ಪ್ರಧಾನಿ ಮೋದಿಯಿಂದ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ


Team Udayavani, Sep 10, 2019, 3:00 AM IST

pradhami

ಗುಡಿಬಂಡೆ: ದೇಶದಲ್ಲಿ ಪ್ರಧಾನಿಯಾಗಿ ನರೇಂದ್ರ ಮೋದಿ ಅಧಿಕಾರ ಸ್ವೀಕರಿಸಿದಾಗಿನಿಂದ ದೇಶದಲ್ಲಿ ನಿರುದ್ಯೋಗ ಹೆಚ್ಚಾಗುತ್ತಿದೆ ಎಂದು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ನ ಜಿಲ್ಲಾ ಕಾರ್ಯದರ್ಶಿ ಹಳೇಯರ್ರಹಳ್ಳಿ ಮಧು ದೂರಿದರು. ಸೋಮವಾರ ತಾಲೂಕು ಕಚೇರಿ ಮುಂದೆ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಉದ್ಯೋಗ ವಂಚಿತ ಯುವಜನರ ಜೀವನ ನರಕ ಸದೃಶವಾಗಿದೆ.

ಸ್ವಾತಂತ್ರ ಭಾರತದಲ್ಲಿ ನೆಮ್ಮದಿ, ಘನತೆ ಬದುಕು ಸಾಗಿಸಬಲ್ಲ ಉದ್ಯೋಗ ಪಡೆಯುವ ಯುವಜನರ ಕನಸು ಈಡೇರಲೇ ಇಲ್ಲ. ಉದ್ಯೋಗದ ಹಕ್ಕಿಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಲೇ ಬಂದಿದ್ದರೂ ಸರ್ವರಿಗೂ ಉದ್ಯೋಗ ಎಂಬ ಸಂವಿಧಾನದ ಆಶಯ ಜಾರಿಗೆ ತರಲು ನಮ್ಮನ್ನಾಳುವ ಸರ್ಕಾರಗಳು ಗಂಭೀರ ಪ್ರಯತ್ನ ಮಾಡಲೇ ಇಲ್ಲ ಎಂದು ಹೇಳಿದರು.

ನವ ಉದಾರೀಕರಣದ ನೀತಿ ಜಾರಿಗೆ ಬಂದ ನಂತರವಂತೂ ಇರುವ ಉದ್ಯೋಗಗಳನ್ನೂ ಕಸಿದುಕೊಳ್ಳಲಾಗುತ್ತಿದೆ. ಅದರಲ್ಲೂ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಭರವಸೆ ನೀಡಿ ಅಧಿಕಾರಕ್ಕೆ ಬಂದ ಮೋದಿ ಸರ್ಕಾರದ ಅವಧಿಯಲ್ಲಿ ಇರುವ ಉದ್ಯೋಗಗಳೂ ದೊಡ್ಡ ಪ್ರಮಾಣದಲ್ಲಿ ನಷ್ಟಕ್ಕೊಳಗಾಗಿವೆ ಎಂದು ತಿಳಿಸಿದರು.

ಇದಲ್ಲದೆ ಖಾಸಗಿ ಉದ್ದಿಮೆಗಳು ತಮ್ಮ ಕೈಗಾರಿಕೆ, ಉದ್ಯಮಗಳಲ್ಲಿ ಕನ್ನಡಿಗರನ್ನು, ಸ್ಥಳೀಯರನ್ನು ನೇಮಕಾತಿ ಮಾಡಿಕೊಳ್ಳದೆ ಹೊರ ರಾಜ್ಯದ ಕಾರ್ಮಿಕರನ್ನು ಕರೆಸಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಬ್ಯಾಂಕ್‌, ರೈಲ್ವೆಯಂತಹ ಕ್ಷೇತ್ರದಲ್ಲಿ ಹಿಂದಿ ಭಾಷಿಕರೇ ತುಂಬಿಕೊಂಡಿದ್ದಾರೆಂದು ಆಕ್ರೋಶಗೊಂಡರು.

ಲಕ್ಷಾಂತರ ಉದ್ಯೋಗಕ್ಕೆ ಪೆಟ್ಟು: ಡಿವೈಎಫ್‌ಐ ತಾಲೂಕು ಅಧ್ಯಕ್ಷ ಮಾತನಾಡಿ, ರಾಜ್ಯ ಸರ್ಕಾರದ ಅಧೀನದಲ್ಲಿ ಇರುವ ಇಲಾಖೆಗಳಲ್ಲಿ ಸರಿ ಸುಮಾರು 2 ಲಕ್ಷ ಉದ್ಯೋಗ ಖಾಲಿ ಬಿದ್ದಿವೆ. ಕೇಂದ್ರ ಸರ್ಕಾರ, ಸಾರ್ವಜನಿಕ ರಂಗದ ಉದ್ಯಮಗಳಲ್ಲಿಯೂ ಲಕ್ಷಾಂತರ ಉದ್ಯೋಗಗಳು ಖಾಲಿ ಬಿದ್ದಿವೆ. ಹೊಸ ಉದ್ಯೋಗ ಸೃಷ್ಟಿ ಮಾಡಲಾಗದ ಸರ್ಕಾರಗಳು ಖಾಲಿ ಬಿದ್ದಿರುವ ಉದ್ಯೋಗಗಳನ್ನೂ ಭರ್ತಿ ಮಾಡುತ್ತಿಲ್ಲ.

ಬದಲಿಗೆ ಲಕ್ಷಾಂತರ ಉದ್ಯೋಗವನ್ನು ಸೃಷ್ಟಿಸಿರುವ ರೈಲ್ವೆ, ಟೆಲಿಕಾಂ, ಬ್ಯಾಂಕಿಂಗ್‌ ಸತತ ತನ್ನ ಅಧೀನದ ಇಲಾಖೆಗಳ ಉದ್ಯೋಗಗಳನ್ನು ಕಡಿತಗೊಳಿಸುತ್ತಿದೆ. ಮತ್ತೂಂದೆಡೆ ಸರ್ಕಾರಗಳ ತಪ್ಪಾದ ಆರ್ಥಿಕ ನೀತಿಗಳಿಂದಾಗಿ ಖಾಸಗಿ ರಂಗದ ಉದ್ಯಮಗಳು ಲಕ್ಷಗಟ್ಟಲೇ ಸಂಖ್ಯೆಯ ಕಾರ್ಮಿಕರನ್ನು ಹೊರದಬ್ಬುತ್ತಿವೆ ಎಂದು ಹೇಳಿದರು. ಗುತ್ತಿಗೆ, ಹೊರಗುತ್ತಿಗೆ ಪದ್ಧತಿಯಲ್ಲಿ ಅರೆ ಉದ್ಯೋಗ, ಅರೆ ಸಂಬಳ ಪದ್ಧತಿ ಮೂಲಕ ಕಾರ್ಮಿಕರ ಬದುಕನ್ನು ಅತಂತ್ರವಾಗಿಡುತ್ತಿವೆ ಎಂದು ಆರೋಪಿಸಿದರು.

ಬೇಡಿಕೆಗಳು: ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸಬೇಕು, ಸ್ಥಳೀಯರನ್ನೇ ಆದ್ಯತೆಯಲ್ಲಿ ನೇಮಕಾತಿ ಮಾಡಿಕೊಳ್ಳಬೇಕು, ಖಾಲಿ ಬಿದ್ದಿರುವ ಸರ್ಕಾರಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ತಲುಪಿಸುವಂತೆ ತಹಶೀಲ್ದಾರ್‌ ಮುಖಾಂತರ ಮನವಿ ಪತ್ರ ನೀಡಿದರು.

ಮನವಿ ಪತ್ರ ಸ್ವೀಕರಿಸಿದ ತಹಶೀಲ್ದಾರ್‌ ಡಿ.ಹನುಮಂತರಾಯಪ್ಪ ಮನವಿ ಪತ್ರವನ್ನು ಮೇಲಧಿಕಾರಿಗಳಿಗೆ ವರ್ಗಾಯಿಸುತ್ತೇನೆಂದು ತಿಳಿಸಿದರು. ಡಿವೈಎಫ್‌ಐ ತಾಲೂಕು ಉಪಾಧ್ಯಕ್ಷ ಶ್ರೀನಿವಾಸ್‌, ಪದಾಧಿಕಾರಿಗಳಾದ ಶಿವಪ್ಪ, ನವೀನ್‌, ನಾಗರಾಜ್‌, ಆದಿನಾರಾಯಣಸ್ವಾಮಿ, ಆದಿರೆಡ್ಡಿ, ರಾಮಕೃಷ್ಣ ಮತ್ತಿತರರಿದ್ದರು.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.