ಮೇರಿ ಮಾತೆ ಮಹೋತ್ಸವ

•ಮೆರವಣಿಗೆಯಲ್ಲಿ ಸಹಸ್ರಾರು ಜನ ಭಾಗಿ •ಕೇಶ ಮುಂಡನೆಗೆ ಸಾಲುಗಟ್ಟಿ ನಿಂತಿದ್ದ ಭಕ್ತರು

Team Udayavani, Sep 9, 2019, 11:50 AM IST

9-Sepctember-4

ಹರಿಹರ: ಪುಷ್ಪಾಲಂಕೃತ ತೇರಿನೊಳಗೆ ಮೇರಿ ಮಾತೆ ಮೂರ್ತಿಯನ್ನಿಟ್ಟು ಮೆರವಣಿಗೆ ನಡೆಸಲಾಯಿತು.

ಹರಿಹರ: ಇಲ್ಲಿನ ಆರೋಗ್ಯಮಾತೆ ಚರ್ಚ್‌ನಲ್ಲಿ ಭಾನುವಾರ ವಿಜೃಂಭಣೆಯಿಂದ ನಡೆದ ಮೇರಿ ಮಾತೆ ಮಹೋತ್ಸವದಲ್ಲಿ ರಾಜ್ಯದ ವಿವಿಧೆಡೆಯಿಂದ ಆಗಮಿಸಿದ್ದ ಸಾವಿರಾರು ಜನರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು.

ಮಹಾದಿನವಾದ ಭಾನುವಾರ ನಸುಕಿನಿಂದಲೇ ಆರಂಭವಾದ ಪೂಜಾ ವಿಧಿಗಳಲ್ಲಿ ಬೆಳ್ತಂಗಡಿಯ ಭದ್ರಾವತಿಯ ಧರ್ಮಾಧ್ಯಕ್ಷ ಡಾ| ಜೋಸೆಫ್‌ ಅರುಮಚಾಡತ್‌ ನೇತೃತ್ವದಲ್ಲಿ ಕನ್ನಡ, ತೆಲುಗು, ಮಲಯಾಳಂ, ಬೆಂಗಳೂರು ಸಂತಪೇತ್ರರ ಗುರು ವಿದ್ಯಾಮಂದಿರದ ಡಾ| ರಾಯಪ್ಪನ್‌ ಇಂಗ್ಲಿಷ್‌ ಭಾಷೆಯಲ್ಲಿ, ಬೆಳಗಾವಿ ಧರ್ಮಾಧ್ಯಕ್ಷ ಫಾ. ಡಾ|ಡೆರಿಕ್‌ ಫೆರ್ನಾಂಡಿಸ್‌ ಕೊಂಕಣಿಯಲ್ಲಿ ಬಲಿ ಪೂಜೆ ನಡೆಸಿದರು.

ಮಧ್ಯಾಹ್ನ 11ಕ್ಕೆ ಪುರಪ್ರವೇಶ ಮಾಡಿದ ಶಿವಮೊಗ್ಗ ಧರ್ಮಾಧ್ಯಕ್ಷ ಡಾ| ಪ್ರಾನ್ಸಿಸ್‌ ಸೆರಾವೋ ಅವರನ್ನು ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆಯಲ್ಲಿ ದೇವಾಲಯಕ್ಕೆ ಕರೆತರಲಾಯಿತು. ಮಧ್ಯಾಹ್ನ 11-30ಕ್ಕೆ ಕನ್ನಡದಲ್ಲಿ ಹಬ್ಬದ ಸಹಬಲಿಪೂಜೆ, 2 ಘಂಟೆಗೆ ಪರಮ ಪ್ರಸಾದದ ವಿಶೇಷ ಆರಾಧನೆ ನೆರವೇರಿತು. ಚರ್ಚ್‌ನ ಫಾ. ಡಾ| ಅಂತೋನಿ ಪೀಟರ್‌ ಮತ್ತಿತರೆ ಗಣ್ಯರು ಪಾಲ್ಗೊಂಡಿದ್ದರು.

ಭಕ್ತಿ, ಸಡಗರದ ರಥೋತ್ಸವ: ಸಂಜೆ 5-30ಕ್ಕೆ ಪುಷ್ಪಾಲಾಂಕೃತ ತೇರಿನಲ್ಲಿ ಆರೋಗ್ಯ ಮಾತೆಯ ಮೂರ್ತಿಯನ್ನಿಟ್ಟು ನಗರದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆ ಮತ್ತೆ ಆರೋಗ್ಯ ಮಾತೆ ದೇವಾಲಯಕ್ಕೆ ಮರಳಿತು. ಮೆರವಣಿಗೆಯಲ್ಲಿ ಸಹಸ್ರಾರು ಜನರು ಭಕ್ತಿ, ಸಡಗರದಿಂದ ಪಾಲ್ಗೊಂಡಿದ್ದರು. ಮೆರವಣಿಗೆಯುದ್ದಕ್ಕೂ ಜಪಸರ, ನವೇನ ಪ್ರಾರ್ಥನೆ, ಪುಷ್ಪಾರ್ಚನೆ, ಪ್ರಬೋಧನೆ ಮಾಡುತ್ತಾ ಜನರು ಭಾವಪರವಶರಾಗಿ ಸಾಗುತ್ತಿದ್ದ ದೃಶ್ಯ ಕಂಡುಬಂತು.

ಬೆಳಿಗ್ಗೆಯಿಂದಲೆ ಚರ್ಚ್‌ನ ಸಮೀಪ ಜನರು ತಮ್ಮ ಹರಕೆಯಂತೆ ಕೇಶ ಮುಂಡನೆಗಾಗಿ ಜನ ಸಾಲುಗಟ್ಟಿ ನಿಂತಿದ್ದರು. ಪಾಪ ನಿವೇದನೆಗೆಂದು ಹಲವರು ಹಿರಿಯ ಗುರುಗಳಿಗೆ ಭಕ್ತರು ಮುಗಿಬೀಳುತ್ತಿದ್ದರು. ರೋಗಿಗಳಿಗೋಸ್ಕರ ಪತ್ಯೇಕ ಪ್ರಾರ್ಥನೆ ನಡೆಯಿತು. ದೂರದ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡಿ ಅಲ್ಲಿಂದಲೇ ಉದ್ದನೆಯ (ದೀಡ್‌) ನಮಸ್ಕಾರ ಹಾಕುತ್ತಾ ಚರ್ಚ್‌ಗೆ ಸಾಗುತ್ತಿದ್ದ ದೃಶ್ಯ ವಿಶೇಷವಾಗಿತ್ತು.

ಹರಿಹರ ಮಾತೆ ಸಮಾಧಾನದ ರಾಣಿ, ಸಂಧಾನದ ಮುಕುಟಮಣಿ ಎಂಬ ಧ್ಯೇಯ ವಾಕ್ಯದಡಿ ಅ.30 ರಿಂದ ಹಮ್ಮಿಕೊಂಡಿದ್ದ ಪ್ರಸಕ್ತ ಮಹೋತ್ಸವದಲ್ಲಿ ಮೈಸೂರು ಧರ್ಮಕ್ಷೇತ್ರದ ಫಾ.ಡಾ| ಆರೋಗ್ಯ ಸ್ವಾಮಿ, ಬೆಂಗಳೂರಿನ ಧರ್ಮಾಧ್ಯಕ್ಷ ಫಾ.ಡಾ| ಪೀಟರ್‌ ಪೌಲ್ ಸಲ್ಡಾನ್‌ ಹಾಗೂ ಇತರೆ ಧರ್ಮಗುರುಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.