‘ನಾಟಕ ಮಾಡುತ್ತಿದ್ದಾಳೆ’ : ವ್ಹೀಲ್ ಚಯರ್ ಮಹಿಳೆಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಅವಮಾನ


Team Udayavani, Sep 9, 2019, 11:57 PM IST

Virali-Modi-9-9

ನವದೆಹಲಿ: ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೇಂದ್ರೀಯ ಉದ್ಯಮ ಭದ್ರತಾ ದಳ (ಸಿ.ಐ.ಎಸ್.ಎಫ್) ಸಿಬಂದಿಗಳು ಗಾಲಿ ಕುರ್ಚಿ ಅವಲಂಬಿತ ಮಹಿಳೆಯೊಬ್ಬರಿಗೆ ಮಾನಸಿಕ ಕಿರುಕುಳ ನೀಡಿದ ಘಟನೆ ವರದಿಯಾಗಿದೆ.

ಜೀವನಸ್ಪೂರ್ತಿ ಭಾಷಣಕಾರ್ತಿ ಮತ್ತು ವಿಶಿಷ್ಟ ಚೇತನರ ಹಕ್ಕುಗಳ ಹೋರಾಟಗಾರ್ತಿಯಾಗಿರುವ ವಿರಾಲಿ ಮೋದಿ ಎಂಬ ಮಹಿಳೆಯೇ ಸಿ.ಐ.ಎಸ್.ಎಫ್ ಸಿಬಂದಿಗಳ ಕಿರುಕುಳಕ್ಕೊಳಗಾದವರಾಗಿದ್ದಾರೆ.

ವಿರಾಲಿ ಅವರು ದೆಹಲಿಯಿಂದ ಮುಂಬಯಿಗೆ ಪ್ರಯಾಣಿಸುತ್ತಿದ್ದರು. ಈ ಸಂದರ್ಭದಲ್ಲಿ ವಿಮಾನ ನಿಲ್ದಾಣದಲ್ಲಿ ಭದ್ರತೆಗಿದ್ದ ಸಿ.ಐ.ಎಸ್.ಎಫ್ ಅಧಿಕಾರಿಗಳು ವಿರಾಲಿಗೆ ಗಾಲಿ ಕುರ್ಚಿಯಿಂದ ಎದ್ದೇಳುವಂತೆ ತಾಕೀತು ಮಾಡಿದ್ದಾರೆ. ಅದಕ್ಕೆ ಅವರು ನಿರಾಕರಿಸಿದಾಗ ಅವರನ್ನು ನಿಂದಿಸಿದ್ದಾರೆ ಎಂದು ಅವರು ದೂರಿದ್ದಾರೆ.

ಸಿ.ಐ.ಎಸ್.ಎಫ್ ಸಿಬಂದಿಯಲ್ಲಿ ಒಬ್ಬರು ಇನ್ನೊಬ್ಬ ಸಿಬಂದಿಯ ಬಳಿ ‘ಡ್ರಾಮಾ ಕರ್ ರಹೀ ಹೈ’ (ನಾಟಕ ಮಾಡುತ್ತಿದ್ದಾಳೆ) ಎಂದು ಹೇಳುತ್ತಿರುವುದು ಕೇಳಿ ವಿರಾಲಿ ಅವರು ಕಣ್ಣೀರಾದರು. ಬಳಿಕ ವಿರಾಲಿ ಅವರನ್ನು ಗಾಲಿ ಕುರ್ಚಿಯಿಂದ ಎದ್ದೇಳುವಂತೆ ಭದ್ರತಾ ಸಿಬಂದಿಗಳು ತಾಕೀತು ಮಾಡಿದ್ದಾರೆ.

ವಿರಾಲಿ ಮೋದಿ ಅವರು ಕಳೆದ 13 ವರ್ಷಗಳಿಂದ ಗಾಲಿ ಕುರ್ಚಿಯನ್ನು ಅವಲಂಬಿಸಿದ್ದಾರೆ. ಅವರು ಬೆನ್ನುಹುರಿಯ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಮೆರಿಕಾ ಪ್ರಜೆಯಾಗಿರುವ ವಿರಾಲಿ ಅವರು ಹೇಳುವಂತೆ ಆಕೆಗೆ ಇದುವರೆಗೆ ಯಾವ ವಿಮಾನ ನಿಲ್ದಾಣದಲ್ಲಿಯೂ ಇಂತಹ ಅವಮಾನದ ಘಟನೆಗಳು ಆಗಿಲ್ಲವಂತೆ.

ವಿರಾಲಿ ಅವರು ಇಂಧಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆಯೇ ಅಲ್ಲಿಯ ನಿಯಮಗಳ ಪ್ರಕಾರ ಅವರಿದ್ದ ಗಾಲಿ ಕುರ್ಚಿಯನ್ನು ನೀಡುವಂತೆ ಭದ್ರತಾ ಸಿಬಂದಿಗಳು ತಿಳಿಸಿದ್ದಾರೆ. ಬಳಿಕ ಅವರನ್ನು ಪೋರ್ಟರ್ ಒಂದರ ಮೂಲಕ ತಪಾಸಣಾ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಅಲ್ಲಿ ವಿರಾಲಿ ಅವರಿಗೆ ನಿಲ್ಲುವಂತೆ ಭದ್ರತಾ ಸಿಬಂದಿ ತಾಕೀತು ಮಾಡಿದ್ದಾರೆ.

ಈ ರೀತಿ ವಿಮಾನ ನಿಲ್ದಾಣದಲ್ಲಿ ತನಗಾದ ಕಹಿ ಅನುಭವವನ್ನು ವಿರಾಲಿ ಅವರು ತನ್ನ ಫೇಸ್ ಬುಕ್ ಅಕೌಂಟ್ ನಲ್ಲಿ ಬರೆದುಕೊಂಡಿದ್ದಾರೆ ಮತ್ತು ಈ ಕುರಿತಾಗಿ ಸಿ.ಐ.ಎಸ್.ಎಫ್. ಹಿರಿಯ ಅಧಿಕಾರಿಗಳಿಗೆ ವಿರಾಲಿ ಅವರು ಲಿಖಿತ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

MUST WATCH

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

ಹೊಸ ಸೇರ್ಪಡೆ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

1-qweeqw

Kundapura; ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿಯೂ ವಿಧಿವಶ!

1-aaa

Kaup: ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.