ಪ್ರೇಮ ಪರೀಕ್ಷೆಯಲ್ಲಿ ಫೇಲ್‌ ಆಗಲಾರೆ…


Team Udayavani, Sep 10, 2019, 5:00 AM IST

y-9

ಈ ವಿಚಿತ್ರ ಚಡಪಡಿಕೆಗೆ ಕಚಗುಳಿ ಎನ್ನಬೇಕೋ, ಕಿರುಕುಳ ಎನ್ನಬೇಕೋ ಅರ್ಥವಾಗುತ್ತಿಲ್ಲ. ಈ ‘ಕಾಯುವಿಕೆ’ಗೂ ಒಂದು ಧೈರ್ಯ ಬೇಕು. ಕಾಯಿಸುವವರಿಗಿಂತ ಕಾಯುವವರ ಕರ್ಮ ಹೇಳತೀರದು. ಅದೊಂದು ರೀತಿ ನಗು ತಾಳದಷ್ಟು ಕಚಗುಳಿ, ಹೃದಯ ಹಿಂಡುವಷ್ಟು ಕಿರುಕುಳ.

ನನ್ನವಳೇ,
ಪರೀಕ್ಷೆ ಇದೆ, ಓದಬೇಕು ಅನ್ನೋ ಕಾರಣಕ್ಕೆ ನನ್ನಿಂದ ತಾತ್ಕಾಲಿಕ ಅಂತರ ಬಯಸಿದ ನಿನಗೆ ಮೊದಲಿಗೆ- ಆಲ್‌ ದಿ ಬೆಸ್ಟ್‌. ಪರೀಕ್ಷೆಯ ನೆಪವೊಡ್ಡಿ ಪ್ರೀತಿಗೆ ತಿಲಾಂಜಲಿ ಇಡುವ ಬಹುತೇಕ ಹುಡುಗಿಯರ ಮಧ್ಯೆ, ಓದಿನ ಹಂಬಲದ ನಡುವೆಯೂ ಪ್ರೀತಿ ಉಳಿಸಿಕೊಳ್ಳಬೇಕೆಂಬ ನಿನ್ನ ತುಡಿತಕ್ಕೆ ಸಾವಿರ ಶರಣು. ಪರೀಕ್ಷೆ ನಡುವೆಯೂ ನಿನಗೆ ಈ ಪತ್ರ ಬರೆದು ಡಿಸ್ಟರ್ಬ್ ಮಾಡ್ತಿದ್ದೇನೆ, ಸಾರಿ.

ಈ ನಿನ್ನ ಪ್ರೀತಿಯ ರಜೆಯಲ್ಲಿ, ನೆನಪಿನ ಗರ್ಭದಲ್ಲಿ ಹುದುಗಿದ್ದ ಎಲ್ಲ ನೆನಪುಗಳನ್ನೂ ಇಂಚಿಂಚೂ ಬಿಡದೇ ಕೆದಕಿ ಕಣ್ಮುಂದೆ ತಂದು ಸೇಡು ತೀರಿಸಿಕೊಳ್ಳುತ್ತಿದೆ. ನೆತ್ತಿ ಸುಡುವ ಬಿಸಿಲಲ್ಲಿ ನಿನಗೆ ನಾ ನೆರಳಾಗಿದ್ದು, ನಡುಗುವ ಚಳಿಯಲ್ಲಿ ಬೆಚ್ಚನೆಯ ಕಾವಾಗಿದ್ದು, ಮೊನ್ನೆ ಕಾಲೇಜು ಕಾರ್ಯಕ್ರಮದಲ್ಲಿ ನಾನು ಭಾಷಣ ಮಾಡುತ್ತಿದ್ದಾಗ ನಿನ್ನತ್ತ ಕಣ್ಣು ನೆಟ್ಟ ಕೂಡಲೇ ನನ್ನ ಭಾಷಣವನ್ನು ಅರ್ಧಕ್ಕೇ ಮೊಟಕುಗೊಳಿಸಿ ಬಂದು ತಲೆ ಹಿಡಿದು ಕುಳಿತಿದ್ದು, ಅತ್ತಿಂದಿತ್ತ ಬೀಸಿದ ಬಿರುಗಾಳಿಗೆ ನಿನ್ನ ಕೈಯಲ್ಲಿದ್ದ ಕೊಡೆ ಗಾಳಿಪಾಲಾಗಿ ಮೇಲೆ ಹಾರಿದಾಗ ನಿಸ್ಸಹಾಯಕಳಾಗಿ ನಿಂತಿದ್ದ ನಿನಗೆ, ಮಳೆಹನಿ ತಾಗದಂತೆ ಓಡಿ ಬಂದು ನಾನು ಕೊಡೆಯಾಗಿದ್ದು, ಇವೆಲ್ಲ ಈಗ ಕಣ್ಮುಂದೆ ಗಿರಕಿ ಹೊಡೆಯುತ್ತಿವೆ. ಸುರಿದು ತೆರೆಗೆ ಸರಿದ ಮಳೆಗಿಂತ ನಾನೇನೂ ಕಡಿಮೆ ಇಲ್ಲ ಎನ್ನುವಂತೆ, ಎಲೆಯಿಂದ ಚಿಟಪಟ ಉದುರುತ್ತಿರುವ ಹನಿಗಳೂ ನಿನ್ನ ಕಾಲ್ಗೆಜ್ಜೆಯ ನಾದಕ್ಕೆ ಸೆಡ್ಡು ಹೊಡೆಯುತ್ತಿವೆ.

ಈ ವಿಚಿತ್ರ ಚಡಪಡಿಕೆಗೆ ಕಚಗುಳಿ ಎನ್ನಬೇಕೋ, ಕಿರುಕುಳ ಎನ್ನಬೇಕೋ ಅರ್ಥವಾಗುತ್ತಿಲ್ಲ. ಈ ‘ಕಾಯುವಿಕೆ’ಗೂ ಒಂದು ಧೈರ್ಯ ಬೇಕು. ಕಾಯಿಸುವವರಿಗಿಂತ ಕಾಯುವವರ ಕರ್ಮ ಹೇಳತೀರದು. ಅದೊಂದು ರೀತಿ ನಗು ತಾಳದಷ್ಟು ಕಚಗುಳಿ, ಹೃದಯ ಹಿಂಡುವಷ್ಟು ಕಿರುಕುಳ.

ಶುಭಾಶಯ ಹೇಳುವ ನೆಪದಲ್ಲಿ ಪುಟಗಟ್ಟಲೇ ಪುರಾಣ ಗೀಚಿದನೆಂದು ಬೇಸರಿಸಿಕೊಳ್ಳದಿರು ಗೆಳತಿ. ನೀ ಚೆನ್ನಾಗಿ ಪರೀಕ್ಷೆ ಬರೆ. ಪರೀಕ್ಷೆಯ ಮರುಕ್ಷಣವೇ ಭೇಟಿಯಾಗೋಣ. ಬಳಿಕ ಮಡುಗಟ್ಟಿದ ಮೌನ ಕರಗಿ ಮಾತಿನ ಮಳೆ ಸುರಿಯಬೇಕು. ಈ ಮೌನಕ್ಕೊಂದು ತಿಲಾಂಜಲಿ ಇಡಬೇಕು.

ಅಂದಹಾಗೆ, ನಿನ್ನ ಪ್ರೀತಿ ಪರೀಕ್ಷೆಯಲ್ಲಿ ನಾನು ಫೇಲಾಗುವ ಮಾತೇ ಇಲ್ಲ.
ಮತ್ತೂಮ್ಮೆ ಆಲ್‌ ದಿ ಬೆಸ್ಟ್‌…

-ಸೋಮಲಿಂಗಪ್ಪ ಬೆಣ್ಣಿ ಗುಳದಳ್ಳಿ

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.