ಶೋಷಣೆಮುಕ್ತ ಸಮಾಜಕ್ಕೆ ಕಾನೂನು ಅಗತ್ಯ

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಇವೆ ಸಮಾನ ಹಕ್ಕುಗಳು•ಸಂಚಾರಿ ನಿಯಮ ಪಾಲಿಸಿ: ದೇವೇಂದ್ರ

Team Udayavani, Sep 9, 2019, 3:03 PM IST

9-Sepctember-18

ನಾಯಕನಹಟ್ಟಿ: ಮಲ್ಲೂರಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಚಳ್ಳಕೆರೆ ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್‌ ಮಾತನಾಡಿದರು.

ನಾಯಕನಹಟ್ಟಿ: ಶೋಷಣೆಮುಕ್ತ ಸಮಾಜಕ್ಕೆ ಸಾಮಾನ್ಯ ಕಾನೂನುಗಳು ಅಗತ್ಯ ಎಂದು ಚಳ್ಳಕೆರೆ ಹಿರಿಯ ಸಿವಿಲ್ ನ್ಯಾಯಾಧೀಶ ದೇವೇಂದ್ರ ಪಂಡಿತ್‌ ಹೇಳಿದರು.

ಮಲ್ಲೂರಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ರಥ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಎಲ್ಲ ಜನರು ಸಾಮಾನ್ಯ ಕಾನೂನುಗಳ ಬಗ್ಗೆ ಅರಿವು ಹೊಂದಿರಬೇಕು. ಸಂವಿಧಾನದಲ್ಲಿ ಹಕ್ಕುಗಳ ಜತೆ ಕರ್ತವ್ಯಗಳನ್ನು ನೀಡಲಾಗಿದೆ. ಎಲ್ಲರಿಗೂ ಕಾನೂನು ರೀತಿಯ ಹಕ್ಕುಗಳನ್ನು ನೀಡಲಾಗಿದೆ. ಆದರೆ ಇವುಗಳನ್ನು ಪಾಲಿಸಬೇಕಾಗಿರುವುದು ಎಲ್ಲರ ಕರ್ತವ್ಯವಾಗಿದೆ. ವ್ಯಕ್ತಿಗಳಲ್ಲಿರುವ ಅಮಾಯಕತೆ, ಅನಕ್ಷರತೆ ಕಂಡುಕೊಂಡ ವ್ಯಕ್ತಿಗಳು ಮೋಸ ಮಾಡುವ ಸಾಧ್ಯತೆ ಹೆಚ್ಚು. ದೈನಂದಿನ ಜೀವನದಲ್ಲಿ ಸಣ್ಣಪುಟ್ಟ ಕಾನೂನುಗಳ ಅರಿವು ಅಗತ್ಯವಾಗಿದೆ. ಬಾಲ್ಯ ವಿವಾಹದ ವಯಸ್ಸು, ರಸ್ತೆ ಸಂಚಾರ ನಿಯಮಗಳು, ವರದಕ್ಷಿಣೆ ಕಾನೂನುಗಳು, ಆಸ್ತಿ ಸ್ವತ್ತಿನ ಹಕ್ಕುಗಳು ಸೇರಿದಂತೆ ಹಲವು ವಿಷಯಗಳಿಗೆ ಕಠಿಣ ಕಾನೂನುಗಳಿವೆ. ಇವುಗಳನ್ನು ಬಗ್ಗೆ ಸ್ಪಷ್ಟ ಅರಿವನ್ನು ಹೊಂದಿರಬೇಕು. ಪ್ರಾಥಮಿಕ ಹಂತದ ಕಾನೂನುಗಳ ಮಾಹಿತಿ ಹೊಂದಿದ್ದರೆ ಶೋಷಣೆ ಕಡಿಮೆ ಮಾಡಲು ಸಾಧ್ಯವಿದೆ ಎಂದು ಹೇಳಿದರು.

ವಕೀಲ ಸಂಘದ ತಾಲೂಕು ಅಧ್ಯಕ್ಷ ಕೆ.ಎಂ. ನಾಗರಾಜ್‌ ಮಾತನಾಡಿ, ಸುವ್ಯವಸ್ಥಿತ ಸಮಾಜ ನಿರ್ಮಾಣಕ್ಕೆ ಕಾನೂನು ಬದ್ಧ ವ್ಯವಸ್ಥೆ ಅಗತ್ಯವಾಗಿದೆ. ಎಲ್ಲ ಜನರು ಎಲ್ಲ ಕಾನೂನುಗಳನ್ನು ಅರಿಯಬೇಕಾಗಿಲ್ಲ. ಆದರೆ ಸಾಮಾನ್ಯವಾದ ಹಾಗೂ ಕನಿಷ್ಟ ನಿಯಮಗಳ ಅರಿವು ಅಗತ್ಯ. ಕಾನೂನು ದೊಡ್ಡ ರೀತಿಯ ಪುಸ್ತಕವಲ್ಲ. ಇದು ಸಾಮಾನ್ಯ ಜ್ಞಾನವಾಗಿದೆ. ಇನ್ನೊಬ್ಬರಿಗೆ ತೊಂದರೆಯಾಗದಂತೆ ನಮ್ಮ ಬದುಕು ಸಾಗಿಸಬೇಕು. ಸಾಮಾನ್ಯ ಜ್ಞಾನದ ಅಂಶಗಳನ್ನು ಸೇರಿಸಿ ಕಾನೂನು ಚೌಕಟ್ಟು ನೀಡಲಾಗಿದೆ. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಮನಾದ ಹಕ್ಕುಗಳಿವೆ. ಇನ್ನೊಬ್ಬರ ಹಕ್ಕುಗಳನ್ನು ಕಸಿದುಕೊಳ್ಳುವುದು ಕಾನೂನಿನ ಉಲ್ಲಂಘನೆಯಾಗುತ್ತದೆ. ಶಾಂತಿ, ಸಮಾಧಾನದ ಜೀವನಕ್ಕೆ ಕಾನೂನುಗಳು ಅಗತ್ಯ. ಅವುಗಳನ್ನು ಗೌರವಿಸುವ ಜವಾಬ್ದಾರಿಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ವಕೀಲ ಟಿ.ಎಸ್‌.ನಾಗರಾಜ್‌ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಮಾತನಾಡಿ, ಬಾಲ್ಯವಿವಾಹ ಅಪರಾಧವಾಗಿದೆ. ಇದಕ್ಕೆ ಮದುವೆ ಮಾಡಿದ ಪುರೋಹಿತ, ಪೋಷಕರು ಹೊಣೆಯಾಗುತ್ತಾರೆ. ಬಾಲ್ಯವಿವಾಹ ಸಮಾಜದಲ್ಲಿ ಕೆಟ್ಟ ಸಂಪ್ರದಾಯವಾಗಿದೆ. 1940ರಿಂದಲೇ ಇಂತಹ ವಿವಾಹವನ್ನು ತಡೆಗಟ್ಟಲು ಕಾಯ್ದೆ ರೂಪಿಸಲಾಗಿದೆ. ಇತ್ತೀಚೆಗೆ ಈ ಕಾನೂನನ್ನು ಬಿಗಿಗೊಳಿಸಲಾಗಿದೆ. 18 ವರ್ಷಕ್ಕಿಂತ ಕಡಿಮೆ ಇರುವ ಯುವತಿ, 21ವರ್ಷಕ್ಕಿಂತ ಕಡಿಮೆ ಇರುವ ಯುವಕನ ನಡುವೆ ನಡೆಯುವ ವಿವಾಹ ಬಾಲ್ಯವಿವಾಹವಾಗಿದೆ. ಗ್ರಾಪಂ ಅಧ್ಯಕ್ಷ ಎಂ.ಸಿ.ರಾಜಣ್ಣ, ಉಪಾಧ್ಯಕ್ಷೆ ಮಾರಕ್ಕ, ಸರಕಾರಿ ಅಭಿಯೋಜಕ ಜೆ.ಲಿಂಗೇಶ್ವರ, ವಕೀಲರ ಸಂಘದ ಉಪಾಧ್ಯಕ್ಷ ಡಿ.ಬಿ.ಬೋರಯ್ಯ, ಪಿಡಿಒ ಎಚ್.ಯರ್ರಿಸ್ವಾಮಿ, ಮುಖಂಡರಾದ ಕಾಟಯ್ಯ, ಬೋಸಯ್ಯ, ರಾಜಣ್ಣ, ತಮ್ಮಣ್ಣ ನಾಗೇಶ್‌, ಬೊಮ್ಮಯ್ಯ ಹಾಜರಿದ್ದರು.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.