ಇಂಜಿನಿಯರ್ ಅಸೋಸಿಯೇಷನ್‌ಗೆ ಸ್ವಂತ ಕಟ್ಟಡ


Team Udayavani, Sep 10, 2019, 2:25 PM IST

cm-tdy-2

ಚಿಕ್ಕಮಗಳೂರು: ಜಿಲ್ಲಾ ಸಿವಿಲ್ ಇಂಜಿನಿಯರ್ ಅಸೋಸಿಯೇಷನ್‌ ಸದಸ್ಯರ ಸಭೆ ನಡೆಯಿತು.

ಚಿಕ್ಕಮಗಳೂರು: ಸಿವಿಲ್ ಇಂಜಿನಿಯರ್ ಅಸೋಸಿಯೇಷನ್‌ಗೆ ವರ್ಷದೊಳಗೆ ನಗರದಲ್ಲಿ ಸ್ವಂತ ಕಟ್ಟಡ ನಿರ್ಮಿಸುವ ಉದ್ದೇಶ ಇದೆ ಎಂದು ನೂತನ ಅಧ್ಯಕ್ಷ ಬಿ.ಎನ್‌. ಮಲ್ಲೇಶ್‌ ನುಡಿದರು.

ಜಿಲ್ಲಾ ಸಿವಿಲ್ ಇಂಜಿನಿಯರ್ ಅಸೋಸಿಯೇಷನ್‌ ಸರ್ವಸದಸ್ಯರ ವಿಶೇಷ ಸಾಮಾನ್ಯ ಸಭೆಯು ಲಯನ್ಸ್‌ ಸೇವಾ ಭವನದಲ್ಲಿ ಸಂಘದ ಅಧ್ಯಕ್ಷ ಬಿ.ಎಸ್‌. ಹರೀಶ್‌ ನೇತೃತ್ವದಲ್ಲಿ ನಡೆಯಿತು. 2019-20ನೇ ಸಾಲಿನ ನೂತನ ಅಧ್ಯಕ್ಷರಾಗಿ ಬಿ.ಎನ್‌. ಮಲ್ಲೇಶ್‌, ಕಾರ್ಯದರ್ಶಿ ಬಿ.ಎಂ. ಪ್ರಕಾಶ್‌ ಮತ್ತು ಖಜಾಂಚಿ ನಂದೀಶ್‌ ತಂಡ ಆಯ್ಕೆಗೊಂಡು ಪ್ರಮಾಣ ವಚನ ಸ್ವೀಕರಿಸಿದರು.

1996ರಲ್ಲಿ ಲವಕುಮಾರ್‌ ಅರಸ್‌ ಪ್ರಯತ್ನದಿಂದ ಪ್ರಾರಂಭಗೊಂಡ ಸಿವಿಲ್ ಇಂಜಿನಿಯರ್ ಸಂಘ ಪ್ರಸ್ತುತ 118 ಸದಸ್ಯರನ್ನು ಹೊಂದಿದೆ. 13ನೇ ಅಧ್ಯಕ್ಷರಾಗಿ ಎಲ್ಲ ಸದಸ್ಯರು ಒಮ್ಮತದಿಂದ ಆಯ್ಕೆ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಮಲ್ಲೇಶ್‌, ಸಂಘಕ್ಕೆ ಸ್ವಂತ ಕಟ್ಟಡದ ಅವಶ್ಯಕತೆ ಹೆಚ್ಚಾಗಿದೆ. ನಗರವ್ಯಾಪ್ತಿಯಲ್ಲಿ ಸಿ.ಎ.ನಿವೇಶನವನ್ನು ಗುರುತಿಸಿ ಶೀಘ್ರದಲ್ಲೇ ಕಟ್ಟಡ ಕೆಲಸ ಆರಂಭಿಸಿ ತಮ್ಮ ವರ್ಷದ ಅವಧಿಯಲ್ಲಿ ನಿರ್ಮಾಣ ಮಾಡುವ ಗುರಿ ಇದೆ ಎಂದರು.

ಹೇಳುವುದಕ್ಕಿಂತ ಮಾಡಿ ತೋರಿಸುವುದು ಮುಖ್ಯ ಎಂಬುದು ಸರ್‌.ಎಂ.ವಿಶ್ವೇಶ್ವರಯ್ಯ ಅವರ ಮಾತಾಗಿತ್ತು. ಸಂಘ ನನಗೇನು ಮಾಡಿತು ಎನ್ನುವುದಕ್ಕಿಂತ ನಾನು ಸಂಘಕ್ಕೇನು ಕೊಡುಗೆ ನೀಡಿದೆ ಎಂದು ಆಲೋಚಿಸಿದಾಗ ಸಂಘದ ಬೆಳವಣಿಗೆಯಾಗುತ್ತದೆ. ಸಂಘದ ನೂತನ ಕಟ್ಟಡಕ್ಕೆ ಬೇಕಾದ ಜಲ್ಲಿ, ಮರಳು, ಕಲ್ಲನ್ನು ಉಚಿತವಾಗಿ ಕೊಡುವುದಾಗಿ ಭರವಸೆಯಿತ್ತ ಅವರು, ಎಲ್ಲ ಸದಸ್ಯರ ಸಹಕಾರ ಪಡೆದು ಕಾರ್ಯನಿರ್ವಹಿಸುವ ಆಶಯವಿದೆ. ಸಂಘದ ರಥವನ್ನು ಮುನ್ನಡೆಸಲು ಎಲ್ಲ ಪದಾಧಿಕಾರಿಗಳು, ಸದಸ್ಯರು ಹಾಗೂ ಎಲ್ಲ ಕುಟುಂಬವರ್ಗ ಕೈಜೋಡಿಸಬೇಕೆಂದು ಕೋರಿದರು.

ನಿರ್ಗಮಿತ ಅಧ್ಯಕ್ಷ ಬಿ.ಎಸ್‌.ಹರೀಶ್‌ ಮಾತನಾಡಿ, ವರ್ಷದ ಅವಧಿಯಲ್ಲಿ ವಿವಿಧ ಪ್ರವಾಸಗಳನ್ನು ಕುಟುಂಬದ ಸದಸ್ಯರೊಂದಿಗೆ ಆಯೋಜಿಸಿದ್ದರಿಂದ ಸಂಘದ ಕಾರ್ಯ ಚಟುವಟಿಕೆಗಳಿಗೆ ಹೆಚ್ಚಿನ ಬೆಂಬಲ ವ್ಯಕ್ತವಾಗಿದೆ. ಮೂಡಿಗೆರೆ ತಾಲೂಕಿನ ನೆರೆಸಂತ್ರಸ್ತರಿಗೆ 1.3ಲಕ್ಷ ರೂ.ಗಳ ನೆರವು, ಪಾಲಿಟೆಕ್ನಿಕ್‌ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶುದ್ಧಕುಡಿಯುವ ನೀರಿನ ಘಟಕ, ಅರ್ಥಪೂರ್ಣ ಇಂಜಿನಿಯರ್‌ ದಿನಾಚರಣೆ ಸ್ಮರಣೀಯ ಕಾರ್ಯಕ್ರಮವಾಗುತ್ತದೆ ಎಂದರು.

ಮಾಜಿ ಅಧ್ಯಕ್ಷ ಎಂ.ಎಸ್‌. ಮಹೇಶ್‌ ಮಾತನಾಡಿ, ಸಿಡಿಎ ಮತ್ತು ನಗರಸಭೆಯ ತೊಂದರೆ ನಿವಾರಣೆಗಾಗಿ ಏಳೆಚಿಟು ಜನರಿಂದ ಆರಂಭವಾದ ಸಂಘ ಇಂದು ವಿಶಾಲವಾಗಿ, ಸದೃಢವಾಗಿ ಬೆಳೆಯಲು ಹಲವರ ಪರಿಶ್ರಮ ಕಾರಣವಾಗಿದೆ. ಬದಲಾವಣೆ ಜಗದ ನಿಯಮ. ಪ್ರತಿವರ್ಷ ಹೊಸ ಅಧ್ಯಕ್ಷರ ನೇತೃತ್ವದ ಸಮಿತಿ ಕಾರ್ಯನಿರ್ವಹಿಸುತ್ತಿರುವುದರಿಂದ ಸಂಘ ಹೆಚ್ಚು ಕ್ರಿಯಾಶೀಲವಾಗಿದೆ ಎಂದರು.

ಕಾರ್ಯದರ್ಶಿ ವರದಿಯನ್ನು ಬಿ.ಕೆ.ಗುರುಮೂರ್ತಿ ಪಿಪಿಟಿಯೊಂದಿಗೆ ಮಂಡಿಸಿದರು. ಖಜಾಂಚಿ ಜಿ.ಎಸ್‌. ಶಶಿಧರ್‌ ಲೆಕ್ಕಪತ್ರ ಮಂಡಿಸಿದ್ದು, ಮಹಾಸಭೆ ಅನುಮೋದನೆ ನೀಡಿತು. ಇಂಜಿನಿಯರ್‌ ಎಂ.ಎ.ನಾಗೇಂದ್ರ ಚೀನಾ ಪ್ರವಾಸದ ಅನುಭವ ಹಂಚಿಕೊಂಡರು. ಮಾಜಿ ಅಧ್ಯಕ್ಷ ಎನ್‌.ಎಸ್‌. ನಾಗೇಂದ್ರ ನೂತನ ತಂಡಕ್ಕೆ ಪ್ರಮಾಣ ವಚನ ಬೋಧಿಸಿದರು. ಇಂಜಿನಿಯರ್‌ಗಳಾದ ಲಿಂಗರಾಜು ಸ್ವಾಗತಿಸಿದರು. ಕಾರ್ಯದರ್ಶಿ ಬಿ.ಎಂ.ಪ್ರಕಾಶ್‌ ವಂದಿಸಿದರು.

ಟಾಪ್ ನ್ಯೂಸ್

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mudigere

Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.