ಮತ್ತೆ ಹದಗೆಟ್ಟ ಹೆದ್ದಾರಿ; ವಾಹನ ಸವಾರರು ಹೈರಾಣ


Team Udayavani, Sep 9, 2019, 5:32 AM IST

kundapura

ಕುಂದಾಪುರ: ಪುರಸಭೆ ವ್ಯಾಪ್ತಿಯ ಹೆದ್ದಾರಿಯ ಅನೇಕ ಕಡೆಗಳಲ್ಲಿ ಭಾರೀ ಮಳೆಯಿಂದಾಗಿ ಮತ್ತೆ ಬೃಹತ್‌ ಹೊಂಡ – ಗುಂಡಿಗಳು ಕಾಣಿಸಿಕೊಂಡಿದ್ದು, ವಾಹನ ಸವಾರರು ಹೈರಾಣಾಗಿ ಹೋಗಿದ್ದಾರೆ. ಸಂಚಾರಿ ನಿಯಮ ಉಲ್ಲಂಘನೆಯಡಿ ದಂಡವನ್ನು ಹೆಚ್ಚಿಸುವ ಸರಕಾರ ರಸ್ತೆ ದುರಸ್ತಿಗೆ ಯಾಕೆ ಮನಸ್ಸು ಮಾಡುತ್ತಿಲ್ಲ ಎನ್ನುವ ಆರೋಪವನ್ನು ಜನರು ಮಾಡುತ್ತಿದ್ದಾರೆ.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಅಲ್ಲಲ್ಲಿ ಹಾಕಲಾದ ತೇಪೆ ಎದ್ದು ಹೋಗಿದೆ. ಇದರಿಂದ ಈಗ ಹಿಂದಿಗಿಂತಲೂ ಹೆಚ್ಚು ಕಡೆಗಳಲ್ಲಿ ಹೆದ್ದಾರಿ ಮಧ್ಯೆಯೇ ಹೊಂಡ – ಗುಂಡಿಗಳಾಗಿವೆ. ಮಳೆ ಬಂದು, ನೀರೆಲ್ಲ ಈ ಹೊಂಡಗಳಲ್ಲಿ ನಿಂತಿದ್ದರೆ, ವಾಹನ ಸವಾರರಿಗೆ ಎಲ್ಲಿ ಹೊಂಡವಿದೆ, ಗುಂಡಿಗಳಿವೆ ಎಂದು ತಿಳಿಯದ ಸ್ಥಿತಿಯಿದೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರಂತೂ ನಿತ್ಯ ಈ ನರಕ ಯಾತನೆ ಅನುಭವಿಸುವಂತಾಗಿದೆ.

ಎಲ್ಲೆಲ್ಲಿ ಹೊಂಡ – ಗುಂಡಿ?

ಕುಂದಾಪುರದ ಹೃದಯ ಭಾಗವಾದ ಶಾಸ್ತ್ರಿ ಸರ್ಕಲ್ ಬಳಿ ಅತೀ ಹೆಚ್ಚು ಹೊಂಡ – ಗುಂಡಿಗಳಿವೆ. ಇಲ್ಲಿ ಮೇಲ್ಸೆತುವೆ ಕಾಮಗಾರಿ ಪೂರ್ಣಗೊಳ್ಳದ ಕಾರಣ ಸಂಚಾರಿ ವ್ಯವಸ್ಥೆಯೂ ಸುಗಮವಾಗಿಲ್ಲ. ಈಗ ರಸ್ತೆಯೂ ಹದಗೆಟ್ಟು ಹೋಗಿರುವುದರಿಂದ ಯಾವ ಕಡೆಯಿಂದ ವಾಹನ ಬರುತ್ತದೆ ಎಂದು ಆ ಕಡೆ – ಈ ಕಡೆ ನೋಡುವಷ್ಟರಲ್ಲಿ ವಾಹನ ರಸ್ತೆಯಲ್ಲಿರುವ ಗುಂಡಿಗೆ ಬೀಳುತ್ತದೆ. ವಿನಾಯಕ ಚಿತ್ರ ಮಂದಿರದ ಎದುರಿನ ಹೆದ್ದಾರಿಯಲ್ಲಂತೂ ವಾಹನ ಸವಾರರ ಪಾಡು ದೇವರಿಗೆ ಪ್ರೀತಿ. ಅಲ್ಲಲ್ಲಿ ಹೊಂಡ – ಗುಂಡಿ ಗಳಿಗೆ ಎದ್ದು – ಬಿದ್ದು ವಾಹನದಲ್ಲಿ ಸಂಚರಿ ಸುವ ದುಸ್ಥಿತಿ ಜನರದ್ದು. ಇನ್ನು ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿಯ ಹೆದ್ದಾರಿಯಲ್ಲಿ ಆಗಾಗ ತೇಪೆ ಹಾಕಿ, ರಸ್ತೆಯ ಗುಂಡಿಗಳನ್ನು ಮುಚ್ಚು ತ್ತಿದ್ದರೂ, ಮಳೆಗೆ ಮತ್ತೆ ಎದ್ದು ಹೋಗುತ್ತದೆ.

ಮಳೆಗಾಲದ ಬಳಿಕ ದುರಸ್ತಿ ಮಾಡಲಿ

ಮಳೆಗಾಲ ಆರಂಭವಾಗುವ ಹೊತ್ತಿಗೆ ಕಾಮಗಾರಿ ಆರಂಭಿಸುತ್ತಾರೆ. ಅದು ಮಳೆಗಾಲ ಮುಗಿಯುವುದರೊಳಗೆ ಎದ್ದು ಹೋಗುತ್ತದೆ. ಬೇಸಿಗೆಯಲ್ಲಿ ರಸ್ತೆ ಡಾಮರೀಕರಣ ಮಾಡಿದರೆ ಉತ್ತಮ. ಬಸ್ರೂರು ಮೂರು ಕೈ ಬಳಿ ಮಳೆಗಾಲ ಆರಂಭದಿಂದ ಈವರೆಗೆ ನೀರು ನಿಂತಿದೆ. ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ಇಲ್ಲಿಲ್ಲ. ಈ ಸಲವಾದರೂ ಮಳೆಗಾಲ ಮುಗಿದ ತತ್‌ಕ್ಷಣ ಕಾಮಗಾರಿ ಕೈಗೆತ್ತಿಕೊಳ್ಳಲಿ.
– ಇರ್ಫಾನ್‌,ವಾಹನ ಸವಾರ
ಇನ್ನು ಬಸ್ರೂರು ಮೂರು ಕೈಜಂಕ್ಷನ್‌ಗಿಂತ ಸ್ವಲ್ಪ ಮುಂದೆ ಸರ್ವಿಸ್‌ ರಸ್ತೆಯಲ್ಲಿಯೇ ನೀರು ನಿಂತಿದ್ದು, ಇದು ರಸ್ತೆಯೋ ಅಥವಾ ನೀರು ಹರಿದು ಹೋಗುವ ತೋಡು ಎನ್ನುವ ಸಂಶಯ ಜನರದ್ದು. ಇಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ವ್ಯವಸ್ಥೆಯೇ ಇಲ್ಲ. ಭಾರೀ ಮಳೆಯಿದ್ದಾಗ ಅಂತೂ ಈ ರಸ್ತೆಯಲ್ಲಿ ಸಂಚರಿಸುವುದೇ ಕಷ್ಟ. ಮಳೆ ಕಡಿಮೆ ಇದ್ದರೂ, ಇಲ್ಲಿ ನಿಂತ ನೀರು ಮಾತ್ರ ಕಡಿಮೆಯಾಗುವುದಿಲ್ಲ. ಈ ಬಗ್ಗೆ ಅಧಿಕಾರಿಗಳ ಸಭೆಯಲ್ಲಿ ಕುಂದಾಪುರದ ಸಹಾಯಕ ಆಯುಕ್ತರೇ ತತ್‌ಕ್ಷಣ ಪರಿಹರಿಸಲು ಕ್ರಮಕೈಗೊಳ್ಳಿ ಎಂದು ಸೂಚಿಸಿದರೂ, ಇನ್ನು ಇತ್ಯರ್ಥವಾಗಿಲ್ಲ.

ಟಾಪ್ ನ್ಯೂಸ್

1-adasdsd

Papua New Guinea; ಭಾರೀ ಭೂಕುಸಿತದಿಂದ 100 ಕ್ಕೂ ಹೆಚ್ಚು ಜನರು ಸಾವು: ವರದಿ

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

ಸ್ಟಾರ್ ವಾರ್, ಫ್ಯಾನ್ಸ್ ವಾರ್ ಮಾಮೂಲಿ… ಆದ್ರೆ ಕನ್ನಡ ಚಿತ್ರರಂಗ ಎಡವುತ್ತಿರುವುದೆಲ್ಲಿ?

ಸ್ಟಾರ್ ವಾರ್, ಫ್ಯಾನ್ಸ್ ವಾರ್ ಮಾಮೂಲಿ… ಆದ್ರೆ ಕನ್ನಡ ಚಿತ್ರರಂಗ ಎಡವುತ್ತಿರುವುದೆಲ್ಲಿ?

1-aaaaa

Mudigere; ಭೀಕರ ಅಪಘಾತದಲ್ಲಿ ಓಮ್ನಿ ನಜ್ಜುಗುಜ್ಜು: ನಾಲ್ವರು ಮೃತ್ಯು

Dinesh Karthik joins T20 World Cup commentary panel

T20 World Cup ಕಾಮೆಂಟರಿ ಪ್ಯಾನೆಲ್ ಸೇರಿದ ಡಿ.ಕೆ; ಇಲ್ಲಿದೆ ವೀಕ್ಷಕ ವಿವರಣೆಗಾರರ ಪಟ್ಟಿ

ಮೇ 25ಕ್ಕೆ ಮಂಗಳೂರಿಗೆ ಸಿಎಂ, ಸೇರಿದಂತೆ ಗಣ್ಯರ ಆಗಮನ… ವಾಹನ ಸಂಚಾರದಲ್ಲಿ ಬದಲಾವಣೆ

ಮೇ 25ಕ್ಕೆ ಮಂಗಳೂರಿಗೆ ಸಿಎಂ, ಸೇರಿದಂತೆ ಗಣ್ಯರ ಆಗಮನ… ವಾಹನ ಸಂಚಾರದಲ್ಲಿ ಬದಲಾವಣೆ

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು

Hubli; ಅಂಜಲಿ ನಿವಾಸದಲ್ಲಿ ಸಿಐಡಿ ತಂಡದಿಂದ ಸ್ಥಳ ಮಹಜರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi; ಯಕ್ಷರಂಗಕ್ಕೆ ಜಿವ ತುಂಬುವ ಮಟ್ಟು ಲಕ್ಷ್ಮಣ ಶೆಟ್ಟಿಗಾರರ ಕೈಮಗ್ಗದ ಸೀರೆ

Udupi; ಯಕ್ಷರಂಗಕ್ಕೆ ಜೀವ ತುಂಬುವ ಮಟ್ಟು ಲಕ್ಷ್ಮಣ ಶೆಟ್ಟಿಗಾರರ ಕೈಮಗ್ಗದ ಸೀರೆ

Shirva: ಸ್ನಾನಕ್ಕೆಂದು ಹೋದವನಿಗೆ ಸಿಡಿಲಾಘಾತ; ಕಾಲೇಜು ವಿದ್ಯಾರ್ಥಿ ಬಲಿ

Shirva: ಸ್ನಾನಕ್ಕೆಂದು ಹೋದವನಿಗೆ ಸಿಡಿಲಾಘಾತ; ಕಾಲೇಜು ವಿದ್ಯಾರ್ಥಿ ಬಲಿ

ಮೂಲ್ಕಿಗೆ ಇನ್ನೂ ಮಂಜೂರಾಗದ ಅಗ್ನಿಶಾಮಕ ಠಾಣೆ; ಪ್ರಸ್ತಾವನೆ ಹಂತದಲ್ಲೇ ಬಾಕಿ

ಮೂಲ್ಕಿಗೆ ಇನ್ನೂ ಮಂಜೂರಾಗದ ಅಗ್ನಿಶಾಮಕ ಠಾಣೆ; ಪ್ರಸ್ತಾವನೆ ಹಂತದಲ್ಲೇ ಬಾಕಿ

8

Fraud: ವಾಟ್ಸಾಪ್‌ ಲಿಂಕ್‌ಗೆ ಕ್ಲಿಕ್‌; ಬ್ಯಾಕ್‌ ಖಾತೆಯಿಂದ 82,200 ರೂಪಾಯಿ ಮಾಯ

1-wqewqewqe

Byndoor: ಗಾಳಿ- ಮಳೆಯಿಂದ 16ಕ್ಕೂ ಹೆಚ್ಚು ಕಡೆಗಳಲ್ಲಿ ಆಸ್ತಿಪಾಸ್ತಿ ನಷ್ಟ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-adasdsd

Papua New Guinea; ಭಾರೀ ಭೂಕುಸಿತದಿಂದ 100 ಕ್ಕೂ ಹೆಚ್ಚು ಜನರು ಸಾವು: ವರದಿ

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

Watch Video:‌ ಕೇದಾರದಲ್ಲಿ ಲ್ಯಾಂಡ್‌ ಆಗುತ್ತಿದ್ದ ವೇಳೆ ನೆಲಕ್ಕಪ್ಪಳಿಸಿದ ಹೆಲಿಕ್ಯಾಪ್ಟರ್…

accident

Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್

ಸ್ಟಾರ್ ವಾರ್, ಫ್ಯಾನ್ಸ್ ವಾರ್ ಮಾಮೂಲಿ… ಆದ್ರೆ ಕನ್ನಡ ಚಿತ್ರರಂಗ ಎಡವುತ್ತಿರುವುದೆಲ್ಲಿ?

ಸ್ಟಾರ್ ವಾರ್, ಫ್ಯಾನ್ಸ್ ವಾರ್ ಮಾಮೂಲಿ… ಆದ್ರೆ ಕನ್ನಡ ಚಿತ್ರರಂಗ ಎಡವುತ್ತಿರುವುದೆಲ್ಲಿ?

1-aaaaa

Mudigere; ಭೀಕರ ಅಪಘಾತದಲ್ಲಿ ಓಮ್ನಿ ನಜ್ಜುಗುಜ್ಜು: ನಾಲ್ವರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.