ನಾವುಂದ – ನಾಡ ಗುಡ್ಡೆಯಂಗಡಿ ರಸ್ತೆ ಸ್ಥಿತಿ ಅಧೋಗತಿ…!

4-5 ಕಿ.ಮೀ. ಉದ್ದದ ರಸ್ತೆಯಲ್ಲಿ 3 ಕಿ.ಮೀ.ವರೆಗಿನ ರಸ್ತೆಯಲ್ಲಿ ಡಾಮರೇ ಮಾಯ; ಹದಗೆಟ್ಟ ರಸ್ತೆ : ವಾಹನ ಸವಾರರ ಪರದಾಟ; 30 ವರ್ಷಗಳ ಹಿಂದೆ ಡಾಮರೀಕರಣ

Team Udayavani, Sep 10, 2019, 5:30 AM IST

0909KDPP1

ನಾಡ - ನಾವುಂದ ರಸ್ತೆಯ ಹಲವೆಡೆ ಹೊಂಡ - ಗುಂಡಿಗಳು.

ಹೆಮ್ಮಾಡಿ: ನಾಡ ಗುಡ್ಡೆಯಂಗಡಿಯಿಂದ ನಾವುಂದ ಸಹಿತ ವಿವಿಧೆಡೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ. ನಾಡ ಗುಡ್ಡೆಯಂಗಡಿ ಪೇಟೆಯಿಂದ ನಾವುಂದಕ್ಕೆ ಸುಮಾರು 5 ಕಿ.ಮೀ. ದೂರವಿದ್ದು, ಈ ಪೈಕಿ ಸುಮಾರು 3 ಕಿ.ಮೀ. ರಸ್ತೆಗೆ ಹಾಕಲಾದ ಡಾಮರೇ ಮಾಯವಾಗಿದೆ. ಈ ಮಾರ್ಗದಲ್ಲಿ ನಿತ್ಯ ಸಂಚರಿಸುವ ವಾಹನ ಸವಾರರು, ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.
ನಾಡ ಗುಡ್ಡೆಯಂಗಡಿಯಿಂದ ನಾವುಂದ, ಬಡಾಕೆರೆ, ಚಿಕ್ಕಳ್ಳಿ, ಕಡೆR, ಕೊಣಿR ಕಡೆಗೆ ಸಂಚರಿಸುವ ಈ ರಸ್ತೆಗೆ ಡಾಮರೀಕರಣವಾಗಿದ್ದು ಬರೋಬ್ಬರಿ ಸುಮಾರು 30 ವರ್ಷಗಳ ಹಿಂದೆ. ಆ ಬಳಿಕ ಈವರೆಗೂ ಮರು ಡಾಮರೀಕರಣವೇ ಆಗಿಲ್ಲ. ಇನ್ನೂ ತೇಪೆ ಕಾರ್ಯ ಆಗಿ 10 ವರ್ಷಗಳೇ ಕಳೆದಿವೆ. ಅಂದರೆ ಈ ರಸ್ತೆಯ ದುಸ್ಥಿತಿ ಹೇಗಿರಬಹುದು ಅನ್ನುವುದು ತಿಳಿಯುತ್ತದೆ.

ದುರಸ್ತಿ ಬಗ್ಗೆ ನಿರ್ಲಕ್ಷ್ಯ
ಸುಮಾರು 500 – 600ಕ್ಕೂ ಅಧಿಕ ಮನೆಗಳ ಜನರು ಈ ನಾಡ – ನಾವುಂದ – ಬಡಾಕೆರೆ ರಸ್ತೆಯನ್ನೇ ಅವಲಂಬಿಸಿದ್ದಾರೆ. ಬೃಹದಾಕಾರದ ಗುಂಡಿಗಳಿದ್ದರೂ, ರಸ್ತೆ ದುರಸ್ತಿ ಅಥವಾ ಮರು ಡಾಮರೀಕರಣ ಮಾಡಲು ಸ್ಥಳೀಯಾಡಳಿತವಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಈವರೆಗೆ ಮುಂದಾಗಿಲ್ಲ. ಈ ರಸ್ತೆಯ ಬಗೆಗಿನ ಆಳುವ ವರ್ಗದ ನಿರ್ಲಕ್ಷ್ಯ ಗ್ರಾಮಸ್ಥರನ್ನು ಹೈರಾಣಾಗಿಸಿದೆ.

ಬಾಡಿಗೆಗೆ ಬರಲು ಹಿಂದೇಟು
ಈ ರಸ್ತೆಯ ದುಃಸ್ಥಿತಿ ಕಂಡು ನಾಡ ಗುಡ್ಡೆಯಂಗಡಿ ಅಥವಾ ನಾವುಂದ ಕಡೆಯಿಂದ ರಿಕ್ಷಾ, ಕಾರು ಹಾಗೂ ಇನ್ನಿತರ ವಾಹನಗಳ ಚಾಲಕರನ್ನು ಬಾಡಿಗೆಗೆ ಇಲ್ಲಿನ ಜನರು ಕರೆದರೆ, ಬರಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ತುರ್ತು ಸಂದರ್ಭ ಅಥವಾ ಅನಾರೋಗ್ಯ ಕಾಣಿಸಿಕೊಂಡಾಗ ತುಂಬಾ ಸಮಸ್ಯೆಯಾಗುತ್ತಿದೆ ಎನ್ನುವುದು ಸ್ಥಳೀಯರೊಬ್ಬರ ಅಳಲು.

ನೂರಾರು ವಿದ್ಯಾರ್ಥಿಗಳು
ಪ್ರತಿನಿತ್ಯ ಇದೇ ರಸ್ತೆಯ ಮೂಲಕ ಶಾಲಾ – ಕಾಲೇಜಿಗೆ ನೂರಾರು ವಿದ್ಯಾರ್ಥಿಗಳು ಹೋಗುತ್ತಾರೆ. ಈ ರಸ್ತೆಯಲ್ಲಿ ಬಸ್‌ ಸಂಚರಿಸುತ್ತಿಲ್ಲ. ಬಸ್‌ ಇರುವಲ್ಲಿವರೆಗೆ ಇದೇ ರಸ್ತೆಯಲ್ಲಿ ಮಕ್ಕಳು ನಡೆದುಕೊಂಡು ಹೋಗುವಾಗ ಹೊಂಡ – ಗುಂಡಿಗಳಲ್ಲಿ ಮಳೆ ನೀರು ನಿಂತು, ವಾಹನ ಸಂಚರಿಸುವಾಗ ಕೆಸರಿನ ಎರಚಾಟದಿಂದ ಬಹಳಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

ಪ್ರತಿಭಟನೆಯೂ ನಡೆದಿತ್ತು…
ಈ ರಸ್ತೆಯನ್ನು ಅಭಿವೃದ್ಧಿಪಡಿಸಿ, ವಾಹನ ಸಂಚಾರಕ್ಕೆ ಸುಗಮಗೊಳಿಸಿಕೊಡಿ ಎಂದು ಆಗ್ರಹಿಸಿ 3 ವರ್ಷಗಳ ಹಿಂದೆ ಗ್ರಾಮಸ್ಥರೆಲ್ಲ ಒಟ್ಟಾಗಿ ಬೃಹತ್‌ ಪ್ರತಿಭಟನೆಯನ್ನು ನಡೆಸಿದ್ದರು. ಆಗ ರಸ್ತೆ ದುರಸ್ತಿ ಮಾಡಿಕೊಡುವ ಭರವಸೆ ನೀಡಿದ ಜನಪ್ರತಿನಿಧಿಗಳು ಮತ್ತೆ ಅತ್ತ ಗಮನವೇ ಕೊಟ್ಟಿಲ್ಲ ಎನ್ನುವುದು ಸ್ಥಳೀಯರಾದ ಕೃಷ್ಣ ಪೂಜಾರಿ ಆರೋಪ.

ಮರು ಡಾಮರು ಕಾಮಗಾರಿಗೆ ಪ್ರಯತ್ನ
ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿಗೆ ಅಲ್ಲಿನ ಶಾಸಕರು, ಸಂಸದರ ಮೂಲಕ ನಮಗೆ ಮನವಿ ಬಂದರೆ ಖಂಡಿತ ಮರು ಡಾಮರೀಕರಣಕ್ಕೆ ಪ್ರಯತ್ನಿಸಲಾಗುವುದು. ಗ್ರಾಮಸ್ಥರು ಅಲ್ಲಿನ ಜನಪ್ರತಿನಿಧಿಗಳ ಮೂಲಕ ಮನವಿ ಸಲ್ಲಿಸಲಿ. ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ದುರ್ಗಾದಾಸ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ಲೋಕೋ ಪಯೋಗಿ ಇಲಾಖೆ ಕುಂದಾಪುರ

ದುರಸ್ತಿ ಬಗ್ಗೆ
ಘೋರ ನಿರ್ಲಕ್ಷ್ಯ
ಹಲವು ವರ್ಷಗಳಿಂದ ಈ ರಸ್ತೆ ಹೀಗೇ ಇದೆ. ಪ್ರತಿ ಬಾರಿ ದುರಸ್ತಿ ಮಾಡಿಕೊಡುತ್ತೇವೆ ಎಂದು ಹೇಳುತ್ತಾರೆ. ಆದರೆ ದುರಸ್ತಿ ಮಾತ್ರ ಇದುವರೆಗೂ ಆಗಿಲ್ಲ. ನೂರಾರು ವಿದ್ಯಾರ್ಥಿಗಳು, ಜನರು ಇದೇ ರಸ್ತೆಯಲ್ಲಿ ನಿತ್ಯ ತೆರಳುತ್ತಾರೆ. ಈ ಬಗ್ಗೆ ಇನ್ನಾದರೂ ಸಂಬಂಧಪಟ್ಟ ಜನಪ್ರತಿನಿಧಿಗಳು ಗಮನಹರಿಸಲಿ.
– ರಾಘವೇಂದ್ರ ಹೆಬ್ಟಾರ್‌ ಚಿಕ್ಕಳ್ಳಿ, ಸ್ಥಳೀಯರು

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.