ಮಾಮು ಹೋಟೆಲ್‌ನ ಸ್ಪೆಷಲ್‌ ತುಪ್ಪದ ಇಡ್ಲಿ!


Team Udayavani, Sep 9, 2019, 5:00 AM IST

hotel-hassan-(1)

ಇಡ್ಲಿ ಸಾಮಾನ್ಯವಾಗಿ ಎಲ್ಲಾ ಹೋಟೆಲ್‌ಗ‌ಳಲ್ಲಿ ತಪ್ಪದೇ ಸಿಗುವ ತಿಂಡಿ. ಆದರೆ, ಕೆಲವೊಂದು ಹೋಟೆಲ್‌ಗ‌ಳು ಇಡ್ಲಿ ತಯಾರಿಯಲ್ಲೂ ಸ್ಪೆಶಾಲಿಟಿ ಹೊಂದಿರುತ್ತವೆ. ಅಂತಹದೇ ಹೋಟೆಲ್‌ ಹಾಸನ ನಗರದಲ್ಲಿದೆ. ಅದು “ಮಾಮು ಇಡ್ಲಿ ಹೋಟೆಲ್‌’ ಎಂದೇ ಜನಪ್ರಿಯವಾಗಿದೆ.

40 ವರ್ಷಗಳ ಹಿಂದೆ ಅರಕಲಗೂಡು ತಾಲೂಕಿನ ಬಸವಪಟ್ಟಣದಿಂದ ಹಾಸನಕ್ಕೆ ಬಂದ ವೆಂಕಟೇಶ್‌ ಶೆಟ್ಟಿ, ಈ ಹೋಟೆಲ್‌ನ ಸಂಸ್ಥಾಪಕರು. ಮೊದಲಿಗೆ ಸೋಡಾ ಮಾರಾಟ ಮಾಡುತ್ತಿದ್ದ ಇವರು, 25 ವರ್ಷಗಳ ಹಿಂದೆ ಚಿಕ್ಕದಾಗಿ ಹೋಟೆಲ್‌ ಆರಂಭಿಸಿದರು. ಪತ್ನಿ ಜೊತೆ ಸೇರಿ ಇಡ್ಲಿ, ದೋಸೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಇಡ್ಲಿ ಜೊತೆ ಕೊಡುತ್ತಿದ್ದ ತುಪ್ಪ ಜನರನ್ನು ಆಕರ್ಷಿಸಿತು. ಇವರ ಬಳಿಯೇ ಒಂದು ತಿಂಗಳು ಕೆಲಸಕ್ಕೆ ಇದ್ದ ಹಾಸನದ ದೊಡ್ಡಬಸವನಹಳ್ಳಿ ರಮೇಶ್‌, ಹೋಟೆಲ್‌ ಮಳಿಗೆಯನ್ನು ಬಾಡಿಗೆಗೆ ಪಡೆದು ಹೋಟೆಲನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ.

ವಿಶೇಷವೇನು ಗೊತ್ತೆ? ಈ ಹೋಟೆಲ್‌ನಲ್ಲಿ ಇಡ್ಲಿ ಬಿಟ್ಟರೆ ದೋಸೆ ಸಿಗುತ್ತೆ. ಚಿತ್ರಾನ್ನ, ಪಲಾವ್‌, ಉಪ್ಪಿಟ್ಟು, ಕೇಸರಿಬಾತು…ಉಹುಂ, ಇದ್ಯಾವುದೂ ಸಿಗುವುದಿಲ್ಲ. ಆದರೂ ತುಪ್ಪದ ಇಡ್ಲಿ, ದೋಸೆಯ ರುಚಿಗೆ ಮರುಳಾಗಿರುವ ಗ್ರಾಹಕರು ಇಲ್ಲಿಗೆ ತಪ್ಪದೇ ಬರುತ್ತಾರೆ.

8 ಮಂದಿಗೆ ಉದ್ಯೋಗ:
ನಾಲ್ಕನೇ ತರಗತಿ ಓದಿರುವ ರಮೇಶ್‌, ಮೊದಲು ಗಾರೆಕೆಲಸ ಮಾಡುತ್ತಿದ್ದರು. ನಂತರ ವೆಂಕಟೇಶ್‌ಶೆಟ್ಟಿ ಅವರ ಹೋಟೆಲ್‌ನಲ್ಲಿ ಕೆಲಸಕ್ಕೆ ಸೇರಿಕೊಂಡರು. ವೆಂಕಟೇಶ್‌ ಶೆಟ್ರಿಗೆ ವಯಸ್ಸಾಗಿದ್ದ ಕಾರಣ ಹೋಟೆಲ್‌ ನಡೆಸಲು ಆಗಲಿಲ್ಲ. ಅಂಥ ಸಮಯದಲ್ಲೇ ಹೋಟೆಲನ್ನು ಬಾಡಿಗೆಗೆ ಪಡೆದ ರಮೇಶ್‌, ಇದೀಗ 8 ಮಂದಿಗೆ ಉದ್ಯೋಗ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಹಾಸನಾಂಬ ದೇಗುಲ, ಚೆನ್ನಕೇಶವ ಕಲ್ಯಾಣ ಮಂಟಪದ ಬಳಿ ಇದೇ ಹೆಸರಲ್ಲಿ ಮತ್ತೂಂದು ಸಸ್ಯಾಹಾರಿ ಹೋಟೆಲ್‌ ಮಾಡಿ ಅಲ್ಲಿ ಇಡ್ಲಿ, ವಡೆ ದೋಸೆ ಜೊತೆಗೆ ಮುದ್ದೆ, ಚಪಾತಿ, ಪೂರಿ ಊಟ ಕೂಡ ಸಿಗುತ್ತಿದೆ, ರಿಂಗ್‌ ರೋಡ್‌ನ‌ಲ್ಲಿ ಮಾಂಸಾಹಾರಿ ಹೋಟೆಲ್‌ ಮಾಡಿದ್ದಾರೆ.

ಮಾಮು ಹೆಸರು ಬಂದಿದ್ದು ಹೇಗೆ?:
ವೆಂಕಟೇಶ್‌ಶೆಟ್ರಾ 25 ವರ್ಷಗಳಿಂದಲೂ ಹೋಟೆಲ್‌ ನಡೆಸುತ್ತಿದ್ದರೂ ನಾಮಫ‌ಲಕ ಹಾಕಿರಲಿಲ್ಲ. ಅವರಿಗೆ ವಯಸ್ಸಾಗಿದ್ದ ಕಾರಣ ಜನ ಪ್ರೀತಿಯಿಂದ ಮಾಮು ಅಂತ ಕರೆಯುತ್ತಿದ್ದರು. ಅದೇ ಜನರ ಮನಸ್ಸಲ್ಲಿ ಉಳಿಯಿತು. ಈಗ ಮಾಮು ಇಡ್ಲಿ ಹೋಟೆಲ್‌ ಎಂದೇ ಗುರುತಿಸಲಾಗುತ್ತಿದೆ.

ಹೋಟೆಲ್‌ ವಿಳಾಸ:
ಹಾಸನ ನಗರದ ಕಸ್ತೂರ ಬಾ ರಸ್ತೆ, ತೆಲುಗರ ಬೀದಿಗೆ ಹೋಗಿ “ಮಾಮು ಹೋಟೆಲ್‌’ ಕೇಳಿದ್ರೆ ತೋರಿಸುತ್ತಾರೆ.

ಹೋಟೆಲ್‌ ಸಮಯ:
ಬೆಳಗ್ಗೆ 7ರಿಂದ ಮಧ್ಯಾಹ್ನ 1 ಗಂಟೆಯವರೆಗೆ, ವಾರದ ರಜೆ ಇಲ್ಲ.

ತಿಂಡಿ ಮಾತ್ರ:
ಹೋಟೆಲ್‌ನಲ್ಲಿ ಸಿಗೋದು ಮೂರೇ ತಿಂಡಿ. ಆದ್ರೂ, ಕಡ್ಲೆ ಚಟ್ನಿ, ತುಪ್ಪ ಜೊತೆ ಇಡ್ಲಿ ತಿನ್ನೊಂದು ಒಂದು ಹೊಸ ಅನುಭವ. (ಇಡ್ಲಿ ನಾಲ್ಕು) ದರ 30 ರೂ. ಇಡ್ಲಿಯನ್ನು ಹೊರತುಪಡಿಸಿದರೆ, ಸೆಟ್‌ ದೋಸೆ, ಹೈದ್ರಾಬಾದ್‌ ದೋಸೆ ಸಿಗುತ್ತೆ. ದರ 30 ರೂ..

– ಎನ್‌.ನಂಜುಂಡೇಗೌಡ/ಭೋಗೇಶ ಆರ್‌.ಮೇಲುಕುಂಟೆ

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-uv-fusion

UV Fusion: ಮಿತಿಯೊಳಗಿನ ಬದುಕು ನೆನಪಾದಾಗ

5-vitla

Vitla Palace: ಶತಮಾನಗಳ ಇತಿಹಾಸದ ವಿಟ್ಲ ಅರಮನೆ

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

4-uv-fusion

UV Fusion: ಬಿರು ಬೇಸಿಗೆಯ ಸ್ವಾಭಾವಿಕ ಚಪ್ಪರ ಈ ಹೊಂಗೆ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.