ವಿರಾಜಪೇಟೆಯಲ್ಲಿ ವಾಹನಗಳ ಸಂಚಾರ ಮಾರ್ಗ ಬದಲು

ವಿರಾಜಪೇಟೆ ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ

Team Udayavani, Sep 10, 2019, 5:51 AM IST

virajpet-city

ಸಾಂದರ್ಭಿಕ ಚಿತ್ರ.

ಮಡಿಕೇರಿ :ವಿರಾಜಪೇಟೆ ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ಗಣೇಶ ವಿಗ್ರಹ ವಿಸರ್ಜನಾ ಮೆರವಣಿಗೆಯ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ವಾಹನಗಳ ಸುಗಮ ಸಂಚಾರದ ದೃಷ್ಟಿಯಿಂದ ಸೆ.12 ರ ಸಂಜೆ 5 ಗಂಟೆಯಿಂದ ಸೆ.13 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ಪಟ್ಟಣದಲ್ಲಿ ವಾಹನಗಳ ಸಂಚಾರವನ್ನು ಬದಲಿಸಿ ಪ್ರಭಾರ ಜಿಲ್ಲಾಧಿಕಾರಿ ಹಾಗು ಜಿಲ್ಲಾ ದಂಡಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.

ತಾತ್ಕಾಲಿಕ ಮಾರ್ಗದ ವಿವರ
ಪೆರುಂಬಾಡಿ ಕಡೆಯಿಂದ ವಿರಾಜಪೇಟೆ ನಗರಕ್ಕೆ ಉತ್ಸವ ವೀಕ್ಷಣೆಗೆ ಬರುವ ವಾಹನಗಳನ್ನು ವಿರಾಜಪೇಟೆ ತಾಲೂಕು ತಹಶೀಲ್ದಾರ್‌ರವರ ಕಚೇರಿಯ ಮುಂಭಾಗದಿಂದ ಆರ್ಜಿ ಕಡೆಗೆ ಹೋಗುವ ರಸ್ತೆಯ ಎಡಭಾಗದಲ್ಲಿ ಬದಿಯಲ್ಲಿ ವಾಹನ ನಿಲ್ಲಿಸುವುದು.

ಕೇರಳದ ಮಾಕುಟ್ಟ ಮಾರ್ಗವಾಗಿ ಗೋಣಿಕೂಪ್ಪದ ಕಡೆ ಅಥವಾ ಸಿದ್ದಾಪುರದ ಕಡೆಗಳಿಗೆ ಹೋಗುವ ವಾಹನಗಳಿಗೆ ಪೆರುಂಬಾಡಿ ಚೆಕ್‌ ಪೋಸ್ಟ್‌ ಬಾಳುಗೋಡು ಬಿಟ್ಟಂಗಾಲ ಜಂಕ್ಷನ್‌ ಕೈಕೇರಿ ಜಂಕ್ಷನ್‌ ಸಿ.ಎಂ.ಪೂಣಚ್ಚನವರ ಮನೆಯ ರಸ್ತೆ ಜಂಕ್ಷನ್‌ ಮಾರ್ಗವಾಗಿ ಪಾಲಿಬೆಟ್ಟ ಸಿದ್ದಾಪುರಕ್ಕೆ ಹೋಗುವುದು.

ಅದೇ ರೀತಿ ಸಿದ್ದಾಪುರ ಕಡೆಯಿಂದ ಕೇರಳದ ಕಡೆ ಹೋಗುವ ವಾಹನಗಳು ಕೈಕೇರಿ ಬಿಟ್ಟಂಗಾಲ ಬಾಳುಗೋಡು ಪೆರುಂಬಾಡಿ ಮಾರ್ಗವಾಗಿ ಕೇರಳದ ಕಡೆ ಹೋಗುವುದು.

ಮಡಿಕೇರಿಯಿಂದ ಕೇರಳದ ಕಡೆ ಹೋಗುವ ವಾಹನಗಳು ಸಿದ್ದಾಪುರ ಪಾಲಿಬೆಟ್ಟ ಕೈಕೇರಿ ಬಿಟ್ಟಂಗಾಲ ಬಾಳುಗೋಡು ಪೆರುಂಬಾಡಿ ಮಾಕುಟ್ಟ ಮಾರ್ಗವಾಗಿ ತೆರಳುವುದು.

ಮಡಿಕೇರಿ ಕಡೆಯಿಂದ ಮೈಸೂರು ಬೆಂಗಳೂರಿಗೆ ಹೋಗುವ ವಾಹನಗಳು ಸಿದ್ದಾಪುರ ಮಾರ್ಗವಾಗಿ ಗೋಣೆಕೊಪ್ಪ ಮೈಸೂರು, ಬೆಂಗಳೂರಿಗೆ ಹೋಗುವುದು.

ಸಿದ್ದಾಪುರ ಕಡೆಯಿಂದ ಮೆರವಣಿಗೆ ನೋಡಲು ವಿರಾಜಪೇಟೆಗೆ ಬರುವ ವಾಹನಗಳು ಮಗ್ಗುಲ ಜಂಕ್ಷನ್‌ (ಡೆಂಟಲ್‌ ಕಾಲೇಜ್‌ ಜಂಕ್ಷನ್‌) ಮತ್ತು ರವಿರಾಜ್‌ ಗ್ಯಾಸ್‌ ಏಜೆನ್ಸಿ ಕಚೇರಿಯಿಂದ ಐಮಂಗಲ ಕಡೆಗೆ ಹೋಗುವ ರಸ್ತೆಯ ಎಡಬದಿಯಲ್ಲಿ ನಿಲ್ಲಿಸತಕ್ಕದ್ದು.

ಗೋಣಿಕೂಪ್ಪ ಕಡೆಯಿಂದ ಮೆರವಣಿಗೆ ನೋಡಲು ಬರುವಂತಹ ವಾಹನಗಳನ್ನು ಪಂಜರುಪೇಟೆಯ ಸವೊದಯ ಕಾಲೇಜಿನ ಬಳಿಯಿಂದ ಕಾವೇರಿ ಕಾಲೇಜು ಕಡೆಗೆ ಎಡಬದಿಯಲ್ಲಿ ಮಾತ್ರ ನಿಲುಗಡೆ ಮಾಡುವುದು.

ಬೇಟೋಳಿ, ಗುಂಡಿಗೆರೆ, ಚಿಟ್ಟಡೆ ಕಡೆಯಿಂದ ಮಹಿಳಾ ಸಮಾಜ ಮಾರ್ಗವಾಗಿ ಮೆರವಣಿಗೆ ನೋಡಲು ಬರುವಂತಹ ವಾಹನಗಳು ತಾಲ್ಲೂಕು ಮೈದಾನದಲ್ಲಿ ಹಾಗೂ ಮಹಿಳಾ ಸಮಾಜ ರಸ್ತೆಯ ಎಡಬದಿಯಲ್ಲಿ ನಿಲುಗಡೆ ಮಾಡಬೇಕು.ಮೈಸೂರು ಬೆಂಗಳೂರು ಕಡೆ ಯಿಂದ ಮಡಿಕೇರಿಗೆ ಹೋಗುವ ವಾಹನಗಳು ಗೋಣಿಕೊಪ್ಪ ಸಿದ್ದಾಪುರ ಮಾರ್ಗವಾಗಿ ಮಡಿಕೇರಿ ಹೋಗುವುದು.ಎಂದು ಜಿಲ್ಲಾ ದಂಡಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ಅವರು ಆದೇಶ ದಲ್ಲಿ ತಿಳಿಸಿದ್ದಾರೆ.

ವಾಹನ ಸಂಚಾರ ನಿಷೇಧ
ಸೆಪ್ಟೆಂಬರ್‌ 12 ರಂದು ಸಂಜೆ 5 ಗಂಟೆಯಿಂದ ಸೆಪ್ಟೆಂಬರ್‌ 13 ರ ಬೆಳಗ್ಗೆ 10 ಗಂಟೆಯವರೆಗೆ ವಿರಾಜಪೇಟೆ ನಗರದ ತೆಲುಗರ ಬೀದಿ, ದೊಡ್ಡಟ್ಟಿ ವೃತ್ತ, ಅಪ್ಪಯ್ಯ ಸ್ವಾಮಿ ರಸ್ತೆ, ದಖನಿ ಮೊಹಲ್ಲಾ ರಸ್ತೆ, ಅರಸು ನಗರ ರಸ್ತೆ, ಎಫ್.ಎಂ.ಸಿ. ರಸ್ತೆ, ಗಡಿಯಾರ ಕಂಬ, ಮಲಬಾರ್‌ ರಸ್ತೆ, ಗೌರಿಕೆರೆ ರಸ್ತೆ, ಮೀನುಪೇಟೆ ರಸ್ತೆಯ ವಿರಾಜಪೇಟೆ ತಾಲೂಕು ತಹಶೀಲ್ದಾರ್‌ರವರ ಕಚೇರಿವರೆಗೆ ಹಾಗೂ ದೊಡ್ಡಟ್ಟಿ ವೃತ್ತದಿಂದ ಪಂಜರುಪೇಟೆ ಸವೊದಯ ಕಾಲೇಜಿನವರೆಗೆ ಹಾಗೂ ಮಗ್ಗುಲ ಜಂಕ್ಷನ್‌ನಿಂದ ದಖನಿ ಮೊಹಲ್ಲಾ ಜಂಕ್ಷನ್‌ವರೆಗೆ ಯಾವುದೇ ವಾಹನಗಳನ್ನು ನಿಲ್ಲಿಸುವುದನ್ನು ನಿಷೇಧಿಸಿದೆ.

ಮೇಲಿನ ಸಂಚಾರ ನಿಯಮಗಳಿಗೆ ಏನಾದರೂ ವ್ಯತ್ಯಾಸ ಅಥವಾ ಮಾರ್ಪಾಡು ಇದ್ದರೆ ಆಯಾಯ ಸ್ಥಳದಲ್ಲಿ ಇರುವ ಪೊಲೀಸರು ನೀಡುವ ನಿರ್ದೇಶನದಂತೆ ನಡೆದುಕೊಳ್ಳಲು ಕೋರಿಕೆ. ಇದರೊಂದಿಗೆ ಸನ್ನಿವೇಶಕ್ಕೆ ತಕ್ಕಂತೆ ಅವಶ್ಯಕತೆ ಇದ್ದರೆ, ಸಣ್ಣ ಪುಟ್ಟ ಮಾರ್ಪಾಡುಗಳನ್ನು ಮಾಡುವ ನಿಬಂಧನೆಗೊಳಪಟ್ಟಿರುತ್ತದೆ.

ವಾಹನ ಸಂಚಾರ ನಿಯಮವು ಸೆಪ್ಟೆಂಬರ್‌ 12 ರ ಸಂಜೆ 5 ಗಂಟೆಯಿಂದ ಸೆಪ್ಟೆಂಬರ್‌ 13 ರ ಬೆಳಗ್ಗೆ 10 ಗಂಟೆಯವರೆಗೆ ಜಾರಿಯಲ್ಲಿದ್ದು, ಆನಂತರ ಎಂದಿನಂತೆ ವಾಹನ ಸಂಚಾರ ವ್ಯವಸ್ಥೆ ಇರುತ್ತದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.