ಕಿದು ಕೇಂದ್ರದ ಬೆನ್ನು ಬಿಟ್ಟಿಲ್ಲ ಸ್ಥಳಾಂತರ ಭೂತ!

ವಿದ್ಯುತ್‌ ಕಡಿತಗೊಳಿಸುವಂತೆ ಮೆಸ್ಕಾಂಗೆ ಅರಣ್ಯ ಇಲಾಖೆ ಪತ್ರ

Team Udayavani, Sep 9, 2019, 5:44 AM IST

0809SUB3C

ಸುಬ್ರಹ್ಮಣ್ಯ: ಕಿದುವಿನ ಅಂತಾರಾಷ್ಟ್ರೀಯ ತೆಂಗು ಅಭಿವೃದ್ಧಿ ಕೇಂದ್ರದ ಭವಿಷ್ಯ ಮತ್ತೆ ತೂಗುಯ್ಯಾ ಲೆಯಲ್ಲಿದೆ. ಇಲ್ಲಿಗೆ ವಿದ್ಯುತ್‌ ಸಂಪರ್ಕ ಸ್ಥಗಿತಗೊಳಿಸುವಂತೆ ಕೋರಿ ಮೆಸ್ಕಾಂಗೆ ಅರಣ್ಯ ಇಲಾಖೆ ಪತ್ರ ನೀಡಿದ್ದು, ಸಂಶೋಧನ ಕೇಂದ್ರಕ್ಕೆ ಮೆಸ್ಕಾಂನ ಸೂಚನ ಪತ್ರ ಸೆ. 6ರಂದು ತಲುಪಿದೆ.

ಮಂಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಯಿಂದ ಮೆಸ್ಕಾಂ ಪುತ್ತೂರು ವಿಭಾಗಕ್ಕೆ ಆ. 31ರಂದು ಪತ್ರ ಬರೆದಿದ್ದು, ಕಿದು ಕೇಂದ್ರವು ಲೀಸ್‌ ಪಡೆದ ಭೂಮಿಯ ಸಂಬಂಧ ಅರಣ್ಯ ಇಲಾಖೆಗೆ ಪಾವತಿಸಲು ಬಾಕಿ ಇರಿಸಿರುವ ಮೊತ್ತವನ್ನು ಉಲ್ಲೇಖೀಸಲಾಗಿದೆ. ಈ ಸಂಬಂಧ ಅದು ಕೇಂದ್ರದ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸುವಂತೆ ಮೆಸ್ಕಾಂಗೆ ಸೂಚಿಸಿದೆ.

1972ರಲ್ಲಿ ಕಿದು ರಕ್ಷಿತಾರಣ್ಯದಲ್ಲಿ 300 ಎಕರೆ ಭೂಮಿಯನ್ನು ಅರಣ್ಯ ಇಲಾಖೆಯಿಂದ 30 ವರ್ಷಗಳ ಅವಧಿಗೆ ಲೀಸಿಗೆ ಪಡೆದು ಸಂಶೋಧನ ಉಪಕೇಂದ್ರವನ್ನು ಸ್ಥಾಪಿಸಲಾಗಿತ್ತು. ಲೀಸ್‌ ಅವಧಿ 2000ನೇ ಇಸವಿಗೆ ಮುಗಿದಿತ್ತು. ಈ ಭೂಮಿಯನ್ನು ಮರಳಿ ಪಡೆಯಬೇಕು ಎಂಬ ಸುಪ್ರೀಂ ಕೋರ್ಟ್‌ ಆದೇಶದಂತೆ ಅರಣ್ಯ ಇಲಾಖೆ ಈ ಹಿಂದೆ ನೋಟಿಸ್‌ ಜಾರಿಗೊಳಿಸಿತ್ತು. ಲೀಸ್‌ ಅವಧಿ ಮುಗಿದಿದ್ದರೂ ನವೀಕರಿಸದೆ, ಮೊತ್ತವನ್ನೂ ಬಾಕಿ ಇರಿಸಿರುವುದರಿಂದ ಅರಣ್ಯ ಭೂಮಿ ಯನ್ನು ಹಿಂಪಡೆಯುವುದಾಗಿ ಅರಣ್ಯ ಇಲಾಖೆ ತಿಳಿಸಿತ್ತು. ಜಾಗ ಮರಳಿಸುವುದು ಅಥವಾ ಬದಲಾಗಿ 300 ಎಕರೆ ಖಾಲಿ ಜಾಗ ದಲ್ಲಿ ಅರಣ್ಯ ಬೆಳೆಸಲು ತಗಲುವ 12 ಕೊ.ರೂ. ಭರಿಸಿ ಮತ್ತೆ 30 ವರ್ಷಗಳ ಅವಧಿಗೆ ಲೀಸ್‌ ಮುಂದುವರಿಸಲು ಅವಕಾಶ ಕಲ್ಪಿಸಿತ್ತು.

ಎಚ್ಚರಿಸಿದ್ದ ‘ಉದಯವಾಣಿ’ ವರದಿ
ಲೀಸಿನ ಅವಧಿ ಮುಗಿದಿದ್ದರೂ ಸಿಪಿಸಿಆರ್‌ಐಯ ಹಿರಿಯ ಅಧಿಕಾರಿಗಳು ಭೂಮಿ ನವೀಕರಣಕ್ಕೆ ಆಸಕ್ತಿ ತೋರದೆ, ಆಂಧ್ರಕ್ಕೆ ಸ್ಥಳಾಂತರಿಸುವ ಹುನ್ನಾರ ನಡೆಸಿದ್ದ ಬಗ್ಗೆ ‘ಉದಯವಾಣಿ’ ವರದಿ ಪ್ರಕಟಿಸಿತ್ತು. ಬಳಿಕ ಸ್ಥಳೀಯರು, ಕೃಷಿಕರು ಎಚ್ಚೆತ್ತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಮೇಲೆ ಒತ್ತಡ ತಂದಿದ್ದರು. ಕೇಂದ್ರ ಸರಕಾರದ ಮಟ್ಟದಲ್ಲೂ ಕೇಂದ್ರ ಸ್ಥಳಾಂತರಿಸದಂತೆ ಪ್ರಯತ್ನಗಳು ನಡೆದಿದ್ದವು.

ಆದರೂ ಮುಚ್ಚುಗಡೆ ಆತಂಕ ದೂರವಾಗಿಲ್ಲ. ಲೀಸ್‌ ನವೀಕರಣ, ಶುಲ್ಕ ಭರಿಸುವ ಪ್ರಕ್ರಿಯೆಗಳು ನನೆಗುದಿಗೆ ಬಿದ್ದಿವೆ. ಸರಕಾರದ ಮಟ್ಟದಲ್ಲಿ ನಿರೀಕ್ಷಿತ ಬೆಳವಣಿಗೆ ನಡೆಯದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಮೇಲೆ ಒತ್ತಡ ಹೆಚ್ಚುತ್ತಿದೆ. ಹೀಗಾಗಿ ಅದು ಒಂದೊಂದೇ ಅಸ್ತ್ರಗಳನ್ನು ಪ್ರಯೋಗಿಸುತ್ತಿದೆ.

ಮಾಹಿತಿ ನೀಡಿದ್ದೇವಷ್ಟೆ
ಅರಣ್ಯ ಇಲಾಖೆಯಿಂದ ಪತ್ರ ಬಂದದ್ದು ನಿಜ. ಅದರ ಮಾಹಿತಿಯನ್ನು ಕೇಂದ್ರಕ್ಕೆ ತಲುಪಿಸಿದ್ದೇವೆ.– ನರಸಿಂಹ, ಇ.ಇ., ಮೆಸ್ಕಾಂ ಪುತ್ತೂರು ಉಪ ವಿಭಾಗ

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.