ಬಸ್ ದರ ಏರಿಕೆ ಇಲ್ಲ: ಸವದಿ
Team Udayavani, Sep 9, 2019, 3:05 AM IST
ಮೈಸೂರು: ತೈಲ ಬೆಲೆ ಹೆಚ್ಚಳದಿಂದಾಗಿ ಬಸ್ ದರ ಏರಿಸುವ ಕುರಿತ ಪ್ರಸ್ತಾವನೆ ನನ್ನ ಮುಂದಿದ್ದರೂ ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಉದ್ದೇಶವಿಲ್ಲ ಎಂದು ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಉದ್ದೇಶವಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಚಿಂತನೆ ಮಾಡುತ್ತೇನೆ ಎಂದರು.
ಪರಿಸರ ಸ್ನೇಹಿ ಹಾಗೂ ಇಂಧನ ಉಳಿತಾಯದ ಹಿನ್ನೆಲೆಯಲ್ಲಿ ಎಲೆಕ್ಟ್ರಿಕಲ್ ಬಸ್ಗಳನ್ನು ರಸ್ತೆಗಿಳಿಸುವ ಬಗ್ಗೆ ರಾಜ್ಯ ಸರ್ಕಾರ ಆಲೋಚನೆ ನಡೆಸಿದೆ. ಇದಕ್ಕೆ ಸಂಬಂಧಿಸಿದಂತೆ ಹೊರ ದೇಶಗಳಿಂದ ಪ್ರಸ್ತಾವನೆಗಳು ಬಂದಿವೆ. ಶೂನ್ಯ ಬಂಡವಾಳ ಹೂಡಿಕೆ ಮಾಡಿ ಶೇ.40:60ರ ಅನುಪಾತದಲ್ಲಿ ಆದಾಯವನ್ನು ನಮಗೆ ಕೊಡುತ್ತಾರೆ. ಬಸ್ಗಳನ್ನು ಅವರೇ ಸಂಪೂರ್ಣವಾಗಿ ನಿರ್ವಹಿಸುತ್ತಾರೆ. ಅದರ ಸಾಧಕ-ಬಾಧಕ ಕುರಿತು ಸಮಾಲೋಚಿಸಲಾಗುತ್ತಿದೆ ಎಂದರು.
ವಸತಿ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ದಸರಾಗೆ ಹೆಚ್ಚು ಬಸ್ ಕೇಳಿದ್ದು, ಅವಶ್ಯಕತೆ ಇರುವಷ್ಟು ಬಸ್ಗಳ ವ್ಯವಸ್ಥೆ ಮಾಡಲಾಗುವುದು ಎಂದರು. ಇದಕ್ಕೂ ಮೊದಲು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ಚಾಮುಂಡೇಶ್ವರಿಯ ದರ್ಶನ ಪಡೆದರು. ಬಳಿಕ, ನಂಜನಗೂಡು ತಾಲೂಕಿನ ಸುತ್ತೂರಿನ ಗದ್ದುಗೆಗೆ ಭೇಟಿ ನೀಡಿ, ಶ್ರೀ ಶಿವರಾತ್ರೇಶ್ವರ ದರ್ಶನ ಪಡೆದರು.
ರಾಜ್ಯದಲ್ಲಿ ಮತ್ತೆರಡು ಡಿಸಿಎಂ ಹುದ್ದೆ ಸೃಷ್ಟಿಸುವ ಕುರಿತು ನನಗೇನೂ ಗೊತ್ತಿಲ್ಲ. ಯಾರಿಗೆ, ಯಾವಾಗ ಡಿಸಿಎಂ ಹುದ್ದೆ ನೀಡಬೇಕು, ಎಷ್ಟು ಡಿಸಿಎಂ ಹುದ್ದೆ ಇರಬೇಕು ಎನ್ನುವುದು ಸಿಎಂಗೆ ಬಿಟ್ಟಿದ್ದು.
-ಲಕ್ಷ್ಮಣ ಸವದಿ, ಡಿಸಿಎಂ, ಸಾರಿಗೆ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !