ಅತಂತ್ರ ಸ್ಥಿತಿಯಲ್ಲಿ ಆಳಸಮುದ್ರ ಮೀನುಗಾರಿಕೆ


Team Udayavani, Sep 10, 2019, 5:42 AM IST

atantra-stiti

ಮಲ್ಪೆ: ಕರಾವಳಿಯ ಜೀವನಾಡಿಯಾಗಿರುವ ಮೀನುಗಾರಿಕೆ ಈ ಬಾರಿ ಋತು ಆರಂಭ‌ದಿಂದಲೇ ಕೈಕೊಟ್ಟಿದೆ. ಹವಾಮಾನ ವೈಪರೀತ್ಯ, ತೂಫಾನಿನಿಂದ ಸ್ಥಗಿತಗೊಂಡಿದೆ. ಕಳೆದ ಋತುವಿನಲ್ಲಿ ಮೀನಿನ ಅಲಭ್ಯತೆಯಿಂದ ಸಾಕಷ್ಟು ನಷ್ಟ ಹೊಂದಿದ್ದ ಮೀನುಗಾರರಲ್ಲಿ ಈ ವರ್ಷ ಪ್ರಾಕೃತಿಕ ವೈಪರೀತ್ಯ ಆತಂಕ ಉಂಟು ಮಾಡಿದೆ.

ಮಳೆ ಮತ್ತು ಗಾಳಿಯಿಂದ ಸಮುದ್ರ ಉಗ್ರ ಸ್ವರೂಪ ತಾಳಿದ್ದು, ಆಳಸಮುದ್ರದಲ್ಲಿ ನೀರಿನ ಸೆಳೆತ ಇರುವ ಕಾರಣ ಮೀನುಗಾರಿಕೆ ಸಾಧ್ಯವಾಗುತ್ತಿಲ್ಲ. ಕೆಲವು ಆಳಸಮುದ್ರ ಬೋಟುಗಳು ನಿಯಂತ್ರಣ ಸಾಧ್ಯವಾಗದೆ ಸಮೀಪದ ಬಂದರು ಸೇರಿವೆ. ಮಲ್ಪೆ ಬಂದರಿನ ಸುಮಾರು 300ರಷ್ಟು ದೋಣಿಗಳು ಕಾರವಾರದ ಬಂದರನ್ನು ಆಶ್ರಯಿಸಿವೆ. ಮಲ್ಪೆಯ ಆಳಸಮುದ್ರ, ಪಸೀìನ್‌, ತ್ರಿ ಸೆವಂಟಿ, ಸಣ್ಣ ಟ್ರಾಲ್‌ ಬೋಟ್‌ ಸೇರಿದಂತೆ ಸುಮಾರು 15 ಸಾವಿರಕ್ಕೂ ಅಧಿಕ ದೋಣಿಗಳು ಬಂದರಿನಲ್ಲೇ ಉಳಿದಿವೆ.

ಆರ್ಥಿಕ ಹೊಡೆತ
ಋತು ಆರಂಭದ ಎರಡು ತಿಂಗಳು ಉತ್ತಮ ಮೀನು ದೊರೆತು ಹೆಚ್ಚು ಲಾಭ ತರುವ ಸಮಯ. ಈ ಹೊತ್ತಿನಲ್ಲೇ ಹವಾಮಾನ ಕೈಕೊಟ್ಟಿರುವುದು ನಿರಾಶೆ ಮೂಡಿಸಿದೆ. ಮೀನುಗಾರಿಕೆ ಉದ್ಯಮದ ಕೋಟ್ಯಂತರ ರೂ. ವ್ಯವಹಾರಕ್ಕೆ ಅಡ್ಡಿಯಾಗಿದ್ದು, ಸರಕಾರದ ಬೊಕ್ಕಸಕ್ಕೂ ನಷ್ಟವಾಗಿದೆ.

ಪ್ರವಾಹದಿಂದ ರೈತಾಪಿ ವರ್ಗಕ್ಕೆ ಉಂಟಾಗಿರುವಷ್ಟೇ ಸಂಕಷ್ಟವನ್ನು ನಾವೂ ಅನುಭವಿಸುತ್ತಿದ್ದೇವೆ ಎನ್ನುತ್ತಾರೆ ಮೀನುಗಾರರು. ಪ್ರಾಕೃತಿಕ ವಿಕೋಪದ ಸಂದರ್ಭ ಇಲ್ಲಿನ ಬೋಟ್‌ಗಳಿಗೆ ಆಶ್ರಯಕ್ಕಾಗಿ ರಾಜ್ಯದ ಇತರ ಬಂದರು ಪ್ರವೇಶಕ್ಕೆ ಅವಕಾಶ ಒದಗಿಸುವಂತೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದವರು ಆಗ್ರಹಿಸಿದ್ದಾರೆ.

ಮೀನು ದುಬಾರಿ
ಬಹುತೇಕ ದೋಣಿಗಳು ಬಂದರಿನಲ್ಲಿ ಲಂಗರು ಹಾಕಿರುವುದರಿಂದ ಮಾರುಕಟ್ಟೆಗೆ ಮೀನುಗಳ ಪೂರೈಕೆ ನಿಂತಿದೆ. ದುಬಾರಿ ಬೆಲೆ ತೆತ್ತು ಖರೀದಿಸಬೇಕಾದ ಸ್ಥಿತಿ ಇದೆ. ಪಾಂಫ್ರೆಟ್‌ ದರ 1,000-1,100 ರೂ., ದೊಡ್ಡ ಬಂಗುಡೆ 3ಕ್ಕೆ 100 ರೂ., ಸಣ್ಣವು 4ಕ್ಕೆ 100 ರೂ., ಬೂತಾಯಿ 10ಕ್ಕೆ 100 ರೂ., ಕಲ್ಲೂರು ಕೆಜಿಗೆ 350, ಏಡಿ ಕೆಜಿಗೆ 250ರಿಂದ 300 ರೂ. ಇದೆ. ಅಂಜಲ್‌ ಮಾರುಕಟ್ಟೆಯಲ್ಲಿ ಇಲ್ಲ. ಮೀನು ಸಿಗದೆ ಮೀನು ಮಾರಾಟ ಮಹಿಳೆಯರ ಜೀವನ ಕಷ್ಟಕರ ವಾಗಿದೆ ಎನ್ನುತ್ತಾರೆ ಹಸಿಮೀನು ಮಾರಾಟಗಾರರ ಸಂಘದ ಅಧ್ಯಕ್ಷೆ ಬೇಬಿ ಎಚ್‌. ಸಾಲ್ಯಾನ್‌.

ಗಾಳಿ ನಿಂತರೆ ಕಡಲಿಗಿಳಿಯಬಹುದು
ಸಮುದ್ರದಲ್ಲಿ ನೀರಿನ ಸೆಳೆತ, ಗಾಳಿಯ ಒತ್ತಡ ಅಧಿಕವಾಗಿರು ವುದರಿಂದ ಬೋಟ್‌ಗಳನ್ನು ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಬಲೆಗಳು ಹಾನಿಗೀಡಾಗುತ್ತವೆ. ಚೌತಿಯ ಅನಂತರವೂ ಹವಾಮಾನ ಸರಿಹೋಗದ ಕಾರಣ ಮೀನುಗಾರಿಕೆ ಸಾಧ್ಯವಾಗುತ್ತಿಲ್ಲ.
– ಗಣೇಶ್‌ ಸುವರ್ಣ, ಅಧ್ಯಕ್ಷರು, ಮಲ್ಪೆ ಟ್ರಾಲ್‌ಬೋಟ್‌ ತಾಂಡೇಲರ ಸಂಘ

ಸಾಲ ಮರುಪಾವತಿಗೆ  ಕಾಲಾವಕಾಶ ನೀಡಬೇಕು
ಹವಾಮಾನದ ವೈಪರೀತ್ಯದಿಂದ ಎಲ್ಲ ವರ್ಗದ ಬೋಟ್‌ಗಳಿಗೆ ಕಡಲಿಗಿಳಿಯಲು ಸಾಧ್ಯವಾಗಿಲ್ಲ. ಶೇ. 20ರಷ್ಟು ಆಳಸಮುದ್ರ ಬೋಟ್‌ಗಳು ತೆರಳಿದ್ದರೂ ವಾಪಸಾಗಿವೆ. ಸರಕಾರ, ಜನ‌ಪ್ರತಿನಿಧಿಗಳು ಮೀನುಗಾರರ ಕಷ್ಟವನ್ನು ಅರಿತು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಇರುವ ಅವರ ಸಾಲದ ಮರುಪಾವತಿಗೆ ಕಾಲಾವಕಾಶ ನೀಡಬೇಕು. ಬಡ ಮೀನುಗಾರರ ಸಣ್ಣ ಮಟ್ಟದ ಸಾಲ ಮನ್ನಾ ಮಾಡುವ ಅನಿವಾರ್ಯತೆ ಇದೆ.
– ಕೃಷ್ಣ ಎಸ್‌. ಸುವರ್ಣ, ಅಧ್ಯಕ್ಷರು ಮೀನುಗಾರರ ಸಂಘ, ಮಲ್ಪೆ

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Road Mishap ಮಣಿಪಾಲ: ಕಾರು ಢಿಕ್ಕಿಯಾಗಿ ಪಾದಚಾರಿ ಸಾವು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Theme Park Karkala ಅವಶೇಷ‌ ತೆರವಿಗೆ ಕೋರ್ಟ್‌ ಆದೇಶ; ಜಿಲ್ಲಾಧಿಕಾರಿ ತಡೆ!

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್‌ ಶೆಟ್ಟಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.