ನೀರಿಲ್ಲದೇ ಬತ್ತಿದ ಗದ್ದೆ


Team Udayavani, Sep 9, 2019, 11:23 AM IST

kopala-tdy-2

ಕಾರಟಗಿ: ಮರ್ಲಾನಹಳ್ಳಿ ಗ್ರಾಮದ ಕಾಲುವೆ ವ್ಯಾಪ್ತಿಯಲ್ಲಿ ಸಮರ್ಪಕ ನೀರಿಲ್ಲದೇ ನಾಟಿ ಮಾಡಿದ ಭತ್ತದ ಸಸಿಗಳು ಒಣಗಿ ಗದ್ದೆ ಬಿರುಕು ಬಿಟ್ಟಿರುವುದು.

ಕಾರಟಗಿ: ತಾಲೂಕಿನ ರೈತರು ವರುಣದೇವ ಕೃಪೆಗಾಗಿ ಕಾಯುತ್ತಿದ್ದಾರೆ. ಮುಂಗಾರು ಅಂತಿಮ ಹಂತಕ್ಕೆ ಬಂದರೂ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಉತ್ತಮ ಮಳೆಯಾಗದಿರುವುದು ರೈತರನ್ನು ಕಂಗಾಲಾಗಿಸಿದೆ. ತುಂಗಭದ್ರಾ ಜಲಾಶಯ ಭರ್ತಿಯಾಗಿ ಎಡದಂಡೆ ನಾಲೆಗೆ ನೀರು ಹರಿಸಿದರೂ ವಿತರಣಾ ನಾಲೆಯ ಉಪ ಕಾಲುವೆಗಳಿಗೆ ಇದುವರೆಗೂ ತಲುಪದ ಕಾರಣ ರೈತರು ಭತ್ತದ ಸಸಿ ನಾಟಿ ಮಾಡದೇ, ಇನ್ನೂ ಕೆಲ ರೈತರು ನಾಟಿ ಮಾಡಿ ನೀರಿಲ್ಲದೆ ಕೈಕಟ್ಟಿ ಕುಳಿತಿದ್ದಾರೆ.

ಸಮೀಪದ ಮರ್ಲಾನಹಳ್ಳಿ ಗ್ರಾಮದ ವ್ಯಾಪ್ತಿಯ 31/3/2 ಕೆನಾಲ್ಗೆ ಸಂಬಂಧಿಸಿದ ಹೊಲ ಗದ್ದೆಗಳಿಗೆ ಉಪ ಕಾಲುವೆಗಳಿಗೆ ನೀರು ಬಿಟ್ಟರೂ ಎಲ್ಲ ರೈತರಿಗೆ ಒಂದೆ ಬಾರಿ ಗದ್ದೆಗಳಿಗೆ ನೀರು ಹರಿಸಲು ಆಗುವುದಿಲ್ಲ. ರೈತರಿಗೆ ಹಂತ ಹಂತವಾಗಿ ಪ್ರಕಾರ ನೀರು ಬಿಡಲಾಗುತ್ತಿದ್ದು, ಇದರಿಂದಾಗಿ ಒಮ್ಮೆ ಗದ್ದೆಗಳಿಗೆ ನೀರು ಹರಿಸಿದರೆ ಮುಂದಿನ ಸರದಿ 40 ದಿನಕ್ಕೆ ಬರುತ್ತದೆ. ಭತ್ತದ ಸಸಿ ನಾಟಿ ಮಾಡಿದ್ದ ಗದ್ದೆ ಒಣಗಿ ಬಿರುಕು ಬಿಟ್ಟಿದೆ. ಹೀಗಾದರೆ ಭತ್ತ ಬೆಳೆಯುವುದಾದರು ಹೇಗೆ? ಮಳೆ ಬರುವ ನೀರಿಕ್ಷೆಯಲ್ಲಿ ಭತ್ತ ನಾಟಿ ಮಾಡಿದ್ದೇವೆ. ಇತ್ತ ಮಳೆಯೂ ಇಲ್ಲ. ಕಾಲುವೆಗೆ ಸಮರ್ಪಕವಾಗಿ ನೀರು ಇಲ್ಲದೇ ತೀವ್ರ ಸಂಕಷ್ಟ ಎದುರಿಸುತ್ತಿದ್ದೇವೆ ಎಂದು ರೈತರು ಅಳಲು ತೋಡಿಕೊಂಡರು.

31/3/2. ಕೆನಾಲ್ ವ್ಯಾಪ್ತಿಗೆ ನೀರಾವರಿ ಇಲಾಖೆಯ ಲೆಕ್ಕದ ಪ್ರಕಾರ 2200 ಎಕರೆ ಭೂಮಿಯಿದೆ. ಆದರೆ ಈ ಕಾಲುವೆ ವ್ಯಾಪ್ತಿಯಲ್ಲಿ ಮೂರು ಸಾವಿರಕ್ಕೂ ಹೆಚ್ಚು ಎಕರೆಯಲ್ಲಿ ಭತ್ತ ನಾಟಿ ಮಾಡಲಾಗಿದೆ. ಹೀಗಾದರೆ ಯಾರಿಗೆ ಸರದಿ ಪ್ರಕಾರ ಪ್ರಕಾರ ಸರಿಯಾಗಿ ನೀರು ಸಿಗುತ್ತದೆ, ನೀರಾವರಿ ಇಲಾಖೆ ಅಧಿಕಾರಿಗಳು ರೈತರ ಕಷ್ಟವನ್ನು ಗಣನೆಗೆ ತೆಗೆದುಕೊಳ್ಳುತ್ತಿಲ್ಲ. ಇದರಿಂದ ರೈತರು ನೀರಿಗಾಗಿ ಪರದಾಡುವ ಸ್ಥಿತಿ ಬಂದಿದೆ. ಕಾಲುವೆ ಮೇಲ್ಭಾಗದಲ್ಲಿ ಬಲಾಡ್ಯ ರೈತರು ತಮ್ಮಿಷ್ಟದಂತೆ ಕಾಲುವೆ ನೀರು ಬಳಸಿಕೊಂಡರು ನೀರಾವರಿ ಇಲಾಖೆ ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ. ಇದರಿಂದಾಗಿ ಕೆಳಭಾಗದ ರೈತರು ತೊಂದರೆ ಅನುಭವಿಸುವುದು ಸಾಮಾನ್ಯವಾಗಿದೆ ಎನ್ನುತ್ತಾರೆ ರೈತರು.

ಮಳೆಗಾಗಿ ತಾಲೂಕು ವ್ಯಾಪ್ತಿಯ ಗ್ರಾಮಗಳ ರೈತರು ಕಂಡ ಕಂಡ ದೇವರಿಗೆ ಪ್ರಾರ್ಥನೆ, ಕಪ್ಪೆ ಮದುವೆ, ಕತ್ತೆ ಮದುವೆ, ಸಪ್ತಭಜನೆ ಮಾಡಿದರೂ ವರುಣ ದೇವ ಕೃಪೆ ತೋರುತ್ತಿಲ್ಲ. ಇನ್ನು ಭತ್ತದ ಬೆಳೆ ಕೈಸೇರುವುದು ಇನ್ನೆಲ್ಲಿ ಎಂದು ರೈತ ಸುಬ್ಟಾರಡ್ಡಿ ನಿರಾಸೆಯಿಂದ ಹೇಳುತ್ತಾರೆ.

ತುಂಗಭದ್ರಾ ಎಡದಂಡೆ ನಾಲೆಯ ವ್ಯಾಪ್ತಿ ರೈತರು ಪ್ರತಿಭಾರಿ ಭತ್ತ ಬೆಳೆಯಲು ಹರಸಾಹಸ ಪಡಲೇಬೇಕಾದ ಅನಿವಾರ್ಯತೆ ಉದ್ಭವಿಸಿದೆ. ಕೆಲವೊಮ್ಮೆ ನೀರು ಬಾರದೆ ಮಳೆಯೂ ಬಾರದೇ ಸಂಕಷ್ಟಕ್ಕೆ ಸಿಲುಕುತ್ತಾರೆ. ಕೆಲವೊಮ್ಮೆ ಅಕಾಲಿಕ ಮಳೆ ಬಂದು ಬೆಳೆದ ಭತ್ತದ ಬೆಳೆ ನಾಶವಾಗುತ್ತದೆ. ಇನ್ನು ಕೆಲವೊಮ್ಮೆ ಭತ್ತದ ಬೆಳೆ ಕಟಾವಿಗೆ ಬಂದ ಸಮಯದಲ್ಲಿ ಕ್ರಿಮಿಕೀಟಗಳ ಹಾವಳಿಗೆ ಬೆಳೆ ನಾಶವಾಗುತ್ತದೆ. ಹೀಗೆ ಹಲವಾರು ಸಮಸ್ಯೆಗಳಿಂದ ರೈತರು ನಲುಗಿ ಹೋಗಿದ್ದಾರೆ. ನೀರಾವರಿ ಇಲಾಖೆ 31/3/2 ಕಾಲುವೆ ವ್ಯಾಪ್ತಿಯ ಭೂಮಿಗಳಿಗೆ ಹೆಚ್ಚಿನ ನೀರು ಪೂರೈಕೆಗೆ ಮುಂದಾಬೇಕೆಂಬುದು ರೈತರ ಒತ್ತಾಯವಾಗಿದೆ.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.