್ಯಸ್ತವಾಗಲಿದೆ. ಮಕ್ಕಳು, ಸಂಸಾರ ಎಲ್ಲವನ್ನೂ ಬಿಟ್ಟು ಹೋಗಬೇಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಟ್ಟು 87 ಶಿಕ್ಷಕರನ್ನು ಕಡ್ಡಾಯ ವರ್ಗಾವಣೆ ಮಾಡುತ್ತಿದ್ದು, ಇದರಲ್ಲಿ 6 ಮುಖ್ಯ ಶಿಕ್ಷಕರು, 75 ಸಹ ಶಿಕ್ಷಕರು ಹಾಗೂ 6 ದೈಹಿಕ ಶಿಕ್ಷಕರು ಇದ್ದಾರೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.